ಕನ್ನಡ ಹೋರಾಟಗಾರರು ಸೇನಾನಿಗಳಾಗಲಿ
Team Udayavani, Sep 1, 2022, 3:40 PM IST
ಯಡ್ರಾಮಿ: ನಾಡು-ನುಡಿ, ಭಾಷೆ-ಗಡಿ ರಕ್ಷಣೆಗೆ ಕಂಕಣ ಬದ್ಧರಾಗ ಬಯಸುವ ಯುವ ಕಾರ್ಯಕರ್ತರು ಜಾತಿ, ಧರ್ಮಗಳ ವಾಸನೆ ಸುಳಿಯದಂತೆ ಸೇನಾನಿಗಳಾಗಿ ಕಾರ್ಯನಿರ್ವ ಹಿಸಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂತೋಷ ನವಲಗುಂದ ಹೇಳಿದರು.
ತಾಲೂಕಿನ ಮಳ್ಳಿ ಗ್ರಾಮದಲ್ಲಿ ನೂತನವಾಗಿ ರಚನೆಯಾದ ಜೈ ಕರ್ನಾಟಕ ಸಂಘಟನೆ ಗ್ರಾಮ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೈ ಕರ್ನಾಟಕ ಸಂಘಟನೆಯಿಂದ ವಿಶೇಷ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಸಂಘಗಳು ಕಟ್ಟುವುದು ಕೇವಲ ಶಕ್ತಿ ಪ್ರದರ್ಶನಕ್ಕಲ್ಲ. ಸಂಘದ ಮೂಲ ಉದ್ದೇಶಗಳನ್ನು ಈಡೇರಿಸುವತ್ತ ಪ್ರತಿ ಕಾರ್ಯಕರ್ತರು ನಿರಂತರ ಜಾಗೃತಿ ವಹಿಸಬೇಕು ಎಂದರು.
ಗ್ರಾಮದ ಮುಖಂಡ ಗೊಲ್ಲಾಳಪ್ಪಗೌಡ ಪೊಲೀಸ್ಪಾಟೀಲ, ಸಂತೋಷ ಯಾದಗಿರಿ, ಗ್ರಾಪಂ ಉಪಾಧ್ಯಕ್ಷ ಬಸನಗೌಡ ಮಾಲಿಪಾಟೀಲ ಸಸಿ ನೆಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖಂಡರಾದ ಮಲರೆಡ್ಡಿ ಕೊಂಗಂಡಿ, ರಮೇಶ ಸಾಹು ಸೂಗೂರ, ಶಿವನಗೌಡ ಪೊಲೀಸ್ಪಾಟೀಲ, ರಾಮನಗೌಡ ಪೊಲೀಸ್ಪಾಟೀಲ, ಡಾ|ಜಾಫರ್ ಗುಡ್ನಾಳ, ಜೈ ಕರ್ನಾಟಕ ತಾಲೂಕು ಅಧ್ಯಕ್ಷ ಅಮರನಾಥ ಕುಳಗೇರಿ, ಗ್ರಾಮ ಘಟಕದ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ಪಾಟೀಲ, ನಿಂಗನಗೌಡ ಲಕ್ಕೊಂಡ, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಮೋಫೆಪ್ಪ ದೇವರಮನಿ ಹಾಗೂ ಗ್ರಾಪಂ ಸದಸ್ಯರು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.