ಜೆಡಿಎಸ್ ಹಣದಿಂದ ರಾಜಕೀಯ ಮಾಡ್ತಿಲ್ಲ, ಹಣಕ್ಕಿಂತ ಜನ ಮುಖ್ಯ: ದೇವೇಗೌಡ


Team Udayavani, Dec 2, 2022, 2:39 PM IST

ಜೆಡಿಎಸ್ ಹಣದಿಂದ ರಾಜಕೀಯ ಮಾಡ್ತಿಲ್ಲ, ಹಣಕ್ಕಿಂತ ಜನ ಮುಖ್ಯ: ದೇವೇಗೌಡ

ಕಲಬುರಗಿ: ನಾನಾಗಲಿ, ಕುಮಾರಸ್ವಾಮಿ ಅವರಾಗಲಿ ದುಡ್ಡು ನೋಡಿ ರಾಜಕೀಯ ಮಾಡಿಲ್ಲ. ಹಾಗೆ ಮಾಡೋ ಹಾಗಿದ್ದರೆ ಪಂಚರತ್ನ ಯಾತ್ರೆ ನಡೆಯುತ್ತಿತ್ತೇ? ಜನತಾ ಜಲಧಾರೆ ಜನರಿಂದ ನಡೆಯುತ್ತಿದೆ, ಹಣದಿಂದಲ್ಲ. ಹಣದಿಂದ ರಾಜಕೀಯ ಮಾಡುವ ಅವಶ್ಯಕತೆ ನಮಗಿಲ್ಲ. ಹಣಕ್ಕಿಂತ ಜನ ಮುಖ್ಯ ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಹಣದಿಂದ ಉಳಿದಿಲ್ಲ. ಜನರಿಂದ ಉಳಿದಿದೆ. ಹಣದಿಂದ ನಡೆಯುತ್ತಿದ್ದರೆ, ಪಂಚರತ್ನ, ಜನತಾ ಜಲಧಾರೆ ಸೇರಿದಂತೆ ಇತರೆ ಚಟುವಟಿಕೆಗಳನ್ನು ವರ್ಷಾನುಗಟ್ಟಲೇ ನಡೆಸಲು ಸಾಧ್ಯವಿಲ್ಲ ಯಾರನ್ನು ಹಣ ಕೊಟ್ಟು ಕರೆಯಿಸುತ್ತಿಲ್ಲ ಎಂದ ಅವರು, ವಿರೋಧ ಪಕ್ಷಗಳಿಗೆ ಆರೋಪ ಮಾಡಲಿಕ್ಕೆ ಏನು ಇಲ್ಲ ಇದರಿಂದಾಗಿ ಅವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದರು.

ಕಳೆದ ಬಾರಿ ಜನತಾದಳ ಅಧಿಕಾರದಲ್ಲಿದ್ದಾಗ ರೈತರ 25 ಸಾವಿರ ಕೋಟಿ ರೂ.ಗಳನ್ನು ಮನ್ನಾ ಮಾಡಿದ್ದು ಜನ ಮತ್ತು ರೈತರ ಹಿತಕ್ಕಾಗಿ ಹಣಕ್ಕಾಗಿ ಅಲ್ಲ ಎಂದು ಸ್ಪಷ್ಟ ಪಡಿಸಿದರು.

ಇದನ್ನೂ ಓದಿ;ಇದು ಪ್ರಧಾನಿ ಮೋದಿಯವರ “ಅತಿದೊಡ್ಡ ಮತ್ತು ಸುದೀರ್ಘ” ರೋಡ್‌ಶೋ

ಬಿಜೆಪಿಯಲ್ಲಿ ರೌಡಿಗಳನ್ನು ಕಾರ್ಯಕತರನ್ನಾಗಿ ಸೇರಿಸಿಕೊಳ್ಳಲಾಗುತ್ತಿಯಲ್ಲಾ ಎಂದು ಕೇಳಿದ ಪ್ರಶ್ನೆಗೆ, ತುಸು ಸಿಡಿಮಿಡಿಗೊಂಡ ಅವರು, ರೌಡಿ ರಾಜಕೀಯ ಕುರಿತು ನನಗೆ ಕೇಳಬೇಡಿ. ಯಾರೂ ಸೇರಿಸಿಕೊಳ್ಳುತ್ತಿದ್ದಾರೋ ಅವರನ್ನೇ ಕೇಳಿ ಎಂದರು.

ಗಡಿ ವಿವಾದ ನಿಲುವು ಬದಲಿಲ್ಲ: ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ವಿಚಾರದಲ್ಲಿ ಜೆಡಿಎಸ್ ಹಿಂದೆ ಆಗಿರುವ ತೀರ್ಮಾನವನ್ನೇ ಬೆಂಬಲಿಸುತ್ತದೆ. ಸರಕಾರ ತನ್ನ ನಿರ್ಧಾರವನ್ನು ಬದಲಿಸುವ ಅಗತ್ಯವಿಲ್ಲ ನಾವು ಅದೇ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದ ಅವರು, ವಿನಾಕಾರಣ ವಿವಾದಗಳನ್ನು ಚುನಾವಣೆ ಮುನ್ನ ಹುಟ್ಟು ಹಾಕುವುದು ಸರಿಯಲ್ಲ ಎಂದರು.

ಮೊಮ್ಮಕ್ಕಳು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸದೆ ಮುನ್ನಡೆದರು.

ಈ ವೇಳೆಯಲ್ಲಿ ಅನಿತಾ ಕುಮಾರಸ್ವಾಮಿ, ನಜೀರ್ ಸೇರಿದಂತೆ ಪಕ್ಷದ ಹಲವು ಮುಖಂಡರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.