![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 22, 2022, 3:31 PM IST
ಯಡ್ರಾಮಿ: ತಾಲೂಕಿನ ಮಾಣಶಿವಣಗಿ ಹಾಗೂ ಹಂಗರಗಿ(ಕೆ) ಗ್ರಾಮಗಳಿಗೆ ಸಾರಿಗೆ ಬಸ್ ಸೌಕರ್ಯವನ್ನು ಕೂಡಲೇ ಒದಗಿಸುವಂತೆ ತಾಲೂಕು ಕರವೇ (ಪ್ರವೀಣಶೆಟ್ಟಿ ಬಣ) ಮುಖಂಡ ಸಾಹೇಬಗೌಡ ದೇಸಾಯಿ ಜೇವರ್ಗಿ ಸಾರಿಗೆ ವ್ಯವಸ್ಥಾಪಕರಿಗೆ ಒತ್ತಾಯಿಸಿದರು.
ಈ ವೇಳೆ ಸಾಹೇಬಗೌಡ ದೇಸಾಯಿ ಮಾತನಾಡಿ, ಮಾಣಶಿವಣಗಿ ಹಾಗೂ ಹಂಗರಗಿ ಗ್ರಾಮಗಳಿಗೆ ಬಸ್ಸಿನ ಓಡಾಟ ಇಲ್ಲದ ಕಾರಣ, ಎರಡೂ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪರಿಸ್ಥಿತಿ ತಿಳಿಸಿದರು.
ವಿದ್ಯಾರ್ಥಿಗಳು ನಿತ್ಯ ಬೆಳಗ್ಗೆ ಕಾಲೇಜು ತರಗತಿಗಳಿಗೆ ಹಾಜರಾಗಬೇಕಾದರೆ ಬಸ್ಗಳೆ ಇಲ್ಲ. ವಿದ್ಯಾರ್ಥಿಗಳು, ಗ್ರಾಮಸ್ಥರು ವಿವಿಧ ಕೆಲಸಗಳ ನಿಮಿತ್ತ ಪಟ್ಟಣಕ್ಕೆ ತೆರಳಲು ನಿತ್ಯವೂ ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ಸಾರಿಗೆ ಘಟಕದ ವ್ಯವಸ್ಥಾಪಕರು ಗ್ರಾಮಗಳಿಗೆ ಬಸ್ ಸೌಕರ್ಯವನ್ನು ನಾಲ್ಕು ದಿನದ ಒಳಗೆ ಒದಗಿಸಬೇಕು. ಇಲ್ಲದಿದ್ದರೆ, ಬರುವ ದಿನಗಳಲ್ಲಿ ಯಡ್ರಾಮಿ ಬಸ್ ನಿಲ್ದಾಣಕ್ಕೆ ಬೀಗ ಜಡಿದು ನೂರಾರು ಕರವೇ ಕಾರ್ಯಕರ್ತರೊಂದಿಗೆ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮುಖಂಡರಾದ ಸಾಂಬಶಿವ ಹಿರೇಮಠ, ದೇವೀಂದ್ರ, ಹಣಮಂತ ಕೂಡಿ ಕಾಚಾಪೂರ, ಸಿದ್ಧಾರೂಢ ಸುಬೇದಾರ, ಚಂದಪ್ಪಗೌಡ ಮಾಲಿಪಾಟೀಲ, ಕಾಂತಪ್ಪ ವಾಲೀಕಾರ್, ವಿಶ್ವಾರಾಧ್ಯ ಹಿರೇಮಠ ಇತರರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.