ಚೆಟ್ಟಿನಾಡ ಕಂಪನಿ ಧೋರಣೆ ಖಂಡಿಸಿ ಜೆಡಿಎಸ್‌ ಧರಣಿ


Team Udayavani, Jul 16, 2021, 9:00 PM IST

fಗ್​ದಹಗಹಗಗಬವಬ

ಚಿಂಚೋಳಿ: ಚೆಟ್ಟಿನಾಡ್‌ ಸಿಮೆಂಟ್‌ ಕಂಪನಿ ಉದ್ಯೋಗ ನೀಡುವಲ್ಲಿ ಅನ್ಯ ರಾಜ್ಯದವರಿಗೆ ಮಣೆ ಹಾಕಿ, ಸ್ಥಳೀಯ ನಿರುದ್ಯೋಗಿ ಯುವ ಜನತೆಯನ್ನು ಕಡೆಗಣಿಸುತ್ತಿದೆ ಎಂದು ಜೆಡಿಎಸ್‌ ಮುಖಂಡ ಸಂಜೀವನ್‌ ಯಾಕಾಪುರ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನ ಕಲ್ಲೂರ ಗ್ರಾಮದ ಬಳಿ ಇರುವ ಚೆಟ್ಟಿನಾಡ ಸಿಮೆಂಟ್‌ ಕಂಪನಿ ಎದುರು ಜೆಡಿಎಸ್‌ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕಳೆದ 13 ವರ್ಷದ ಹಿಂದೆ ಚೆಟ್ಟಿನಾಡ ಸಿಮೆಂಟ್‌ ಕಂಪನಿ ಸ್ಥಾಪನೆಯಾಗುವ ಪೂರ್ವದಲ್ಲಿ ಕಡಿಮೆ ದರದಲ್ಲಿ ಭೂಮಿ ಖರೀದಿಸಿ, ರೈತ ಕುಟುಂಬಗಳಿಗೆ ಉದ್ಯೋಗ ನೀಡುವ ಭರವಸೆ ನೀಡಿ, ಈಗ ಆ ಭರವಸೆಯನ್ನು ಈಡೇರಿಸಿಲ್ಲ. ಈ ಕುರಿತು ಜಮೀನು ನೀಡಿದ ಕುಟುಂಬಗಳು ಕಂಪನಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ಇಂಜಿನಿಯರಿಂಗ್‌, ಐಟಿಐ, ಡಿಪ್ಲೋಮಾ, ಪದವಿ ಪಡೆದ ಅನೇಕ ಯುವಕ-ಯುವತಿಯರು ಇದ್ದಾರೆ. ಇವರಿಗೆ ಉದ್ಯೋಗ ನೀಡುವಲ್ಲಿ ಕಂಪನಿ ಆಸಕ್ತಿ ತೋರುತ್ತಿಲ್ಲ. ಅಲ್ಲದೇ ಸರೋಜಿನಿ ಮಹಿಷಿ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಆಪಾದಿಸಿದರು. ಕಂಪನಿಗೆ ಜಮೀನು ನೀಡಿದ ರೈತರ ಕುಟುಂಬದವರಲ್ಲಿನ ಮಕ್ಕಳಿಗೆ ಶಿಕ್ಷಣ ಕೊಡಲು ಶಾಲೆಯನ್ನೂ ಪ್ರಾರಂಭಿಸಿಲ್ಲ. ಅಲ್ಲದೇ ಕೆಲವು ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ಕಂಪನಿಯ ಧೂಳಿನಿಂದ ಪ್ರತಿವರ್ಷ ಹಾಳಾಗುತ್ತಿವೆ. ಇದಕ್ಕೆ ಪರಿಹಾರ ಒದಗಿಸುವಲ್ಲಿಯೂ ಕಂಪನಿ ಹಿಂದೇಟು ಹಾಕುತ್ತಿದೆ ಎಂದು ದೂರಿದರು. ತಾಲೂಕು ಜೆಡಿಎಸ್‌ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ ಮಾತನಾಡಿ, ಚೆಟ್ಟಿನಾಡ ಸಿಮೆಂಟ್‌ ಕಂಪನಿಯಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ಹಚ್ಚಿ, ಕಡಿಮೆ ಸಂಬಳ ನೀಡಲಾಗುತ್ತಿದೆ.

ಈ ತಾರತಮ್ಯ ತೊಲಗಬೇಕು. ಅಲ್ಲದೇ ಸ್ಥಳೀಯರಿಗೆ ನೇಮಕಾತಿಯಲ್ಲಿ ಶೇ 75., ಅನ್ಯರಾಜ್ಯಗಳ ಜನರಿಗೆ ಶೇ. 25 ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು. ಕಲ್ಲೂರ ಗ್ರಾಮದ ಯುವ ಮುಖಂಡ ಅಂಜನಪ್ಪ ಪೂಜಾರಿ ಮಾತನಾಡಿ, ಕಂಪನಿಯವರು ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು. ವಿಷ್ಣುರಾವ್‌ ಮೂಲಗೆ, ಜಗದೀಶ ನಾಯಕ, ಹಣಮಂತ ಪೂಜಾರಿ, ಎಸ್‌.ಕೆ. ಮುಕ್ತಾರ, ಚಂದ್ರಕಾಂತ ಸಾಸರಗಾಂವ, ಸೂರಿ, ರಾಹುಲ್‌ ಯಾಕಾಪುರ, ನಾಗೇಂದ್ರ ಗುರಂಪಳ್ಳಿ, ಬಸವರಾಜ ಸಿರಸಿ, ಹೇಮಂತ, ಸನ್ನಿ ಮತ್ತಿತರರು ಪಾಲ್ಗೊಂಡಿದ್ದರು.

ಜೆಡಿಎಸ್‌ ಮುಖಂಡ ಸಂಜೀವನ್‌ ಯಾಕಾಪುರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೇಡಂ ಸಹಾಯಕ ಆಯುಕ್ತ ಕಚೇರಿ ಗ್ರೇಡ್‌-2 ತಹಶೀಲ್ದಾರ್‌ ಸಿದ್ರಾಮಪ್ಪ ನಾಚವಾರ, ಕಂಪನಿ ಪ್ರಧಾನ ಕಾರ್ಯದರ್ಶಿ (ಜಿಮ್‌) ಶೇಖರಬಾಬುಗೆ ಮನವಿ ಸಲ್ಲಿಸಿದರು. ಸಿಪಿಐ ಮಹಾಂತೇಶ ಪಾಟೀಲ, ಮಿರಿಯಾಣ ಪಿಎಸ್‌ಐ ಸಂತೋಷ ರಾಠೊಡ, ಚಿಂಚೋಳಿ ಪಿಎಸ್‌ಐ ಎ.ಎಸ್‌. ಪಟೇಲ್‌ ಸೂಕ್ತ ಬಂದೋಬಸ್ತ್ ಮಾಡಿದ್ದರು. ಪಾದಯಾತ್ರೆ: ಇದಕ್ಕೂ ಮುನ್ನ ಕಲ್ಲೂರ ಗ್ರಾಮದ ಆರಾಧ್ಯ ದೇವ ವೀರಭದ್ರೇಶ್ವರ ದೇವಾಲಯದಿಂದ ಚೆಟ್ಟಿನಾಡ ಸಿಮೆಂಟ ಕಂಪನಿ ವರೆಗೆ 2 ಕಿ.ಮೀ ಪಾದಯಾತ್ರೆ ಕೈಗೊಳ್ಳಲಾಯಿತು. ಕಲ್ಲೂರ, ಮಿರಿಯಾಣ, ಭಕ್ತಂಪಳ್ಳಿ, ಚಿಂಚೋಳಿ, ಚಿಮ್ಮನಚೋಡ, ಗಂಗನಪಳ್ಳಿ ಇನ್ನಿತರ ಗ್ರಾಮಗಳ ಜೆಡಿಎಸ್‌ ಕಾರ್ಯಕರ್ತರು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.