Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಶಾ, ಆರ್ ಎಸ್ ಎಸ್‌,ಸೂಲಿಬೆಲೆ ಎಲ್ಲಿ ಸೇರಿ ನನ್ನ ಸೋಲಿಸಿದರು..

Team Udayavani, Apr 24, 2024, 3:53 PM IST

Kharge (2)

ಕಲಬುರಗಿ: ಮತ ಹಾಕದಿದ್ದರೂ ಪರ್ವಾಗಿಲ್ಲ. ತಾವು ಸತ್ತಾಗ ಮಣ್ಣಿಗಾದರೂ ( ಅಂತ್ಯಕ್ರಿಯೆ ಗೆ) ಬನ್ನಿ ಎಂಬ ಭಾವನಾತ್ಮಕ ಹೇಳಿಕೆ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತಯಾಚಿಸಿದರು.

ಕಲಬುರಗಿ ಜಿಲ್ಲೆಯ ಅಫಜಲಪುರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಪರವಾಗಿ ಮತಯಾಚಿಸಿ ಮಾತನಾಡಿದ ಖರ್ಗೆ, ಹಿಂದೆ ಆಗಿದ್ದೇಲ್ಲ ನೆನಪಿಸುವ ಬದಲು ಈಗಲಾದರೂ ಕಾಂಗ್ರೆಸ್ ಅಭ್ಯರ್ಥಿ ಯನ್ನು ಗೆಲ್ಲಿಸಿ .ಕೆಲಸ ಮಾಡಲಾಗಿದೆ. 371 ಜೆ ಜಾರಿ ತರಲಾಗಿದೆ. ಹೀಗಾಗಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡು ತಾವು ನಿಧನರಾದಾಗ ಮಣ್ಣಿಗಾದರೂ ಬನ್ನಿ ಎಂದು ಮನವಿ ಮಾಡಿದರು.

ಮೋದಿಗೆ ನಾಚಿಕೆಯಾಗಬೇಕು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದರೆ ಮಹಿಳೆಯರ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ನಾಚಿಕೆಯಾಗಬೇಕು ಅವರಿಗೆ. ಎಂತಹ ಪ್ರಧಾನಿ ಇವರು. ಕಾಂಗ್ರೆಸ್ ಮಹಿಳೆಯರಿಗಾಗಿ ಹಲವಾರು ಯೋಜನೆ ಜಾರಿಗೆ ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ ಎಂದು ಖರ್ಗೆ ವಾಗ್ಧಾಳಿ ನಡೆಸಿದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಯುವಕರಿಗೆ, ಮಹಿಳೆಯರಿಗೆ ರೈತರಿಗೆ ಎಸ್ ಸಿ , ಎಸ್ ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತ ಯೋಜನೆಗಳನ್ನು ಹೇಳಿದ್ದೇವೆ. ಆದರೆ, ನಮ್ಮ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್ ಸಿದ್ದಾಂತ ಇದ್ದಂತೆ ಇದೆ ಎಂದಿದ್ದಾರೆ. ಯಾರೂ ಇಂತಹ ಮಾತು ಅಡುವುದಿಲ್ಲ. ಆದರೆ ಮೋದಿಗೆ ಏನಾಗಿದೆ ಎಂದು ನನಗೆ ಗೊತ್ತಿಲ್ಲ. ನಮ್ಮ ಪ್ರಣಾಳಿಕೆಯ ಬಗ್ಗೆ ಚರ್ಚೆಗೆ ಬರುವಂತೆ ಪತ್ರ ಬರೆದಿದ್ದೇನೆ. ನೋಡೋಣ ಅವರು ಬಂದರೆ ನಾನು‌ ಚರ್ಚೆ ಮಾಡುತ್ತೇನೆ ಎಂದರು.

ಮೋದಿ ಈ ದೇಶದ ಜನರ ಪರವಾಗಿಲ್ಲ. ಅವರು ಹಾಗೂ ಅಮಿತ್ ಶಾ ದೇಶವನ್ನು ಮಾರುವವರಿದ್ದರೆ ಅಂಬಾನಿ ಹಾಗೂ ಅದಾನಿ ಕೊಳ್ಳುವವರಿದ್ದಾರೆ ಎಂದು ಟೀಕಿಸಿದ ಖರ್ಗೆ, ದುರ್ದೈವದಿಂದಾಗಿ ಕಳೆದ ಸಲ ನನಗೆ ಹಿನ್ನೆಡೆಯಾಯಿತು. ಇದರಿಂದ ತಾಪತ್ರಯ ಆಗಿತ್ತು. ಆದದ್ದು ಆಗಿ ಹೋಗಿದೆ. ಅದನ್ನೇ ಪದೇ ಪದೇ ಹೇಳಿದರೂ ಚೆನ್ನಾಗಿರುವುದಿಲ್ಲ. ಕಳೆದ ಸಲದ ಸೋಲಿನಿಂದ ಹೊರಗೆ ಬನ್ನಿ ಆದದ್ದೂ ಆಯ್ತು ಈ ಸಲ ನೀವೆಲ್ಲ ಸೇರಿ ಬಿಜೆಪಿಗೆ ಮುಖಭಂಗ ಮಾಡಿ‌ ಇದು ಮೋದಿಗೂ ಗೊತ್ತಾಗಲಿ ಎಂದು ಮನವಿ ಮಾಡಿದರು.

ಬ್ಯಾರೇಜ್, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ರೇಲ್ವೆ ಕೋಚ್ ಫ್ಯಾಕ್ಟರಿ, ಕೇಂದ್ರಿಯ ವಿವಿ ಗಳನ್ನು ಸ್ಥಾಪಿಸಿದ್ದೇನೆ. ಇದನ್ನು ಯಾರೂ ನನಗೆ ಹೇಳಿರಲಿಲ್ಲ. ಆದರೆ ಈ ಭಾಗದ ಅಭಿವೃದ್ದಿಗಾಗಿ‌‌ ನಾನು ಮಾಡಿದ್ದೇನೆ. ಕಲಬುರಗಿಯಿಂದ ಬೆಂಗಳೂರಿಗೆ ಚಥುಷ್ಪಥ ರಸ್ತೆ ನಿರ್ಮಾಣವಾಗಬೇಕು. ಸಿಎಂ ಸಿದ್ದರಾಮಯ್ಯ ಅದನ್ನೂ ಮಾಡುತ್ತಾರೆ ಎನ್ನುವ ಭರವಸೆ ಇದೆ. ಮೆಜಾರಿಟಿ ಇಲ್ಲದಿದ್ದರೂ ಕೂಡಾ ಆರ್ಟಿಕಲ್ 371 J. ಜಾರಿಗೆ ತಂದಿದ್ದೇವೆ ಇದರಿಂದಾಗಿ‌ ಸಾವಿರಾರು ನಿರುದ್ಯೋಗಿಗಳು ನೌಕರಿ ಪಡೆದುಕೊಂಡಿದ್ದಾರೆ ಎಂದರು.

ನಾನು ಅಫಜಲ್ ಪುರದಿಂದಲೇ ಸೋತಿದ್ದೇನೆ ಎಂದು ಹೇಳಲಾರೆ. ಯಾಕೆಂದರೆ ನನ್ನ ಸೋಲಿಸಲು ಇಡೀ ದೇಶವೇ ಒಗ್ಗಟ್ಟಾಗಿತ್ತು. ಅಮಿತ್ ಶಾ, ಆರ್ ಎಸ್ ಎಸ್‌,ಸೂಲಿಬೆಲೆ ಎಲ್ಲಿ ಸೇರಿ ಇಲ್ಲೇ ಕ್ಯಾಂಪ್ ಮಾಡಿ ನನ್ನನ್ನ ಟಾರ್ಗೆಟ್ ಮಾಡಿದ್ದರು. ನಾನು ರಾಜಕೀಯದಿಂದ ಎಂದಿಗೂ ನಿವೃತ್ತರಾಗುವುದಿಲ್ಲ. ತುಳಿತಕ್ಕೆ ಒಳಗಾದ ಸಮಾಜದ ಪರವಾದ ಹೋರಾಟ ಮಾಡಲು ನಾನು ರಾಜಕೀಯದಲ್ಲಿ ಇರುತ್ತೇನೆ. ಆರ್ ಎಸ್ ಎಸ್ ಸಿದ್ದಾಂತಗಳನ್ನು ಸೋಲಿಸಲು ನಾನು ಹೋರಾಡುತ್ತಲೇ ಇರುತ್ತೇನೆ ಎಂದರು.

ಕಳೆದ ಸಲದ ಸೋಲಿನ‌ ವಿಚಾರ ಬಿಡಿ. ನಾವು ಮಾಡಿದ ಕೆಲಸಕ್ಕೆ ನೀವು ಆಶೀರ್ವಾದ ಮಾಡಿ ರಾಧಾಕೃಷ್ಣ ಅವರಿಗೆ ಗೆಲ್ಲಿಸಬೇಕು. ನೀವು ಹಾಗೆ ಮಾಡದಿದ್ದರೆ ನಿಮ್ಮ ಹೃದಯದಲ್ಲಿ ನಾನು ಇಲ್ಲ ಎಂದು ತಿಳಿದುಕೊಳ್ಳುತ್ತೇನೆ. ನಾನು ಸತ್ತರೆ‌ ನನ್ನ ಮಣ್ಣಿಗೆ ನೀವು ಬರಬೇಕು. ನನ್ನನ್ನು‌ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ‌ ಹೂಳಿದರೆ ಮಣ್ಣು ಹಾಕಲು ಬನ್ನಿ. ಇದಕ್ಕಿಂತ ಹೆಚ್ಚಿಗೆ ನಾನು ಹೇಳುವುದಿಲ್ಲ ಎಂದು ಭಾವುಕರಾಗಿ ನುಡಿದರು.

ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ ಮತದಾರರು ಆಶೀರ್ವಾದ ಮಾಡಿ ದಿಲ್ಲಿಗೆ ಕಳಿಸಿದರೆ ನಿಮ್ಮ ಸೇವೆ ಮಾಡುತ್ತೇನೆ ಎಂದರು.
ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ.ಶರಣಪ್ರಕಾಶ , ಪ್ರಿಯಾಂಕ್ ಖರ್ಗೆ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.