![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 26, 2020, 5:41 PM IST
ಕಲಬುರಗಿ: ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಸೆ.27ರಂದು ನಡೆಯಲಿದ್ದು, ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯ ಆವರಣ ಸೇರಿದಂತೆ ನಗರದಲ್ಲಿ 15 ಉಪಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ.
41 ವಿಷಯಗಳಿಗಾಗಿ ಕೆ-ಸೆಟ್ ಪರೀಕ್ಷೆ ನಡೆಯಲಿದೆ. ಒಟ್ಟು 12,361 ವಿದ್ಯಾರ್ಥಿಗಳು ಗುಲಬರ್ಗಾ ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಗುವಿವಿ ಆವರಣ ಹಾಗೂ ಸರ್ಕಾರಿ ಪದವಿ ಮಹಾವಿದ್ಯಾಲಯ, ನೂತನ ಪದವಿ ಮಹಾವಿದ್ಯಾಲಯ, ವ್ಹಿ.ಜಿ. ಮಹಿಳಾ ಮಹಾವಿದ್ಯಾಲಯ, ಎಂ.ಎಸ್.ಐ. ಮಹಾವಿದ್ಯಾಲಯ, ಎಸ್.ಬಿ. ವಿಜ್ಞಾನ ಮಹಾವಿದ್ಯಾಲಯ, ಕಲಾ ಮಹಾವಿದ್ಯಾಲಯ, ವಾಣಿಜ್ಯಮಹಾವಿದ್ಯಾಲಯ, ಎಸ್.ಬಿ. ಶಿಕ್ಷಣ ಸಂಸ್ಥೆ, ಗೋದುತಾಯಿ ಇಂಜಿನಿಯರಿಂಗ್ ಕಾಲೇಜು, ಎನ್.ವಿ. ಮಹಾವಿದ್ಯಾಲಯ, ಪಿ.ಡಿ.ಎ ಇಂಜಿನಿಯರಿಂಗ್, ರೇಶ್ಮಿ ಮಹಾವಿದ್ಯಾಲಯ, ಡಾ| ಅಂಬೇಡ್ಕರ್ ಮಹಾವಿದ್ಯಾಲಯ, ಪಿಪ್ಲೊ ಹೋಮಿ ಇರಾನಿ ಮಹಾವಿದ್ಯಾಲಯವನ್ನು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದೆ ಎಂದು ನೋಡಲ್ ಅಧಿಕಾರಿ ಪ್ರೋ| ಚಂದ್ರಕಾಂತ ಕೆಳಮನಿ ಆರ್. ತಿಳಿಸಿದ್ದಾರೆ.
ಪ್ರಥಮ ಮತ್ತು ದ್ವಿತೀಯ ಪತ್ರಿಕೆ 9.30ರಿಂದ ಮಧ್ಯಾಹ್ನ 1.00ಗಂಟೆ ವರೆಗೆ ನಡೆಯಲಿದೆ. ಇದು ಬಹು ಆಯ್ಕೆಯಿಂದ ಕೂಡಿರುತ್ತದೆ. ವಿದ್ಯಾರ್ಥಿಗಳು ತಮ್ಮ ನಿಖರವಾದ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೊಠಡಿಗಳ ಮಾಹಿತಿಗಾಗಿ www.gugu.ac.in, http//kset.uni_mysore.ac.in ವೆಬ್ಸೈಟ್ ಅಥವಾ ಇದಲ್ಲದೇ ವಿಶೇಷವಾಗಿ ಗುಲಬರ್ಗಾ ವಿಶ್ವವಿದ್ಯಾಲಯವು ಅಭ್ಯರ್ಥಿಗಳಿಗಾಗಿ kset.gukonline.in ವೆಬ್ಸೈಟ್ ರೂಪಿಸಿದ್ದು, ಇಲ್ಲಿ ಕೂಡ ಉಪಕೇಂದ್ರ ಹಾಗೂ ಬ್ಲಾಕ್ ನಂಬರ್ನ ಮಾಹಿತಿ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ. ಎಲ್ಲ ಅಭ್ಯರ್ಥಿಗಳು ಬೆಳಿಗ್ಗೆ 8 ಗಂಟೆಗೆ ಪರೀಕ್ಷೆ ಕೇಂದ್ರದಲ್ಲಿ ಹಾಜರಾಗುವುದರ ಜತೆಗೆ ಕಡ್ಡಾಯವಾಗಿ ಮುಖ ಕವಚ (ಫೇಸ್ ಮಾಸ್ಕ್) ಮತ್ತು ಪರೀಕ್ಷೆಯ ಪ್ರವೇಶ ಪತ್ರವನ್ನು ತರಬೇಕು. ಯಾವುದೇ ಕಾರಣದಿಂದ ಪರೀಕ್ಷಾ ಪ್ರವೇಶ ಪತ್ರ ಇರದ ಪಕ್ಷದಲ್ಲಿ ಅಭ್ಯರ್ಥಿಗಳು ತಾವು ಅರ್ಜಿ ಶುಲ್ಕ ಸಂದಾಯ ಮಾಡಿದ ರಶೀದಿ ವಿಳಾಸದ ದೃಢೀಕರಣ ಹಾಗೂ ಪಾಸ್ ಪೋರ್ಟ್ನ ಭಾವಚಿತ್ರ ಲಗತ್ತಿಸಿದ ಗುರುತಿನ ಚೀಟಿ ಹಾಗೂ ಸೂಕ್ತ ಕಾರಣಗಳೊಂದಿಗೆ ನೋಡಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಬೇಕು. ದಾಖಲಾತಿ ಮನದಟ್ಟಾದ ನಂತರ ಪರೀಕ್ಷೆ ಪ್ರವೇಶ ಪತ್ರ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.