Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


Team Udayavani, Apr 29, 2024, 5:26 PM IST

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಕಲಬುರಗಿ: ಸೋಲಿನ ಭೀತಿಯಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲೇ ಠಿಕಾಣಿ ಹೂಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಂಸದ ಡಾ. ಉಮೇಶ ಜಾಧವ್ ಆರೋಪಿಸಿದರು.‌

ಪಕ್ಷದ ನೂತನ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖರ್ಗೆ ಈಗಾಗಲೇ ಮೂರು ಸಲ ಬಂದಿದ್ದಲ್ಲದೇ ಇನ್ನೂ ಎರಡ್ಮೂರು ಸಲ‌ ಬರುತ್ತಾರಂತೆ.‌ ಸೋಲಿನ ಭೀತಿಯಿಂದ ಹಾಗೂ ಹೇಗಾದರೂ ಮಾಡಿ ಈ ಸಲ ಅಳಿಯನನ್ನು ಗೆಲ್ಲಿಸಲೇಬೇಕೆಂದು ಕಲಬುರಗಿ ಸೀಮಿತವಾಗಿದ್ದಾರೆಂದು ಟೀಕಿಸಿದರು

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ದೇಶ ಸುತ್ತಾಡುವುದು ಬಿಟ್ಟು ಕಲಬುರಗಿ ಸುತ್ತುತ್ತಿದ್ದಾರೆ. ಅದೇ ರೀತಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಡಾ. ಶರಣ ಪ್ರಕಾಶ ಪಾಟೀಲ್ ಸಹ ಗ್ರಾಮ- ಗ್ರಾಮ ಸುತ್ತುತ್ತಿದ್ದಾರೆ.‌ ಹೋದದ್ದೆಲ್ಲ ಬಿಜೆಪಿ ಅಭ್ಯರ್ಥಿ ಸಾಧನೆ ಶೂನ್ಯ ಎಂದು ಪದೇ ಪದೇ ಹೇಳಿ ಒಂದು ಸುಳ್ಳನ್ನು ನೂರು ಸಲ ಹೇಳಿ ನಿಜ ಮಾಡಲು ಹೊರಟಿದ್ದಾರೆ. ನಿಜವಾಗಿ ಈ ಭಾಗ ಅಭಿವೃದ್ಧಿ ಮಾಡಿದ್ದೆ ಆದರೆ ಇಷ್ಟೊಂದು ನಿಟ್ಟಿನಲ್ಲಿ ಪ್ರಚಾರ ಮಾಡುವ ಅವಶ್ಯಕತೆಯೇ ಇರಲಿಲ್ಲ ಎಂದು ಡಾ. ಜಾಧವ್ ವ್ಯಂಗ್ಯವಾಡಿದರು.

ಬಹಿರಂಗ ಚರ್ಚೆಗೆ ಸವಾಲು: ತಾವು ಸಂಸದರಾಗಿ ಏನು ಮಾಡಿದ್ದೇವೆ ಹಾಗೂ ತಾವು ಹಿಂದೆ ಏನು ಮಾಡಿದ್ದೀರಿ‌ ಎಂಬುದರ ಕುರಿತಾಗಿ ಬಹಿರಂಗವಾಗಿ ಚರ್ಚಿಸಲು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಅಳಿಯ ಮತ್ತು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಬಂದರೆ ತಾವು ಸಿದ್ದ. ಸಬೂಬು ಹೇಳದೇ ಬಹಿರಂಗ ಚರ್ಚೆ ಬರಬೇಕೆಂದು ಡಾ.‌ಜಾಧವ್ ಸವಾಲು ಹಾಕಿದರು.

ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಕಲಬುರಗಿಯಲ್ಲಿ ಶುರುವಾಗುತ್ತಿರುವುದು, 1475 ಕೋ‌ರೂ ವೆಚ್ಚದ ಭಾರತ ಮಾಲಾ ಹೆದ್ದಾರಿ ಕಲಬುರಗಿ ‌ಮೂಲಕ ಹಾದು ಹೋಗಿರುವುದು, ದೇಶಕ್ಕೆ ಸ್ವತಂತ್ರ ಸಿಕ್ಕ‌ ಮೇಲೆ ಇದೇ ಮೊದಲ ಬಾರಿಗೆ ಕಲಬುರಗಿಯಿಂದ ಬೆಂಗಳೂರಿಗೆ ನೇರವಾಗಿ ರೈಲು ಓಡಾಟ ಶುರುವಾಗಿರುವುದು, ವಂದೇ ಭಾರತ ಶುರುವಾಗಿರುದು, ಕೊರೊನಾ ವೇಳೆಯಲ್ಲಿ ಕಲಬುರಗಿಯಲ್ಲೇ ಮೊದಲ ಆರ್ಟಿಪಿಸಿಆರ್  ಶುರು ಮಾಡಿರುವುದು, ರೆಮಿಡಿವಿಶರ್ ತಂದಿರುವುದು, 60 ಕೋ.ರೂ ವೆಚ್ಚದ ಶಹಾಬಾದ್ ಬಳಿ ಕಾಗಿಣಾ ನದಿಗೆ ಸೇತುವೆ ನಿರ್ಮಿಸಿರುವುದು ಇವರ (ಕಾಂಗ್ರೆಸ್) ಕಣ್ಣಿಗೆ ಕಾಣಲಿಲ್ಲವೇ? ಮಾತೆತ್ತಿರೆ ಜಾಧವ್ ಏನ್ ಮಾಡಿದ್ದಾರೆಂದು ಪ್ರಶ್ನಿಸುತ್ತಾರೆ. ಒಂದು ವೇಳೆ ಇವರು ಅಭಿವೃದ್ಧಿ ಮಾಡಿದ್ದೆಯಾದರೆ ಈ ಭಾಗ ಯಾಕೆ ಹಿಂದುಳಿಯುತ್ತಿತ್ತು ಎಂದು ಡಾ. ಜಾಧವ್ ಖಾರವಾಗಿ ಪ್ರಶ್ನಿಸಿದರು.

371 ಜೆ ವಿಧಿ ಕೊಡುಗೆ ಖರ್ಗೆಯೊಬ್ಬರ ಕೊಡುಗೆ ಅಲ್ಲ: 371 ಜೆ ವಿಧಿ ಜಾರಿಯಾಗುವಲ್ಲಿ ಮಲ್ಲಿಕಾರ್ಜುನ ಖರ್ಗೆಯೊಬ್ಬರ ಕೊಡುಗೆ ಅಲ್ಲ. ಮೊದಲನೇಯದಾಗಿ ವೈಜನಾಥ್ ಪಾಟೀಲ್, ವಿಶ್ವನಾಥ ರೆಡ್ಡಿ ಮುದ್ನಾಳ, ಹಣಮಂತರಾವ ದೇಸಾಯಿ ಮುಂತಾದವರ ಪಾತ್ರವೂ ಇದೆಯಲ್ಲದೇ, ರಾಜ್ಯ ವಿಧಾನಸಭೆಯಲ್ಲೂ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ.‌ ಅದಲ್ಲದೇ ಎಲ್ ಕೆ. ಅಡ್ವಾಣಿ ಅವರೂ ಬೇಡಿಕೆ ತಿರಸ್ಕರಿಸಿದ್ದರು ಎಂದು ಹೇಳುತ್ತಾರೆ. ಆದರೆ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕೆಲವು ಪ್ರಶ್ನೆ ಕೇಳಿ 317 ಜಾರಿ ವಿಧಿಯ ಪ್ರಸ್ತಾವನೆ ಕಳುಹಿಸಿದ್ದರು ಎಂದು ಡಾ. ಜಾಧವ್ ದಾಖಲೆಯೊಂದಿಗೆ ಸ್ಫೋಟಕ ಮಾಹಿತಿ ನೀಡಿದರು.

ಶಾಸಕರಾದ ಬಸವರಾಜ ಮತ್ತಿಮಡು, ರಘುನಾಥ ಮಲ್ಕಾಪುರ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.