![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 2, 2022, 2:39 PM IST
ಕಲಬುರಗಿ: ನಾನಾಗಲಿ, ಕುಮಾರಸ್ವಾಮಿ ಅವರಾಗಲಿ ದುಡ್ಡು ನೋಡಿ ರಾಜಕೀಯ ಮಾಡಿಲ್ಲ. ಹಾಗೆ ಮಾಡೋ ಹಾಗಿದ್ದರೆ ಪಂಚರತ್ನ ಯಾತ್ರೆ ನಡೆಯುತ್ತಿತ್ತೇ? ಜನತಾ ಜಲಧಾರೆ ಜನರಿಂದ ನಡೆಯುತ್ತಿದೆ, ಹಣದಿಂದಲ್ಲ. ಹಣದಿಂದ ರಾಜಕೀಯ ಮಾಡುವ ಅವಶ್ಯಕತೆ ನಮಗಿಲ್ಲ. ಹಣಕ್ಕಿಂತ ಜನ ಮುಖ್ಯ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಣದಿಂದ ಉಳಿದಿಲ್ಲ. ಜನರಿಂದ ಉಳಿದಿದೆ. ಹಣದಿಂದ ನಡೆಯುತ್ತಿದ್ದರೆ, ಪಂಚರತ್ನ, ಜನತಾ ಜಲಧಾರೆ ಸೇರಿದಂತೆ ಇತರೆ ಚಟುವಟಿಕೆಗಳನ್ನು ವರ್ಷಾನುಗಟ್ಟಲೇ ನಡೆಸಲು ಸಾಧ್ಯವಿಲ್ಲ ಯಾರನ್ನು ಹಣ ಕೊಟ್ಟು ಕರೆಯಿಸುತ್ತಿಲ್ಲ ಎಂದ ಅವರು, ವಿರೋಧ ಪಕ್ಷಗಳಿಗೆ ಆರೋಪ ಮಾಡಲಿಕ್ಕೆ ಏನು ಇಲ್ಲ ಇದರಿಂದಾಗಿ ಅವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದರು.
ಕಳೆದ ಬಾರಿ ಜನತಾದಳ ಅಧಿಕಾರದಲ್ಲಿದ್ದಾಗ ರೈತರ 25 ಸಾವಿರ ಕೋಟಿ ರೂ.ಗಳನ್ನು ಮನ್ನಾ ಮಾಡಿದ್ದು ಜನ ಮತ್ತು ರೈತರ ಹಿತಕ್ಕಾಗಿ ಹಣಕ್ಕಾಗಿ ಅಲ್ಲ ಎಂದು ಸ್ಪಷ್ಟ ಪಡಿಸಿದರು.
ಇದನ್ನೂ ಓದಿ;ಇದು ಪ್ರಧಾನಿ ಮೋದಿಯವರ “ಅತಿದೊಡ್ಡ ಮತ್ತು ಸುದೀರ್ಘ” ರೋಡ್ಶೋ
ಬಿಜೆಪಿಯಲ್ಲಿ ರೌಡಿಗಳನ್ನು ಕಾರ್ಯಕತರನ್ನಾಗಿ ಸೇರಿಸಿಕೊಳ್ಳಲಾಗುತ್ತಿಯಲ್ಲಾ ಎಂದು ಕೇಳಿದ ಪ್ರಶ್ನೆಗೆ, ತುಸು ಸಿಡಿಮಿಡಿಗೊಂಡ ಅವರು, ರೌಡಿ ರಾಜಕೀಯ ಕುರಿತು ನನಗೆ ಕೇಳಬೇಡಿ. ಯಾರೂ ಸೇರಿಸಿಕೊಳ್ಳುತ್ತಿದ್ದಾರೋ ಅವರನ್ನೇ ಕೇಳಿ ಎಂದರು.
ಗಡಿ ವಿವಾದ ನಿಲುವು ಬದಲಿಲ್ಲ: ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ವಿಚಾರದಲ್ಲಿ ಜೆಡಿಎಸ್ ಹಿಂದೆ ಆಗಿರುವ ತೀರ್ಮಾನವನ್ನೇ ಬೆಂಬಲಿಸುತ್ತದೆ. ಸರಕಾರ ತನ್ನ ನಿರ್ಧಾರವನ್ನು ಬದಲಿಸುವ ಅಗತ್ಯವಿಲ್ಲ ನಾವು ಅದೇ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದ ಅವರು, ವಿನಾಕಾರಣ ವಿವಾದಗಳನ್ನು ಚುನಾವಣೆ ಮುನ್ನ ಹುಟ್ಟು ಹಾಕುವುದು ಸರಿಯಲ್ಲ ಎಂದರು.
ಮೊಮ್ಮಕ್ಕಳು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸದೆ ಮುನ್ನಡೆದರು.
ಈ ವೇಳೆಯಲ್ಲಿ ಅನಿತಾ ಕುಮಾರಸ್ವಾಮಿ, ನಜೀರ್ ಸೇರಿದಂತೆ ಪಕ್ಷದ ಹಲವು ಮುಖಂಡರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.