![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 29, 2021, 10:18 PM IST
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ರೆಮ್ಡೆಸಿವಿಯರ್ ಇಂಜೆಕ್ಷನ್ ಕೊರತೆ ಇರುವ ಹಿನ್ನೆಲೆಯಲ್ಲಿ ಸಂಸದ ಡಾ| ಉಮೇಶ ಜಾಧವ ಸ್ವತಃ ಬೆಂಗಳೂರಿನಿಂದ ವಿಮಾನದ ಮೂಲಕ 350 ಇಂಜೆಕ್ಷನ್ ವಯಲ್ಸ್ಗಳನ್ನು ತೆಗೆದುಕೊಂಡು ಬಂದರು.
ಮಂಗಳವಾರ ರಾತ್ರಿ ಬೆಂಗಳೂರಿನ ಔಷಧ ನಿಯಂತ್ರಕರ ಕಚೇರಿಯ ವಾರ್ ರೂಮ್ಗೆ ತೆರಳಿದ ಸಂಸದರು ಇಂಜೆಕ್ಷನ್ ಗಳನ್ನು ತುಂಬಿದ ಡಬ್ಬಿ ಪಡೆದುಕೊಂಡು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬುಧವಾರ ಬೆಳಗ್ಗೆ ತಂದರು. ಜಿಲ್ಲೆಯಲ್ಲಿ ರೆಮ್ಡೆಸಿವಿಯರ್ ಇಂಜೆ ಕ್ಷನ್ ದಾಸ್ತಾನು ಖಾಲಿಯಾಗಿರುವ ಕುರಿತು ಸಂಸದ ಡಾ| ಉಮೇಶ ಜಾಧವ ಅವರಿಗೆ ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಗೋಪಾಲ ಭಂಡಾರಿ ಗಮನಕ್ಕೆ ತಂದಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಜಾಧವ, ತಾವೇ ಬೆಂಗಳೂರಿನ ಕೋವಿಡ್ ವಾರ್ ರೂಮ್ಗೆ ಭೇಟಿ ಕೊಟ್ಟು, ಜಿಲ್ಲೆಯ ಪರಿಸ್ಥಿತಿ ಬಗ್ಗೆ ಅಲ್ಲಿನ ಅಧಿ ಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ತಕ್ಷಣ ಜಿಲ್ಲೆಗೆ 350 ವಯಲ್ಸ್ ರೆಮ್ ಡೆಸಿವಿಯರ್ ಇಂಜೆಕ್ಷನ್ ಮಂಜೂರು ಮಾಡಿಸಿಕೊಂಡರು.
ಅದನ್ನು ಬುಧ ವಾರ ಬೆಳಗ್ಗೆ ಕಳಿಸಿದ್ದರೆ ಗುರು ವಾರ (ಏ.29) ತಲುಪುವ ಸಾಧ್ಯತೆ ಇತ್ತು. ಆದರೆ, ರೋಗಿಗಳಿಗೆ ತುರ್ತಾಗಿ ಬೇಕಾಗಿರುವುದರಿಂದ ಇಂಜೆಕ್ಷನ್ಗಳನ್ನು ತಮ್ಮ ಕಾರಿನಲ್ಲಿ ದಾಸ್ತಾನು ಮಾಡಿಕೊಂಡು ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ನಗರಕ್ಕೆ ತಂದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.