ಕಲಬುರಗಿ ಪಾಲಿಕೆಯಲ್ಲಿ ವಾಮಮಾರ್ಗದಿಂದ ಆಡಳಿತ ಹಿಡಿಯಲು ಬಿಜೆಪಿ ತಂತ್ರ: ಕಾಂಗ್ರೆಸ್

ಈಗ ದಿಢೀರನೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದರೆ ಅಧಿಕಾರಿಗಳನ್ನು ಸುಮ್ಮನೇ ಬಿಡಲ್ಲ

Team Udayavani, Nov 13, 2021, 2:39 PM IST

ಕಲಬುರಗಿ ಪಾಲಿಕೆಯಲ್ಲಿ ವಾಮಮಾರ್ಗದಿಂದ ಆಡಳಿತ ಬರಲು ಬಿಜೆಪಿ ತಂತ್ರ: ಕಾಂಗ್ರೆಸ್

ಕಲಬುರಗಿ: ಪಾಲಿಕೆಯಲ್ಲಿ ಈ ಸಲ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂಬ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ವಾಗ್ದಾಳಿ ನಡೆಸಿದೆ.

ಕಲಬುರಗಿ ನಗರದಲ್ಲಿ ಸಂಬಂಧವಿರದ ಏಳು ವಿಧಾನ ಪರಿಷತ್ ಸದಸ್ಯರ ಹೆಸರನ್ನು ಕಲಬುರಗಿ ಮಹಾನಗರದ ಮತದಾರರ ಪಟ್ಟಿಯಲ್ಲಿ ಸೇರಿಸಿ ವಾಮಮಾರ್ಗದಿಂದ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಇನ್ನಿಲ್ಲದ ಹುನ್ನಾರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಟೀಕಿಸಿದರು.

ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಭಾರತೀ ಶೆಟ್ಟಿ, ಸಾಯಬಣ್ಣ ತಳವಾರ, ಲೇಹರಸಿಂಗ್, ಪ್ರತಾಪ ನಾಯಕ, ರಘುನಾಥ ಮಲ್ಕಾಪುರೆ, ಮುನಿರತ್ನ ಅವರ ಹೆಸರನ್ನು ಈಗಾಗಲೇ ಅಧಿಸೂಚನೆಗೊಂಡು ಅಂತಿಮಗೊಂಡಿರುವ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಿ ಕುತಂತ್ರದಿಂದ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರ ಬರಲು ಹವಣಿಸುತ್ತಿದೆ ಎಂದು ಡಾ.ಶರಣ ಪ್ರಕಾಶ ತಿಳಿಸಿದರು.

ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ಕಳೆದ ನ.‌ 9ರಂದು ಈ ಎಲ್ಲ ಏಳು ವಿಧಾನ ಪರಿಷತ್ ಸದಸ್ಯರು ಕಲಬುರಗಿಯಲ್ಲೇ ಇದ್ದಿರುವುದಾಗಿ ಪಾಲಿಕೆ ಸದಸ್ಯರ ಮನೆಯಲ್ಲೇ ಬಾಡಿಗೆ ಇರಲಾಗಿದೆ ಎಂದು ಹೇಳಿ ಆನ್ಲೈನ್ ಮುಖಾಂತರ ಮತದಾರರ ಒಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದಾರೆ. ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆಯೊಂದಿಗೆ ಅಧಿಕಾರ ಬರಲಿದೆ ಎಂಬುದನ್ನು ಅರಿತು ಬಿಜೆಪಿ ಇಂತಹ ಮಾನಗೇಡಿ ಕಾರ್ಯಕ್ಕೆ ಮುಂದಾಗಿದೆ ಎಂದು ಟೀಕಿಸಿದರು.

ಏಳು ಜನ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಸ್ವತ: ಮುಖ್ಯಮಂತ್ರಿಗಳೇ ಕರೆ ಮಾಡಿ, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಆಯುಕ್ತರ ಮೇಲೆ ಇನ್ನಿಲ್ಲದ ಒತ್ತಡ ಹಾಗೂ ಬೆದರಿಕೆ ಸಹ ಹಾಕಿದ್ದು, ಒಂದೆಡೆ ಬಿಜೆಪಿ ಮುಖಂಡರು ಮತ್ತೊಂದೆಡೆ ಹಣ ಆಮಿಷ ಒಡ್ಡುತ್ತಿದ್ದಾರೆ ಎಂದು ಮಾಜಿ ಸಚಿವರು ಗಂಭೀರ ಆರೋಪ ಮಾಡಿದರು.

ಅಧಿಕಾರಿಗಳು ಮುಖ್ಯಮಂತ್ರಿಗಳ ಹಾಗೂ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು, ಆಮಿಷಕ್ಕೆ ಒಳಗಾಗಿ ಯಾವುದೇ ವಿಚಾರಣೆ ನಡೆಸದೆ ಪೂರ್ವಾಪರ ಅವಲೋಕಿಸದೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದಲ್ಲಿ ಕಾಂಗ್ರೆಸ್ ಪಕ್ಷ ಸುಮ್ಮನೇ ಕೂಡುವುದಿಲ್ಲ. ಕಾನೂನು ಹೋರಾಟದ ಜತೆಗೆ ಮುಂದೆ ಸರಕಾರ ಬಂದ ನಂತರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದಲೇ ವಜಾಗೊಳಿಸಲಾಗುವುದಲ್ಲದೇ ಸಾಧ್ಯವಾದರೆ ಜೈಲಿಗೆ ಕಳುಹಿಸಲಾಗುವುದು. ಅಧಿಕಾರಿಗಳು ಐಎಎಸ್ ಆಗಿರಲಿ ಇನ್ನ್ಯಾರೇ ಆಗಿರಲಿ ಅವರನ್ನು ಬಿಡುವುದಿಲ್ಲ ಎಂದು ಡಾ. ಶರಣಪ್ರಕಾಶ ಪಾಟೀಲ್ ಗುಡುಗಿದರು.

ಈಗಾಗಲೇ ಏಳು ವಿಧಾನ ಪರಿಷತ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಸದಿರುವಂತೆ ಚುನಾವಣಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಲಾಗಿದೆಯಲ್ಲದೇ ಕಾನೂನು ಹೋರಾಟದ ನಿಟ್ಟಿನಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಮೇಯರ್ ಶರಣು ಮೋದಿ ಸೇರಿದಂತೆ ಮುಂತಾದವರಿದ್ದರು

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.