ಭವ್ಯ ಭಾರತದ ಭವಿಷ್ಯ ಕಟ್ಟೋಣ: ಚಕ್ರವರ್ತಿ ಸೂಲಿಬೆಲೆ
Team Udayavani, Jul 23, 2018, 11:19 AM IST
ಜೇವರ್ಗಿ: ಭವ್ಯ ಭಾರತದ ಭವಿಷ್ಯ ಕಟ್ಟಲು ಯುವಜನಾಂಗ ಗಡಿಕಾಯುವ ಈ ದೇಶದ ಸೈನಿಕರಂತೆ ಕೆಲಸ ಮಾಡಬೇಕಿದೆ ಎಂದು ಯುವ ಬ್ರಿಗೇಡ್ನ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಪಟ್ಟಣದ ಸಜ್ಜನ ಕಲ್ಯಾಣ ಮಂಟಪದ ಆವರಣದಲ್ಲಿ ರವಿವಾರ ಸಂಜೆ ಯುವ ಬ್ರಿಗೇಡ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯೋತ್ಸವ ನಿಮಿತ್ತ ರಾಷ್ಟ್ರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದು 20ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ. ಈ ದೇಶದ ಪ್ರಧಾನಿ ಪಾಕಿಸ್ತಾನದ ಬಾಲ ಕಟ್ ಮಾಡಿದ್ದಾರೆ. ಪಾಕ್ ಈ ದೇಶವನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಲು ಹೊರಟರೆ ನಮ್ಮ ಪ್ರಧಾನಿ ಪಾಕಿಸ್ತಾನವನ್ನು ನಾಲ್ಕು ಭಾಗಗಳನ್ನಾಗಿ ಮಾಡಿದ್ದಾರೆ ಎಂದರು.
ದೇಶದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯಾದಲ್ಲಿ ಮಾತ್ರ ಭಾಗ್ಯಶಾಲಿ, ಸದೃಢಶಾಲಿ ಭಾರತದ ನಿರ್ಮಾಣ ಸಾಧ್ಯ. ಈ ಪುಣ್ಯ ಭೂಮಿಯಲ್ಲಿ ಹುಟ್ಟುವ ಪ್ರತಿಯೊಬ್ಬ ವ್ಯಕ್ತಿಗೂ ಒಂದೊಂದು ಶಕ್ತಿಯಾಗಬಲ್ಲ ಸಾಮರ್ಥ್ಯವಿದೆ ಎಂದು ಹೇಳಿದರು.
ಸೊನ್ನದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ, ಯಡ್ರಾಮಿ ವಿರಕ್ತ ಮಠದ ಸಿದ್ಧಲಿಂಗ ದೇವರು ಸಮ್ಮುಖ ವಹಿಸಿದ್ದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮುಖಂಡರಾದ ರಮೇಶಬಾಬು ವಕೀಲ, ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಅನೀಲ ರಾಂಪೂರ, ಸುನೀಲ ಸಜ್ಜನ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈಶ್ವರ ಹಿಪ್ಪರಗಿ, ವಿಶ್ವಪಾಟೀಲ, ಧರ್ಮು ಚಿನ್ನಿ ರಾಠೊಡ, ಅಶೋಕ ಗುಡೂರ, ಸಾಯಬಣ್ಣ ದೊಡ್ಮನಿ, ವೀರೇಶ ಕಟ್ಟಿಸಂಗಾವಿ, ಎ.ಸಿ.ಹಾರಿವಾಳ, ಪ್ರಶಾಂತ ಮಾಗಣಗೇರಿ, ಸಂತೋಷ
ನವಲಗುಂದ, ಶಿವಪುತ್ರ ನೆಲ್ಲಗಿ, ಸಿದ್ದು ಚಿನಗುಡಿ, ಸುರೇಶ ನೇದಲಗಿ, ರೇವಣಸಿದ್ದ ಅಕ್ಕಿ, ಶ್ರೀಶೈಲಗೌಡ ಕರಕಿಹಳ್ಳಿ, ಸಿದ್ದು ಅಂಗಡಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು
Chincholi: ಯುವಕನ ಕೊಲೆ ; ಕಾರಣ ನಿಗೂಢ
Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ
Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ
Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ
Udupi: ಸಂತೆಕಟ್ಟೆ ಓವರ್ಪಾಸ್ ಕಾಮಗಾರಿ ಚುರುಕು
Kulai: ಬೃಹತ್ ಟ್ರಕ್ ಓಡಾಟದಿಂದ ರಸ್ತೆಗೆ ಹಾನಿ
Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್ ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.