![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 21, 2021, 12:05 PM IST
ಕಲಬುರಗಿ: ಬಹಳ ದಿನಗಳಿಂದ ಮಧ್ಯಮಾವಧಿ (ಪೈಪ್ಲೈನ್) ಸಾಲ ವಿತರಿಸಲು ಮತ್ತೆ ಫಾರ್ಂಗಳ ವಿತರಣೆಗೆ ಮುಂದಾಗಲಾಗುತ್ತಿದೆ ಎನ್ನುವ ವದಂತಿಗೆ ಬುಧವಾರ ನಡೆದ ಇಲ್ಲಿನ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೆರೆ ಎಳೆಯಲಾಗಿದೆ.
ಬ್ಯಾಂಕ್ನ ಅಧ್ಯಕ್ಷರಾಗಿರುವ ಸೇಡಂ ಮತಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಮಧ್ಯಾಮಾವಧಿ ಸಾಲ ವಿತರಣೆಗೆ ಯಾವುದೇ ಫಾರಂ ಇಲ್ಲದೇ ಬರೀ ಸರಳ ಅರ್ಜಿಯೊಂದನ್ನು ರೈತರಿಂದ ಪಡೆದು ಅದನ್ನು ಆಯಾ ಸಂಬಂಧಪಟ್ಟ ಪ್ರಾಥಮಿಕ ಸಹಕಾರ ಸಂಘಕ್ಕೆ ಕಳುಹಿಸಿ ಅಲ್ಲಿಂದ ಸೂಕ್ತ ದಾಖಲಾತಿ ಪಡೆದು ಸಾಲ ಮಂಜೂರಾತಿ ನೀಡುವ ಮಾದರಿಯ, ಅದರಲ್ಲೂ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದಿರುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈಗಾಗಲೇ ನಬಾರ್ಡ್ ಬ್ಯಾಂಕ್ನ ಉನ್ನತ ಮಟ್ಟದ ಸಭೆಯಲ್ಲಿ ಮಧ್ಯಮಾವಧಿ ಸಾಲಕ್ಕೆ ಹಸಿರುನಿಶಾನೆ ನೀಡಲಾಗಿದ್ದು, ಡಿಸಿಸಿ ಬ್ಯಾಂಕ್ದಿಂದ ಮಧ್ಯಮಾವಧಿ ಸಾಲ ನೀಡಬಹುದಾಗಿದೆ. ಅಲ್ಲದೇ ಶೇ. 35ರಷ್ಟು ಪ್ರತಿಶತ ಸಾಲ ನೀಡುವುದಾಗಿ ಈಗಾಗಲೇ ನಬಾರ್ಡ್ ಪ್ರಕಟಿಸಿದೆ.
ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ನ ನಿರ್ದೇಶಕರಾಗಿ ಕಲ್ಯಾಣಪ್ಪ ಪಾಟೀಲ ಮಳಖೇಡ ನಾಮನಿರ್ದೇಶನ (ನೇಮಕ)ವಾಗಿದ್ದಾರೆ. ಬ್ಯಾಂಕ್ನ ಆಡಳಿತ ಮಂಡಳಿ ಸಭೆಯಲ್ಲೇ ನಾಮನಿರ್ದೇಶನದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೇಡಂ ತಾಲೂಕು ಕ್ಷೇತ್ರದಿಂದ ಚುನಾಯಿತರಾಗಿದ್ದ ನಂದಕಿಶೋರ ರೆಡ್ಡಿ ನಿಧನರಾದ ಪ್ರಯುಕ್ತ ತೆರವಾದ ಸ್ಥಾನಕ್ಕೆ ಕಲ್ಯಾಣರಾವ್ ಮಳಖೇಡ ಅವರನ್ನು ನೇಮಕ ಮಾಡಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ವೀರಶೈವ ಸಮಾಜದ ಉಪಾಧ್ಯಕ್ಷ ಕಲ್ಯಾಣರಾವ್ ಪಾಟೀಲ ನಾಮನಿರ್ದೆಶನ ವಿಷಯವನ್ನು ಅಧ್ಯಕ್ಷರು ಪ್ರಸ್ತಾಪಿಸಿದರು. ತದನಂತರ ನಾಮನಿರ್ದೇಶನ ಮಾಡಲಾಯಿತು.
ಅದೇ ರೀತಿ ಬ್ಯಾಂಕ್ ನೌಕರರಿಗೆ ಶೇ. 37 ರಷ್ಟು ತುಟ್ಟಿ ಭತ್ತೆ ಹೆಚ್ಚಳ, ಇದೇ ಅಕ್ಟೋಬರ್ 25ರಂದು ನಗರದ ಡಾ| ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆಸುವುದು ಹಾಗೂ ಅಗತ್ಯ ಸಿಬ್ಬಂದಿಗಳನ್ನು 11 ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ಇತರ ನಿರ್ಧಾರ ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಬ್ಯಾಂಕ್ ಉಪಾಧ್ಯಕ್ಷರಾದ ಸುರೇಶ ಸಜ್ಜನ್, ನಿರ್ದೇಶಕರಾದ ಶರಣಬಸಪ್ಪ ಪಾಟೀಲ ಅಷ್ಠಗಾ, ಸೋಮಶೇಖರ ಗೋನಾಯಕ, ಗೌತಮ ಪಾಟೀಲ, ಅಶೋಕ ಸಾವಳೇಶ್ವರ, ಅಪ್ಪಾಸಾಬ್ ಮಾನಕರ, ಬಾಪುಗೌಡ ಪಾಟೀಲ, ಗುರುನಾಥರೆಡ್ಡಿ, ಚಂದ್ರಶೇಖರ ತಳ್ಳಳ್ಳಿ, ಬ್ಯಾಂಕ್ ನ ಎಂಡಿ ಚಿದಾನಂದ ನಿಂಬಾಳ ಮತ್ತಿತರರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.