ಫೈಲ್ ನಡಕೊಂಡು ಬರ್ತಾವೇನ್ರಿ?: ತಮ್ಮದೇ ಸಚಿವರಿಗೆ ಖರ್ಗೆ ತರಾಟೆ
Team Udayavani, Jan 23, 2017, 3:45 AM IST
ಕಲಬುರಗಿ: ಹೈದರಾಬಾದ್ ಕರ್ನಾಟಕ ಭಾಗದ ಲೋಕೋಪಯೋಗಿ ಇಲಾಖೆಯ ಚೀಫ್ ಇಂಜಿನಿಯರ್ ಕಚೇರಿ ಕಲಬುರಗಿಯಲ್ಲಾಗಲಿ ಎನ್ನುವ ನಮ್ಮ ಒತ್ತಾಸೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ, ವೇದಿಕೆಯಲ್ಲಿದ್ದ ತಮ್ಮದೇ ಪಕ್ಷದ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರನ್ನು ತರಾಟೆ ತೆಗೆದುಕೊಂಡರು.
ಭಾನುವಾರ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “371(ಜೆ) ಕಲಂ ಅಡಿ ಹೈ-ಕ ಭಾಗಕ್ಕೆ ವಿಶೇಷ ಸ್ಥಾನ ಲಭಿಸಿರುವ ಹಿನ್ನೆಲೆಯಲ್ಲಿ ನಮಗೆ ಪ್ರತ್ಯೇಕ ಸಿಇ ಕಚೇರಿ ಅಗತ್ಯವಿದೆ. ಪ್ರತಿಯೊಂದು ಯೋಜನೆ ಫೈಲುಗಳು 600 ಕಿ.ಮೀ. ದೂರದ ಬೆಂಗಳೂರಿಗೆ ಹೋಗಿ ಬರಲು ವರ್ಷಗಳೇ ಬೇಕಾಗುತ್ತಿದ್ದು, ಅಭಿವೃದ್ಧಿ ಕುಂಠಿತವಾಗುತ್ತಿದೆ. ಫೈಲುಗಳು ನಡಕೊಂಡು ಹೋಗಿ, ನಡಕೊಂಡು ಬರ್ತಾವೇನ್ರಿ?ಹಿಂಗಾಗಿ ಲೇಟಾಗ್ತಿದೆ ಅಲಿÅ.. ಸಚಿವ ಶರಣಪ್ರಕಾಶರೇ.. ಏನಿದು?’ ಎಂದು ಸಭೆಯಲ್ಲಿದ್ದ ಸಚಿವರಿಗೆ ಪ್ರಶ್ನಿಸಿದರು.
ಖರ್ಗೆ ಅವರ ಮಾತಿನ ದಾಳಿಗೆ ಗಲಿಬಿಲಿಗೊಂಡ ಸಚಿವ ಡಾ| ಶರಣಪ್ರಕಾಶ ಪಾಟೀಲ, “ಸರ್ ಮೊನ್ನೆ ಅನುಮತಿ ಸಿಕ್ಕಿದೆ. ಆದಷ್ಟು ಬೇಗ ಕಾಮಗಾರಿ ಆರಂಭವಾಗುತ್ತದೆ’ ಎಂದು ಹೇಳಿದರೂ, ಖರ್ಗೆ ಮಾತಿನ ವರಸೆ ಬಿಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.