![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 29, 2024, 4:01 PM IST
ಕಲಬುರಗಿ: ಜಿಲ್ಲೆಯ ಜೀವನದಿ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಯಶದಿಂದ ನೀರು ಹರಿವು ಬಿಡಲಾಗುತ್ತಿದ್ದು, ಭೀಮಾ ನದಿ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದೆ.
ಕಳೆದ ನಾಲ್ಕು ದಿನಗಳಿಂದ ಒಂದು ಲಕ್ಷ ಕ್ಯೂಸೆಕ್ಸ್ ನೀರು ಉಜನಿ ಅಣೆಕಟ್ಟಿನಿಂದ ನೀರು ಬಿಡುತ್ತಿರುವುದರಿಂದ ಭೀಮಾ ನದಿ ಪ್ರವಾಹ ಮಟ್ಟದಲ್ಲಿ ಹರಿಯಲಾರಂಭಿಸಿದೆ.
ಒಟ್ಟಾರೆ ಭೀಮಾ ನದಿಯಲ್ಲಿ ಒಳಹರಿವು 145,000 ಕ್ಯೂಸೆಕ್ಸ್ ಇದ್ದರೆ ಹೊರ ಹರಿವು ಸಹ 145,000 ಕ್ಯೂಸೆಕ್ಸ್ ಇದೆ. ಹೀಗಾಗಿ ಭೀಮಾ ಏತ ನೀರಾವರಿ ಜಲಾಶಯದ 29 ಗೇಟುಗಳ ಪೈಕಿ 22 ಗೇಟುಗಳ ಮೂಲಕ ನೀರು ಹರಿಯ ಬಿಡಲಾಗುತ್ತಿದೆ. ಹೀಗಾಗಿ ಶ್ರೀಕ್ಷೇತ್ರ ದೇವಲ್ ಗಾಣಗಾಪುರ- ಇಟಗಾ ನಡುವೆ ಸಂಪರ್ಕ ಕಡಿತವಾಗಿದೆ. ಅದಲ್ಲದೇ ಶ್ರೀಕ್ಷೇತ್ರ ಮಣ್ಣೂರು ಯಲ್ಲಮ್ಮ ದೇವಾಲಯ ಸಹ ಜಲಾವೃತಗೊಂಡಿದೆ.
ಇತ್ತ ಕಲಬುರಗಿ ಜಿಲ್ಲೆಯಲ್ಲಿ ಮಳೆ ಇಲ್ಲ. ಆದರೆ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದು ವೇಳೆ ಕಲಬುರಗಿ ಜಿಲ್ಲೆಯಲ್ಲೂ ಮಳೆಯಾಗಿದಲ್ಲಿ ಭೀಮಾ ಪ್ರವಾಹ ಮತ್ತಷ್ಟು ಅಪಾಯ ಮಟ್ಟದಲ್ಲಿ ಹರಿಯುವ ಆತಂಕ ಎದುರಾಗುವ ಸಾಧ್ಯತೆಗಳಿವೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.