ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೆಕೆಆರ್ ಡಿಬಿಗೆ 5000 ಕೋಟಿ ರೂ. ಅನುದಾನ: ಖಂಡ್ರೆ


Team Udayavani, Mar 6, 2022, 3:52 PM IST

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೆಕೆಆರ್ ಡಿಬಿಗೆ 5000 ಕೋಟಿ ರೂ. ಅನುದಾನ: ಖಂಡ್ರೆ

ಕಲಬುರಗಿ: ಸಂವಿಧಾನದ 371 ಜೆ ವಿಧಿ ಅಡಿ ಅಸ್ತಿತ್ವಕ್ಕೆ ಬಂದಿರುವ ಕಲ್ಯಾಣ ಪ್ರದೇಶ ಅಭಿವೃದ್ಧಿ ಮಂಡಳಿಗೆ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ವಾರ್ಷಿಕ 5000 ಕೋ. ರೂ. ಅನುದಾನ ಕೊಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಹೇಳಿದರು.

ರವಿವಾರ ನ ಕಲಬುರಗಿ ದಕ್ಷಿಣ ಮತಕ್ಷೇತ್ರದ ಸದಸ್ಯತ್ವ ಅಭಿಯಾನವನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಬಿಜೆಪಿ ಸರ್ಕಾರ ಮಂಡಳಿಗೆ ಮೂರು ಸಾವಿರ ಕೋ.ರೂ ಅನುದಾನ ಎಂಬುದಾಗಿ ಬಜೆಟ್ ದಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ ಮಂಡಳಿಗೆ ನೀಡಲಾಗಿರುವ ಅನುದಾನವನ್ನು ಇತರ ಇಲಾಖೆಗಳಿಗೆ ಬರುವ ಅನುದಾನ ಕಡಿತ ಮಾಡಿ ನೀಡುವುದು ಸಮಂಜಸವಲ್ಲ. ವಿಮಾನ ನಿಲ್ದಾಣ, ಜಯದೇವ್ ಆಸ್ಪತ್ರೆ ಹಾಗೂ ನೀರಾವರಿ ಯೋಜನೆ ಸೇರಿದಂತೆ ಇತರ ಕಾಮಗಾರಿಗಳಿಗೆ ಕೆಕೆಆರ್ ಡಿಬಿ ಅನುದಾನವನ್ನು ಬಳಸುವುದು ಸರಿಯಲ್ಲ.‌ ಒಂದು ವೇಳೆ ಸರ್ಕಾರಕ್ಕೆ ನಿಜವಾಗಿ ಈ ಭಾಗ ಅಭಿವೃದ್ವಿಯಾಗಬೇಕೆಂದರೆ ಮಂಡಳಿಗೆ ಅನುದಾನ ವಿಶೇಷ ಅಭಿವೃದ್ದಿಗೆ ಬಳಕೆಯಟಗಬೇಕು. ‌ಆದರೆ ತಮ್ಮ ಸರ್ಕಾರ ಬಂದಲ್ಲಿ ಮಂಡಳಿಗೆ ಐದು ಸಾವಿರ ಕೋ.ರೂ ನೀಡುವುದರ ಮುಖಾಂತರ ಈ ಭಾಗದ ಅಭಿವೃದ್ಧಿ ಗೆ ಮತ್ತೆ ನಾಂದಿ ಹಾಡಲಾಗುವುದು ಎಂದು ಭರವಸೆ ನೀಡಿದರು.‌

ಈ ಭಾಗದ ಅಭಿವೃದ್ದಿಯಾಗುವಲ್ಲಿ ಮರಳಿ ಕಾಂಗ್ರೆಸ್ ಪಕ್ಷ ಅಧಿಕಾರಕದಕ್ಕೆ ತರುವಲ್ಲಿ ಪಕ್ಷದ ಶ್ರಮ ಅಗತ್ಯವಿದೆ ಎಂದ ಖಂಡ್ರೆ, ಮುಂಬರುವ ವಿಧಾನಸಭೆ ಚುನಾವಣೆ ವೇಳೆಯೊಳಗೆ ಹೆಚ್ಚು ಹೆಚ್ಚು ಸದಸ್ಯತ್ವ ನೋಂದಣಿ‌ ಮಾಡಿಸಿ ಪಕ್ಷವನ್ನು ತಳಮಟ್ಟದಿಂದ ಬಲಿಷ್ಠಗೊಳಿಸಬೇಕು. ‌ಮಾರ್ಚ್ ತಿಂಗಳ 31 ರವರೆಗೆ ಅಭಿಯಾನ‌‌ ಇರಲಿದೆ ಎಂದರು.

ಸದಸ್ಯತ್ವ ಮಾಡುವಾಗ ಎಚ್ಚರಿಕೆ ವಹಿಸಬೇಕು. ಖೊಟ್ಟಿ ಸದಸ್ಯತ್ವ ಅಗುವುದನ್ನು ತಡೆಯಬೇಕು. ಈ ಬಗ್ಗೆ ಮುಖ್ಯ ನೋಂದಣಿಗಾರರು ಸದಸ್ಯರಾಗ ಬಯಸುವ ವ್ಯಕ್ತಿಗಳ ಪೂರ್ವಾಪರ ತಿಳಿದುಕೊಳ್ಳಬೇಕು. ಕೆಲವು ಕಡೆ ಖೊಟ್ಟಿ ಸದಸ್ಯರು ಆಗಿರುವ ಬಗ್ಗೆ ಮಾಹಿತಿ ಇದೆ. ಅಂತಹ ಸದ್ಯತ್ವವನ್ನು ಯುವಕರನ್ನು ಅದರಲ್ಲೂ ಯುವತಿಯರ ಹೆಚ್ಚು ಹೆಚ್ಚು ಸದಸ್ಯತ್ವ ಮಾಡಬೇಕು ಎಂದು ಖಂಡ್ರೆ ಕರೆ ನೀಡಿದರು.

ಒಂದು ಬೂತ್ ನ ಮುಖ್ಯ ನೋಂದಣಿಗಾರರು ಮತ್ತೊಂದು ಬೂತ್ ನಲ್ಲಿ ಡಿಜಿಟಲ್ ಮಾಡಬಹುದು. ಈ ತರ ಮಾಡಲಾದ‌ ನೋಂದಣಿಯನ್ನು ತಾಂತ್ರಿಕ ಸಮಿತಿ‌ ಪರಿಶೀಲನೆ ನಡೆಸುತ್ತದೆ. ಕಳೆದ ಚುನಾವಣೆಯಲ್ಲಿ ನಾವು ದಕ್ಷಿಣದಲ್ಲಿ‌ ಸೋತಿದ್ದೇವೆ. ಆದರೆ ಮುಂದಿನ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಬೇಕು. ಹಾಗಾಗಿ ಪ್ರತಿ‌ಬೂತ್ ನಲ್ಲಿಯೂ ಸುಮಾರು 200 ಸದಸ್ಯರನ್ನು ಮಾಡಬೇಕು ಎಂದರು.

ಈ‌ ಸಂದರ್ಭದಲ್ಲಿ ‌ಸಭೆಯಲ್ಲಿ ಹಾಜರಿದ್ದ‌ ಮುಖ್ಯ ನೋಂದಣಿಗಾರರು ಹಾಗೂ ನೋಂದಣಿಗಾರರೊಂದಿಗೆ ಸಂವಾದ ಮಾಡಿದ‌ ಶಾಸಕ ಹಾಗೂ‌ ಕೆಪಿಸಿಸಿ‌ ವಕ್ತಾರರಾದ ಪ್ರಿಯಾಂಕ್ ಖರ್ಗೆ ಹಾಗೂ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಮಾರ್ಚ್ 31 ರವರೆಗೆ ಸದಸ್ಯತ್ವ ಅಭಿಯಾನ ಚಾಲನೆಯಲಿರಲಿದೆ ಎಂದು ಹೇಳಿದರು. ‌

ವಿಧಾನಸಭೆ ವಿರೋಧ ಪಕ್ಷದ ನಾಯಕ ಡಾ. ಅಜಯಸಿಂಗ್ ಮಾತನಾಡಿ, ಬಿಜೆಪಿ ಸರ್ಕಾರ ಅಭಿವೃದ್ಧಿ ಎಂಬುದನ್ನೇ ಮರೆತ್ತಿದೆ ಎಂದು ವಾಗ್ದಾಳಿ ನಡೆಸಿದರು.‌

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.