ಕಲಬುರಗಿಯಲ್ಲಿನ್ನು “ಮೋದಿ’ ಆಡಳಿತ


Team Udayavani, Apr 14, 2017, 4:19 PM IST

gul7.jpg

ಕಲಬುರಗಿ: ನಿರೀಕ್ಷೆಯಂತೆ ಮಹಾನಗರ ಪಾಲಿಕೆಗೆ ಪ್ರಸಕ್ತ ಆಡಳಿತದ ನಾಲ್ಕನೇ ಅವಧಿಗೆ ವಾರ್ಡ್‌ ನಂಬರ್‌ 17ರ ಸದಸ್ಯ ಕಾಂಗ್ರೆಸ್‌ ಪಕ್ಷದ ಶರಣಕುಮಾರ ಮೋದಿ ಮಹಾಪೌರರಾಗಿ ಚುನಾಯಿತರಾಗಿದ್ದಾರೆ. ಅದೇ ರೀತಿ ಉಪ ಮಹಾಪೌರರಾಗಿ ವಾರ್ಡ್‌ ನಂಬರ್‌ 1ರ ಸದಸ್ಯೆ ಕಾಂಗ್ರೆಸ್‌ ಪಕ್ಷದ ಪುತಳಿಬೇಗಂ ಆಯ್ಕೆಯಾಗಿದ್ದಾರೆ. 

ಈ ಹಿಂದಿನ ಎರಡು ಅವಧಿಯಲ್ಲೂ ಮೇಯರ್‌ ಸ್ಥಾನದ ಆಕ್ಷಾಂಕಿಯಾಗಿದ್ದ ಶರಣಕುಮಾರ ಮೋದಿ ಅವರಿಗೆ ಮೂರನೇ ಪ್ರಯತ್ನದಲ್ಲಿ ಮಹಾಪೌರರ ಗದ್ದುಗೆ ಒಲಿಯಿತು. ಪಾಲಿಕೆಯ ಇಂದಿರಾ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಮೋದಿ 40 ಮತ ಪಡೆದು ಬಿಜೆಪಿ ಅಭ್ಯರ್ಥಿ ವೀರಣ್ಣ ಹೊನ್ನಳಿ ಅವರನ್ನು ಸೋಲಿಸಿ ಚುನಾಯಿತರಾದರು.

ಹೊನ್ನಳಿಗೆ ಕೇವಲ 17 ಮತ ಪಡೆದು ಪರಾಭವ ಹೊಂದಿದರು. ಅದೇ ರೀತಿ ಉಪಮೇಯರ್‌ ಆಗಿ ವಾರ್ಡ್‌ ನಂಬರ್‌ 1ರ ಸದಸ್ಯೆ ಕಾಂಗ್ರೆಸ್‌ ಪಕ್ಷದ ಪುತಳಿಬೇಗಂ ಸಹ 40 ಮತ ಪಡೆದು ಚುನಾಯಿತರಾದರೆ ಬಿಜೆಪಿಯ ಮೀನಾಕ್ಷಿ ಬಂಡೆ ಸೋಲು ಅನುಭವಿಸಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಆಯ್ಕೆಯನ್ನು ಘೋಷಿಸಿದರು.

55 ಪಾಲಿಕೆ ಸದಸ್ಯರು ಸೇರಿ ಒಟ್ಟಾರೆ 63 ಮತದಾರ ಸದಸ್ಯರಲ್ಲಿ 57 ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. 55 ಪಾಲಿಕೆ ಸದಸ್ಯರಲ್ಲಿ ವಾರ್ಡ್‌ ನಂಬರ್‌ 4ರ ಸದಸ್ಯೆ ನಾದಿರಾ ಜಮೀಲ್‌ ಮಾತ್ರ ಚುನಾವಣೆಯಲ್ಲಿ ಪಾಲ್ಗೊಳ್ಳದೇ ಗೈರು ಹಾಜರಾಗಿದ್ದರು. ಬಿಜೆಪಿಯ ನಾಲ್ವರು ಶಾಸಕರ ಪೈಕಿ ಒಬ್ಬರೂ ಚುನಾವಣೆ ಪ್ರಕ್ರಿಯೆಲ್ಲಿ ಪಾಲ್ಗೊಳ್ಳಲಿಲ್ಲ.

ಪಾಲಿಕೆಯ ಒಟ್ಟು 55 ಸದಸ್ಯ ಸ್ಥಾನಗಳಲ್ಲಿ 23 ಸದಸ್ಯ ಸ್ಥಾನ ಹೊಂದಿರುವ ಕಾಂಗ್ರೆಸ್‌ 14 ಪಕ್ಷೇತರ ಸದಸ್ಯರೊಂದಿಗೆ ಆಡಳಿತ ಚುಕ್ಕಾಣಿ ಹಿಡಿಯಿತು. ಪಾಲಿಕೆಯ ಒಟ್ಟು 55 ಸ್ಥಾನಗಳಲ್ಲಿ ಕಾಂಗ್ರೆಸ್‌ 23, ಜೆಡಿಎಸ್‌ 10, ಕೆಜೆಪಿ-ಬಿಜೆಪಿ ತಲಾ 7 ಸ್ಥಾನಗಳು 08 ಪಕ್ಷೇತರ ಸದಸ್ಯರಿದ್ದಾರೆ. 8 ಜನ ಶಾಸಕ-ಸಂಸದರು ಸೇರಿದಂತೆ ಒಟ್ಟು 63 ಸದಸ್ಯರಿದ್ದಾರೆ. 

ಅಧಿಕಾರ ಹಿಡಿಯಲು 32 ಸದಸ್ಯರ ಬಹುಮತ ಬೇಕು. ಒಟ್ಟಾರೆ ಪಾಲಿಕೆಯಲ್ಲಿ ಯಾರಿಗೂ ಬಹುಮತ ಇರದಿದ್ದರೂ ಕಾಂಗ್ರೆಸ್‌ ಪಕ್ಷೇತರ 8 ಜನ, ನಾಲ್ವರು ಜೆಡಿಎಸ್‌ ಹಾಗೂ ಇಬ್ಬರು ಕೆಜೆಪಿ ಸದಸ್ಯರೊಂದಿಗೆ ಅಧಿಕಾರಕ್ಕೆ ಬಂದಿದೆ. ಮಹಾಪೌರರ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರಿಂದ ತೀವ್ರ ಪೈಪೋಟಿ ಕಂಡು ಬಂದಿತ್ತು.

ಹುಲಿಗೆಪ್ಪ ಕನಕಗಿರಿ, ರಮೇಶ ತಿಪ್ಪಣ್ಣಪ್ಪ ಕಮಕನೂರ, ಮಲ್ಲಿಕಾರ್ಜುನ ಟೆಂಗಳಿ, ಮಹೇಶ ಹೊಸುರಕರ್‌ ಅವರೂ ಆಕಾಂಕ್ಷಿಗಳಾಗಿದ್ದರು. ವರಿಷ್ಠರು ಎಲ್ಲ ಸದಸ್ಯರ ಅಭಿಪ್ರಾಯ ಪಡೆದು ಕೊನೆಗೆ ಮೋದಿ ಅವರ ಹೆಸರನ್ನು ಅಂತಿಮಗೊಳಿಸಿದ್ದರಿಂದ ನಿರೀಕ್ಷೆಯಂತೆ ಆಯ್ಕೆಯಾದರು. 

ಪಾಲಿಕೆಯಲ್ಲಿ ಕಿಂಗ್‌ ಮೇಕರ್‌ ಎಂದೇ ಖ್ಯಾತಿ ಪಡೆದಿರುವ ಮಾಜಿ ಸಚಿವ ಖಮರುಲ್‌ ಇಸ್ಲಾಂ, ಶಾಸಕ ಜಿ. ರಾಮಕೃಷ್ಣ, ವಿಧಾನ ಪರಿಷತ್‌ ಸದಸ್ಯ ಇಕ್ಬಾಲ ಅಹ್ಮದ ಸರಡಗಿ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಮಾಜಿ ಸಚಿವ ಖಮರುಲ್‌ ಇಸ್ಲಾಂ, ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ ಗೆಲುವಿನೊಂದಿಗೆ ಕಲಬುರಗಿ ಪಾಲಿಕೆಯಲ್ಲೂ ಕಾಂಗ್ರೆಸ್‌ ಆಡಳಿತ ಚುಕ್ಕಾಣಿ ಮುಂದುವರಿಸಿರುವುದನ್ನು ಮುಖ್ಯಮಂತ್ರಿಗೆ ಕಾಣಿಕೆಯಾಗಿ ನೀಡುವುದಾಗಿ ಘೋಷಿಸಿದರು. 

ಮೇಯರ್‌ ಆಯ್ಕೆಯಾಗುತ್ತಿದ್ದಂತೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಶಾಸಕ ಡಾ| ಅಜಯಸಿಂಗ್‌, ವೀಕ್ಷಕರಾಗಿ ಆಗಮಿಸಿದ ಪ್ರಕಾಶ ರಾಥೋಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ ನೂತನ ಮೇಯರ್‌ ಮೋದಿಗೆ ಶುಭ ಕೋರಿದರು. 

ವಿಜಯೋತ್ಸವ: ಶರಣುಮಾರ ಮೋದಿ ಮಹಾಪೌರರಾದ ನಂತರ ವಿಜಯೋತ್ಸವ, ತೆರೆದ ವಾಹನದಲ್ಲಿ ಮೆರವಣಿಗೆ ನಡೆಯಿತು. ಪಕ್ಷದ ಅಭಿಮಾನಿಗಳು, ವಾರ್ಡ್‌ನ ಮತದಾರರು, ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. 

ಮೂರನೇ ಸ್ಥಾನ: ಪ್ರಸಕ್ತ ಆಡಳಿತದ ಮೂವರು ಮೇಯರ್‌ ಅವಧಿಯುದ್ದಕ್ಕೂ ನಿರೀಕ್ಷೆ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಮಾದರಿ ನಗರವನ್ನಾಗಿಸುವ ಗುರಿಯತ್ತ ಮುನ್ನಡೆಯಲಾಗುತ್ತಿದೆ. ಉತ್ತಮ ಆಡಳಿತ ನೀಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ಪಾಲಿಕೆ ಮೂರನೇ ಸ್ಥಾನ ಪಡೆದಿದೆ.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.