Kalaburagi; ಬಿಜೆಪಿ ಎಂದರೆ ಬ್ರಿಟೀಷ್ ಜನತಾ ಪಾರ್ಟಿ: ಮಧು ಬಂಗಾರಪ್ಪ


Team Udayavani, Mar 8, 2024, 1:29 PM IST

Kalaburagi; ಬಿಜೆಪಿ ಎಂದರೆ ಬ್ರಿಟೀಷ್ ಜನತಾ ಪಾರ್ಟಿ: ಮಧು ಬಂಗಾರಪ್ಪ

ಕಲಬುರಗಿ: ಬಿಜೆಪಿ ಅಂದರೆ ಅದು ಪಕ್ಷವಲ್ಲ, ಬ್ರಿಟೀಷ್ ಜನತಾ ಪಾರ್ಟಿ. ಬ್ರಿಟೀಷರು ಹೇಗೆ ವ್ಯಾಪಾರಕ್ಕೆ ಬಂದು ಆಳಿದರೋ, ಆದೇ ರೀತಿಯಲ್ಲಿ ಬಿಜೆಪಿಯವರು ವ್ಯಾಪಾರ ಮಾಡಿಕೊಂಡು, ಶಾಸಕರನ್ನು ಖರೀದಿ ಮಾಡಿಕೊಂಡು ತಂತ್ರದಿಂದ ಅಧಿಕಾರ ಹಿಡಿಯುವುದು ಅವರ ಚಾಳಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಕೆಕೆಆರ್‌ಡಿಬಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ 113ರಕ್ಕಿಂತ ಹೆಚ್ಚು ಸ್ಥಾನ ಎಲ್ಲಿ ಗೆದ್ದಿದ್ದಾರೆ ಹೇಳಿ ಎಂದು ಪ್ರಶ್ನಿಸಿದ ಅವರು, ವ್ಯವಹಾರ ಕುದುರಿಸಿಯೇ ಅಧಿಕಾರ ಹಿಡಿಯುವುದು ಅವರ ಹುಟ್ಟುಗುಣ. ದೇಶದಲ್ಲಿ ರಾಜ್ಯದಲ್ಲಿ ರೈತರ, ಕಾರ್ಮಿಕರ ಸಾಲ ಮನ್ನಾ ಮಾಡಿದ ಇತಿಹಾಸವೇನಾದರೂ ಇದೆಯಾ? ಕೇವಲ ಬಂಡವಾಳಶಾಹಿಗಳ ಸಾಲ ಮನ್ನಾ ಮಾಡುವ ಮುಖೇನ ತಾವೇನು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ದೇಶದಲ್ಲಿ ಬಿಜೆಪಿ ಭಾವನೆಗಳ ಮೂಲಕವೇ ಆಡಳಿತ ಮಾಡುವುದು ಹುಟ್ಟುಗುಣ. ಶ್ರೀರಾಮನನ್ನು ಬೀದಿಗೆ ತಂದು ಬಿಟ್ಟರು. ಹಾದಿ ಬೀದಿಯಲ್ಲಿ ಕಟೌಟು ನಿಲ್ಲಿಸಿದರು. ಅವು ಬಿದ್ದು ಕಸದ ಬುಟ್ಟಿ ಸೇರುತ್ತಿವೆ. ಇದಕ್ಕೆ ಯಾರು ಹೊಣೆ ಎಂದ ಅವರು, 32 ವರ್ಷಗಳ ಹಿಂದೆ ನಮ್ಮ ತಂದೆ ದಿ. ಬಂಗಾರಪ್ಪ ಅವರು ಮುಖ್ಯಮಂತ್ರಿ ಇದ್ದಾಗ ದೇವಸ್ಥಾನಗಳಲ್ಲಿ (ರಾಮನ ದೇವಸ್ಥಾನ ಸೇರಿ) ಆರಾಧನಾ ಯೋಜನೆ ಅಡಿಯಲ್ಲಿ ಹಚ್ಚಲು ಕೋಟ್ಯಾಂತರ ಅನುದಾನದ ನೀಡಿ ದೇವರ ಗುಡಿಗಳಲ್ಲಿ ಬೆಳಕು ಬರುವಂತೆ ಮಾಡಿದ್ದಾರೆ. ಇದೇನು ತೋರಿಸುತ್ತದೆ. ಕಾಂಗ್ರೆಸ್‌ ನವರಿಗೆ ಧರ್ಮ, ದೇವರುಗಳ ಬಗ್ಗೆ ಪ್ರೀತಿ ಇಲ್ಲವೇನು ಎಂದು ಪ್ರಶ್ನಿಸಿದರು.

ಈಗ ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಎರಡು ಸಾವಿರ ರೂ.ಗಳನ್ನು ಕೊಡುವ ಮೂಲಕ ಮನೆ ಬೆಳಗುವ ಕಾರ್ಯಕ್ರಮ ಸಿದ್ದರಾಮಯ್ಯ ಅವರ ಮೂಲಕ ಮಾಡಲಾಗುತ್ತಿದೆ. ಇದರ ಬಹುತೇಕ ಫಲಾನುಭವಿಗಳು ಬಿಜೆಪಿಗರೇ ಇದ್ದಾರೆ. ನಾಯಕರ ಮನೆಗಳ ಡ್ರೈವರ್, ಕಸ ಗೂಡಿಸುವವರು, ಮನೆ ಕೆಲಸದವರಿಗೆ ಎರಡು ಸಾವಿರ ರೂ. ಬರುತ್ತದೋ ಇಲ್ಲವೋ ಕೇಳಿ, ಆಗಲಾದರೂ ಗ್ಯಾರಂಟಿ ಓಕೆ ಎನ್ನಿಸಬಹುದು ಎಂದು ಛೇಡಿಸಿದರು.

ಎನ್.ರವಿ ಇವರೆಲ್ಲಾ ಸೀಮೆಯ ನಾಯಕರು, ಗ್ರಾಮ ಪಂಚಾಯತ್ ಗೆ ನಿಂತರೆ ಗೆಲ್ಲುವುದು ಡೌಟು. ಇವರಿಂದ ಹೇಳಿಸಿಕೊಂಡು ಸರಕಾರ ನಡೆಸುವ ಜರೂರತ್ತು ನಮಗೇನು ಇಲ್ಲ ಎಂದು ತಿರುಗೇಟು ನೀಡಿದರು.

ಈ ವೇಳೆಯಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್, ಶಾಸಕ ಎಂ.ವೈ.ಪಾಟೀಲ ಹಾಗೂ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.