![1-mangaluru](https://www.udayavani.com/wp-content/uploads/2024/07/1-mangaluru-415x268.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
Team Udayavani, Jul 1, 2024, 3:05 PM IST
![basavaraj rayareddy](https://www.udayavani.com/wp-content/uploads/2024/07/rayareddy-620x342.jpg)
ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ, ಮೂರು ಜನ ಉಪಮುಖ್ಯಮಂತ್ರಿ ನೇಮಕ ಮಾಡುವ ಕುರಿತು ಮಾತನಾಡುವುದೇ ನಾನ್ ಸೆನ್ಸ್ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೇಡ್ಡಿ ಹೇಳಿದರು.
ಕೆಕೆಆರ್ಡಿಬಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
ಬದಲಾವಣೆ ವಿಚಾರ ಅನಾವಶ್ಯಕ. ಚಂದ್ರಶೇಖರ ಸ್ವಾಮೀಜಿ ಹೇಳಿರುವುದು ಸರಿಯಲ್ಲ. ಸ್ವಾಮೀಜಿಯಾದವರು ಮುಖ್ಯಮಂತ್ರಿ ಕೊಡಿ ಎಂದು ಹೇಳಲು ಯಾರು ಇವರು ಎಂದು ಪ್ರಶ್ನಿಸಿದರು.
ಇವರೇನು ನಮ್ಮಪಕ್ಷದ ಶಾಸಕಾಂಗದ ನಾಯಕರೇ? ಹೈಕಮಾಂಡಾ? ಇವರು ಸ್ವಾಮೀಜಿ ಅವರು ಧರ್ಮ ಚಿಂತನೆಯಲ್ಲಿ ಇರಬೇಕು ಎಂದರು.
ಇಂತಹ ಹುದ್ದೆಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಸರಿಯಲ್ಲ. ಇದು ಧಾರ್ಮಿಕ ಅಶಿಸ್ತು ತೋರಿಸುತ್ತದೆ. ಸಿಎಂ ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ. ಇನ್ನೂ ನಾಲ್ಕು ವರ್ಷ ಬದಲಾವಣೆ ಮಾಡದಿದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ. ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ ಎಂದರು.
ಜಾತಿವಾರು ಡಿಸಿಎಂ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಮೂರು ಡಿಸಿಎಂ ಮಾಡಬಹುದು. ಇನ್ನೂ 32 ಜನರಿಗೆ ಮಾಡಬಹುದು. ಸಚಿವರಾದವರು ಎಲ್ಲರೂ ಡಿಸಿಎಂ ಆಗಬಹುದು. ಆ ಸ್ಥಾನದಲ್ಲಿ ಏನು ಪವರ್ ಇಲ್ಲ. ಇದು ವೈಭವೀಕರಣದ ಹುದ್ದೆ ಅಷ್ಟೆ ಕಾನೂನಿನಲ್ಲಿ ಬೆಲೆ ಇಲ್ಲ ಎಂದರು.
ಉಪ ಮುಖ್ಯಮಂತ್ರಿ ಎನ್ನುವುದು ಒಂದು ಬೆಲೆ ಜಾಸ್ತಿ ಬರುತ್ತದೆಂಬ ಕಾರಣಕ್ಕೆ ಕೇಳುತ್ತಿರುವುದು ಅಷ್ಟೆ. ಈ ವಿಚಾರದ ಬಗ್ಗೆ ಚರ್ಚೆ ಮಾಡುವವರು ನಾನ್ ಸೆನ್ಸ್ ಅಷ್ಟೆ ಎಂದರು.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.