ಹೆಳವರ ಮನೆಯಂಗಳ ನೋಡಿದರು!
Team Udayavani, Jan 5, 2018, 10:10 AM IST
ವಾಡಿ: ಪಟ್ಟಣದ ವಾರ್ಡ್-21ರ ಹನುಮಾನ ನಗರ ಬಡಾವಣೆಯಲ್ಲಿನ ಹೆಳವರ ಓಣಿಗೆ ಸಿಸಿ ರಸ್ತೆ ಹಾಗೂ ಚರಂಡಿ
ಸೌಲಭ್ಯ ಒದಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಶಂಕರ ಡಿ.ಕಾಳೆ ಮೇಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
2017ನೇ ಸಾಲಿನ ಆಗಸ್ 8ರಂದು ಉದಯವಾಣಿಯಲ್ಲಿ ಪ್ರಕಟಗೊಂಡಿದ್ದ ಹೆಳವರ ಮನೆಯಂಗಳ ನೋಡಿ ಎಂಬ
ವಿಶೇಷ ವರದಿ ಗಮನಿಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಈ ಕುರಿತು ಸ್ಪಷ್ಟ ಉತ್ತರ ನೀಡುವಂತೆ ವಾಡಿ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದು ಆದೇಶ ನೀಡಿದರು. ಇದಕ್ಕೆ
ಪ್ರತಿಯಾಗಿ ಉಲ್ಲೇಖೀತ ಪತ್ರ ಸಂಖ್ಯೆಯೊಂದಿಗೆ ಮುಖ್ಯಾಧಿಕಾರಿಕಾಳೆ, ಅಭಿವೃದ್ಧಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ತಳ ಸಮುದಾಯಕ್ಕೆ ಸೇರಿದ ಹೆಳವರ ಜನಾಂಗ ವಾಸಿಸುವ ಬಡಾವಣೆಯಲ್ಲಿ ರಸ್ತೆ, ಚರಂಡಿ, ನೈರ್ಮಲ್ಯ ಹಾಗೂ ಶೌಚಾಲಯ ಸೇರಿದಂತೆ ಇತರ ಸಮಸ್ಯೆಗಳಿರುವುದನ್ನು ಪಟ್ಟಿ ಮಾಡಿರುವ ಅಧಿಕಾರಿಗಳು, ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದಾರೆ. 2017-18ನೇ ಸಾಲಿನ 3ನೇ ಹಂತದ ನಗರೋತ್ಥಾನ ಯೋಜನೆಯಡಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು,
ಶೀಘ್ರದಲ್ಲಿಯೇ ಕಾಮಗಾರಿ ಕಾರ್ಯಗತಗೊಳಿಸಲಾಗುವುದು.
ಸಾರ್ವಜನಿಕರ ಮನೆಯಂಗಳದಲ್ಲಿ ಮರಂ ಹಾಕಿ ಮಳೆ ನೀರು ಮತ್ತು ಬಚ್ಚಲು ನೀರು ಒಂದೆಡೆ ನಿಲ್ಲದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ.
ಮೂಲಭೂತ ಸೌಕರ್ಯಗಳಿಲ್ಲದೆ ತೀರಾ ಹದಗೆಟ್ಟಿರುವ ಹನುಮಾನಗರ ಬಡಾವಣೆಯಲ್ಲಿನ ಹೆಳವರ ಮನೆಯಂಗಳಕ್ಕೆ
ಅಧಿಕಾರಿಗಳು ಕೊನೆಗೂ ರಸ್ತೆ ನಿರ್ಮಿಸಲು ಮುಂದಾಗಿದ್ದು, ಬಡಾವಣೆಯ ನಿವಾಸಿಗಳಲ್ಲಿ ಹರ್ಷ ಮೂಡಿದೆ. ಆದಷ್ಟು ಬೇಗ ಕಾಮಗಾರಿ ಆರಂಭಗೊಳ್ಳಲಿ ಎಂದು ವಾರ್ಡ್ ಸದಸ್ಯೆ ಬಿಜೆಪಿಯ ಜೈನಾಬಾಯಿ ನಾಯಕ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ
Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು
Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.