ಕ್ಯಾನ್ಸರ್ಗೆ ರೋಬೊಟಿಕ್ ಸರ್ಜರಿ ವರದಾನ
ಪರಿಣಿತರಲ್ಲದವರಿಗೂ ಚಿಕಿತ್ಸೆ ಮಾಹಿತಿ ಲಭ್ಯ
Team Udayavani, Feb 14, 2021, 3:17 PM IST
ಕಲಬುರಗಿ: ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಮತ್ತು ನಾವಿನ್ಯ ತಂತ್ರಜ್ಞಾನ ಆವಿಷ್ಕಾರಗೊಂಡಿದ್ದು, ಇದರಿಂದ ಕಡಿಮೆ ಸಮಯ ಮತ್ತು ವೆಚ್ಚದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಹೈದರಾಬಾದ್ನ ಅಮೆರಿಕನ್ ಆಂಕಾಲಜಿ ಇನ್ಸ್ಟಿಟ್ಯೂಟ್ ತಜ್ಞ ಡಾ| ಜಗದೀಶ್ವರ ಗೌಡ ಹೇಳಿದರು.
ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಶನಿವಾರ ಎಂಆರ್ಎಂಸಿ, ಅಮೆರಿಕನ್ ಆಂಕಾಲಜಿ ಇನ್ ಸ್ಟಿಟ್ಯೂಟ್, ಸಿಟಿಝೆನ್ಸ್ ಹಾಸ್ಟಿಟಲ್ ಸಹಯೋಗದಲ್ಲಿ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಯಲ್ಲಿ ಇತ್ತೀಚೆಯ ಹೊಸ ತಂತ್ರಜ್ಞಾನ ಬೆಳವಣಿಗೆ ಕುರಿತು ಹಮ್ಮಿಕೊಂಡಿದ್ದ ನಿರಂತರ ವೈದ್ಯಕೀಯ ಕಾರ್ಯಾಗಾರ (ಸಿಎಂಇ)ದಲ್ಲಿ ಅವರು ಮಾತನಾಡಿದರು.
ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಂಡು ಚಿಕಿತ್ಸೆ ನೀಡುವುದರಿಂದ ಶಸ್ತ್ರ ಚಿಕಿತ್ಸೆ ಮಾಡುವುದು ಕೆಲವೊಂದು ಪ್ರಕರಣಗಳಿಗೆ ಅಗತ್ಯವಾಗುವುದಿಲ್ಲ. ರೋಬೊಟಿಕ್ ಸರ್ಜರಿ ಕ್ಯಾನ್ಸರ್ನ್ನು ಪರಿಣಾಕಾರಿಯಾಗಿ ನಿರ್ವಹಿಸಬಲ್ಲ ವಿಧಾನವಾಗಿದೆ.
ರೋಬೋಟಿಕ್ ಸರ್ಜರಿ ಕ್ಯಾನ್ಸರ್ ರೋಗಿಗಳಿಗೆ ವರದಾನ ಎಂದರು.
ಕ್ಯಾನ್ಸರ್ ಚಿಕಿತ್ಸೆ ಕ್ಷೇತ್ರದಲ್ಲಿ ಆಗಿರುವ ಬದಲಾವಣೆ ಮತ್ತು ತಂತ್ರಜ್ಞಾನ ಬಳಕೆ ಮಾಡಿಕೊಂಡು ಅತ್ಯಲ್ಪ ಸಮಯದಲ್ಲಿ ಪರಿಣಾಮಕಾರಿ ಚಿಕಿತ್ಸೆ
ನೀಡಬಹುದಾಗಿದೆ. ರೋಬೋಟಿಕ್ ಸರ್ಜರಿ ವಿಧಾನದಿಂದ ಕ್ಯಾನ್ಸರ್ ಪರಿಣಿತರಲ್ಲದವರೂ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು
ಅರಿತುಕೊಳ್ಳಬಹುದಾಗಿದೆ ಎಂದರು.
ಗಂಟಲು ಮತ್ತು ಥೈರಾಡ್ ಕ್ಯಾನ್ಸರ್ ಕಾಣಿಸಿಕೊಂಡವರಿಗೆ ಕನಿಷ್ಠ 10ರಿಂದ 30ಮಿಲಿ ಕ್ಯೂರಿಯಷ್ಟು ಬಳಸಿಕೊಂಡು ವಿಕಿರಣ ಚಿಕಿತ್ಸೆ
ನೀಡಬಹುದಾಗಿದೆ. ಹೆಚ್ಚು ಕ್ಯಾನ್ಸರ್ ಕಣಗಳಿದ್ದರೆ ಅದನ್ನು 100ಮಿಲಿ ಕ್ಯೂರಿಯಷ್ಟು ಬಳಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಎಂಆರ್ ಎಂಸಿ ಡೀನ್ ಡಾ| ಉಮೇಶ್ಚಂದ್ರ, ಬದಲಾದ ಜೀವನಶೈಲಿಯಿಂದ ಕ್ಯಾನರ್ನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೆಲವೊಂದು ಪದ್ಧತಿ ಪಾಲಿಸುವ ಮೂಲಕ ರೋಗಮುಕ್ತರಾಗಬಹುದು ಎಂದರು.
ಎಂಆರ್ಎಂಸಿ ಸರ್ಜರಿ ವಿಭಾಗ ಮುಖ್ಯಸ್ಥ ಡಾ| ವಿಜಯಕುಮಾರ ಕಪ್ಪಿಕೇರಿ, ಡಾ| ರಾಜಶೇಖರ ಪಾಟೀಲ, ಪ್ರಾಧ್ಯಾಪಕರಾದ ಡಾ| ಎಸ್.ಎಸ್.
ಕಾರಭಾರಿ, ಡಾ| ಸುರೇಶ ಪಾಟೀಲ, ಕೆಬಿಎನ್ ಕಾಲೇಜಿನ ಡಾ| ರವೀಂದ್ರ ದೇವಣಿ, ಇಎಸ್ ಐಸಿ ಕಾಲೇಜಿನ ಡಾ| ರವೀಂದ್ರ ದಡೇದ,
ಡಾ| ವಿಜಯಕುಮಾರ ವೇಮೂರಿ, ಬಸವೇಶ್ವರ ಆಸ್ಪತ್ರೆಯ ಮೆಡಿಕಲ್ ಸಹ ಅಧೀಕ್ಷಕ ಡಾ| ಎಂ.ಆರ್. ಪೂಜಾರಿ, ಡಾ| ರವೀಂದ್ರ ಪಾಟೀಲ,
ಡಾ| ಡಿ.ಎಸ್.ಸಜ್ಜನ, ಎಂಆರ್ಡಿ ವಿಭಾಗದ ಮುಖ್ಯಸ್ಥ ಸದಾನಂದ ಮಹಾಗಾಂವ, ಡಾ| ಪ್ರೀತಿ ಕೊಣ್ಣೂರ ಹಾಗೂ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಓದಿ : ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.