![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 14, 2020, 7:29 AM IST
ಕಲಬುರಗಿ: ಸಾಧಕ-ಬಾಧಕ ಅವಲೋಕಿಸದೇ ಸರ್ಕಾರ ಭೂ-ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮುಖಾಂತರ ರೈತರ ಜಮೀನನ್ನು ಉಳ್ಳವರ ಪಾಲು ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಎಸ್.ಕೆ. ಕಾಂತಾ ಟೀಕಿಸಿದ್ದಾರೆ.
ಭೂ ಸುಧಾರಣೆಯ ರಾಜ್ಯ ಸರ್ಕಾರದ ಕ್ರಮಕ್ಕೆ ಮಾಜಿ ಸಚಿವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಒಂದು ವೇಳೆ ತಿದ್ದುಪಡಿ ತಂದರೆ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆಯೂ ಬಿಜೆಪಿ ಸರ್ಕಾರವು ಸಾವಿರಾರು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಆದರೆ ಎಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸದೆ ಹಾಗೆ ಬಿಡಲಾಗಿದೆ. ಒಟ್ಟಾರೆ ಈಗಲೂ ಬಿಜೆಪಿ ಸರ್ಕಾರ ರೈತರ ಜಮೀನನ್ನು ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ, ರಿಯಲ್ ಎಸ್ಟೇಟ್ ದಂಧೆ ಮಾಡುವವರಿಗೆ ಮತ್ತು ಲ್ಯಾಂಡ್ ಮಾಫಿಯಾಗಳಿಗೆ ದೊರೆಯುವಂತೆ ಮಾಡಲು ಹೊರಟಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ರೈತರ ವಿರೋಧವಿದ್ದರೂ ಎಲ್ಲ ನಿಟ್ಟಿನಿಂದ ಒತ್ತಡ ತಂದು ಜಮೀನು ಸ್ವಾಧೀನ ಮಾಡಿಕೊಳ್ಳಲಾಗುತ್ತಿತ್ತು. ಅದೇ ರೀತಿ ಜಿಲ್ಲೆಯ ಸೇಡಂ ಸಿಮೆಂಟ್ ಕಂಪನಿಯು ಕಾಯ್ದೆ ವಿರೋಧಿ ಸಿ ರೈತರ ಜಮೀನು ಸ್ವಾಧೀನಪಡಿಸಿಕೊಂಡಿದೆ.ಜಮೀನು ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಐದು ವರ್ಷಗಳಿಂದಲೂ ನಿರಂತರ ಹೋರಾಟ ನಡೆಸಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳಿಗೆ, ದೊಡ್ಡ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ ಎಂದು ಹೇಳಿದರು.
ಕೃಷಿ ಭೂಮಿ ಪರಭಾರೆ ಸಂಬಂಧ ಜಾರಿಯಲ್ಲಿದ್ದ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79(ಎ)(ಬಿ)ಗೆ ತಿದ್ದುಪಡಿ ತರದಂತೆ ಎಲ್ಲ ಪ್ರತಿಪಕ್ಷಗಳು ಸಂಘಟಿತ ಹೋರಾಟ ನಡೆಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.