Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Team Udayavani, May 20, 2024, 12:08 AM IST
ಕಲಬುರಗಿ: ಚುನಾವಣಾ ವೈಷಮ್ಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕವಾಗಿ ಹಲ್ಲೆ ಗೈದ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ರವಿವಾರ ನಡೆದಿದೆ.
ರಾಘವೇಂದ್ರ ಎನ್ನುವ ಬಿಜೆಪಿ ಕಾರ್ಯಕರ್ತನ ಮೇಲೆ ಕೆಲವರು ದಾಳಿ ನಡೆಸಿ ಹಲ್ಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ನಡೆಸಲಾಗಿದೆ. ವಿದ್ಯುತ್ ದೀಪ ತೆಗೆದು ಹಲ್ಲೆ ನಡೆಸಲಾಗಿದೆಯಂತೆ.
ಹಲ್ಲೆಯಲ್ಲಿ ರಾಘವೇಂದ್ರ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆ ಗಾಗಿ ಕಲಬುರಗಿಯ ಜೀಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸದ ಭೇಟಿ
ದಾಳಿಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ಆರೋಗ್ಯ ವಿಚಾರಿಸಲು ಸಂಸದ ಡಾ. ಉಮೇಶ ಜಾಧವ್ ಆಸ್ಪತ್ರೆಗೆ ಭೇಟಿ ನೀಡಿದರು.
ಕಾಂಗ್ರೆಸ್ ಗೂಂಡಾಗಳು ಅಮಾನುಷ ರೀತಿಯಲ್ಲಿ ದಾಳಿ ನಡೆಸಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದು, ಖಂಡನೀಯವಾಗಿದೆ. ಹಲ್ಲೆ ಯನ್ನು ಕೊಲೆ ಯತ್ನವೆಂದು ಪ್ರಕರಣ ದಾಖಲಿಸಿ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕೆಂದು ಸಂಸದರು ಒತ್ತಾಯಿಸಿದರು. ಚುನಾವಣೆ ಮುಗಿದರೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಿಲ್ಲುತ್ತಿಲ್ಲ. ಪೊಲೀಸ ರು ಕೆಲವರ ಕೈಗೊಂಬೆಯಾಗಿರುವುದೇ ಹಲ್ಲೆ ಗಳಿಗೆ ಕಾರಣವಾಗುತ್ತಿದೆ ಎಂದು ಬಿಜೆಪಿ ಮುಖಂಡ ಶಿವಕಾಂತ ಮಹಾಜನ್ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.