ಅಪೌಷ್ಟಿ ಕತೆ: ಪೋಷಕರಿಗೆ ಸಿಗುತ್ತೆ ದಿನದ ಭತ್ಯೆ


Team Udayavani, Jul 4, 2021, 3:07 PM IST

werghgfrerhgtnhgt11

ಕಲಬುರಗಿ: ಕೊರೊನಾ ಸೋಂಕಿನ ಸಂಭವನೀಯ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪ್ರಮಾಣ ಬೀರುತ್ತದೆ ಎನ್ನುವ ತಜ್ಞರ ಹೇಳಿಕೆ ಹಿನ್ನೆಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತಿದೆ.

ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರದ ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರ (ಎನ್‌ಆರ್‌ಸಿ) ಕ್ಕೆ ಮಕ್ಕಳು ದಾಖಲಾದರೆ, ಮಗುವಿನೊಂದಿಗೆ ಇರುವ ತಾಯಿ ಅಥವಾ ತಂದೆಗೆ ದಿನದ ಭತ್ಯೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಸರಾಸರಿ ಎರಡೂವರೆ ಲಕ್ಷ ಮಕ್ಕಳು ಆರು ವರ್ಷದೊಳಗಿನವರು ಇದ್ದಾರೆ. ಇದರಲ್ಲಿ 26,571 ಮಕ್ಕಳು ಸಾಧಾರಣ ಅಪೌಷ್ಟಿಕ ಮತ್ತು 607 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ತೀವ್ರವಾಗಿ ನರಳುತ್ತಿರುವ ಮಕ್ಕಳಿಗಾಗಿ ನಾಲ್ಕು ಪುನಶ್ಚೇತನ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ನಗರದ ಹಳೆ ಜಿಲ್ಲಾಸ್ಪತ್ರೆ (ಜಿಮ್ಸ್‌ ಆವರಣ)ಯಲ್ಲಿ 10 ಬೆಡ್‌ ಹಾಗೂ ಚಿಂಚೋಳಿ, ಚಿತ್ತಾಪುರ, ಸೇಡಂನಲ್ಲಿ ತಲಾ ಐದು ಬೆಡ್‌ಗಳ ಶಾಶ್ವತ ಪುನಶ್ಚೇತನ ಕೇಂದ್ರಗಳು ಇವೆ. ಈ ನಾಲ್ಕು ಕೇಂದ್ರಗಳಲ್ಲಿ ಈಗಾಗಲೇ 79 ಜನ ಅಪೌಷ್ಟಿಕ ಮಕ್ಕಳನ್ನು ದಾಖಲಿಸಲಾಗಿದೆ ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್‌. ಚಿಂಚೋಳಿಯಲ್ಲಿ ಪ್ರತ್ಯೇಕವಾದ ಹಾಸ್ಟೆಲ್‌ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ 48 ಮಕ್ಕಳನ್ನು ದಾಖಲಿಸಲಾಗಿದೆ.

ಕೊರೊನಾ ಭೀತಿಯಿಂದ ಆಸ್ಪತ್ರೆಗೆ ಮಕ್ಕಳನ್ನು ಕರೆದುಕೊಂಡು ಬರಲು ಪೋಷಕರು ಹಿಂದೇಟು ಹಾಕುತ್ತಿರುವ ಕಾರಣಕ್ಕೆ ಹಾಸ್ಟೆಲ್‌ ವ್ಯವಸ್ಥೆ ಮಾಡಲಾಗಿದೆ. ಇತ್ತ, ಸೇಡಂ-13, ಕಲಬುರಗಿ-12 ಮತ್ತು ಚಿತ್ತಾಪುರದಲ್ಲಿ ಆರು ಮಕ್ಕಳು ದಾಖಲಾಗಿದ್ದಾರೆ. ಉಳಿದ ತಾಲೂಕು ಆಸ್ಪತ್ರೆಗಳಲ್ಲೂ ಇಂತಹ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪೌಷ್ಟಿಕ ಆಹಾರ: ಪುನಶ್ಚೇತನ ಕೇಂದ್ರಗಳಿಗೆ ದಾಖಲಾಗುವ ಮಕ್ಕಳಿಗೆ ಮುಖ್ಯವಾಗಿ ಅವರ ಆರೈಕೆ ಮತ್ತು ಅವರಿಗೆ ಪೂರಕವಾದ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮಕ್ಕಳ ತಜ್ಞರು ಮತ್ತು ಆಹಾರ ಪದ್ಧತಿ ತಜ್ಞರು ಪರೀಕ್ಷಿಸಿ ಮಕ್ಕಳಿಗೆ ಅಗತ್ಯವಾದ ಆಹಾರ ಪೂರೈಸಲಾಗುತ್ತದೆ. ಮಕ್ಕಳ ತೂಕದ ಆಧಾರ ಮೇಲೆ ಪೌಷ್ಟಿಕ ಆಹಾರ ಕೊಡಲಾಗುತ್ತದೆ ಎಂದು ಜಿಲ್ಲಾ ಶಸ್ತ್ರಜ್ಞ ಡಾ| ಎ.ಎಸ್‌. ರುದ್ರವಾಡಿ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳಿಗಾಗಿ ಯೇ ಪ್ರತ್ಯೇಕ ಅಡುಗೆ ಕೋಣೆ ಇದೆ. ಆಹಾರ ಪದ್ಧತಿ ತಜ್ಞರು ಸಲಹೆಯಂತೆ ಆಹಾರ ಪೂರೈಸುವ ಉದ್ದೇಶದಿಂದಲೇ ಈ ವ್ಯವಸ್ಥೆ ಮಾಡಲಾಗಿದೆ.

ಮಕ್ಕಳಿಗೆ ಹಾಲು, ಮೊಟ್ಟೆ, ಶೇಂಗಾ ಉಂಡೆ, ಮೊಳಕೆ ಕಾಳು, ಅಗತ್ಯವಾದಲ್ಲಿ ಗಂಜಿ ವಿತರಿಸಲಾಗುತ್ತದೆ. ಪ್ರತಿ ಮಗುವಿನೊಂದಿಗೆ ಒಬ್ಬ ಪೋಷಕರು ಇರಲು ಅವಕಾಶವಿದೆ ಎನ್ನುತ್ತಾರೆ ಅವರು.

ಪಾಲಕರಿಗೆ ದಿನದ ಭ್ಯತೆ: ಅಪೌಷ್ಟಿಕತೆಯು ಕಲ್ಯಾಣ ಕರ್ನಾಟಕ ಭಾಗಕ್ಕೆ ಪೆಡಂಭೂತವಾಗಿ ಕಾಡುತ್ತಿದೆ. ಬಡತನ, ಅನಕ್ಷರತೆ, ಬಾಲ್ಯ ವಿವಾಹದಂತ ಪದ್ಧತಿಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಮಕ್ಕಳು ಹುಟ್ಟುತ್ತಲೇ ಕಡಿಮೆ ತೂಕ ಹೊಂದಿ, ಮಾನಸಿಕ ಮತ್ತು ದೈಹಿಕವಾಗಿ ಬಳಲುವಂತೆ ಆಗುತ್ತದೆ. ಇಂತಹ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕಾದ ತಂದೆ-ತಾಯಿ ದುಡಿಯುವುದರಲ್ಲೇ ಕಳೆದು ಹೋಗುತ್ತಾರೆ. ಹೀಗಾಗಿ ವೈದ್ಯರ ಸೂಚನೆಯಂತೆ ಪುನಶ್ಚೇತನ ಕೇಂದ್ರಗಳಿಗೆ ಗಂಭೀರ ಅಪೌಷ್ಟಿಕ ಮಕ್ಕಳನ್ನು ದಾಖಲಿಸಿದರೆ, ಅವರ ಜತೆಗೆ ಇರುವ ಪಾಲಕರಿಗೆ ದಿನ ಭತ್ಯೆಯನ್ನು ಸರ್ಕಾರ ಒದಗಿಸುತ್ತಿದೆ. ಸಾಕಷ್ಟು ಪೋಷಕರು ಅಪೌಷ್ಟಿಕ ಮಕ್ಕಳು ಕಾಳಜಿ ವಹಿಸುವುದು ಕಂಡು ಬರುತ್ತಿಲ್ಲ. ಅವರು ತಮ್ಮ ನಿತ್ಯದ ಕೂಲಿ ಬಗ್ಗೆಯೇ ಗಮನ ಕೊಡುತ್ತಾರೆ. ತೀವ್ರ ಅಪೌಷ್ಟಿಕ ಮಕ್ಕಳನ್ನು ಕನಿಷ್ಟ 14 ದಿನಗಳ ಕಾಲ ಆರೈಕೆ ಮಾಡಲಾಗುತ್ತದೆ.

ಈ ಸಂದರ್ಭದಲ್ಲಿ ಪೋಷಕರು ಮಕ್ಕಳೊಂದಿಗೆ ಇರಬೇಕಾಗುತ್ತದೆ. ಮಕ್ಕಳ ಕಾಳಜಿಯೊಂದಿಗೆ ಅವರ ಕೂಲಿ ಹಣವೂ ಸಿಗುವಂತೆ ಆಗಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಒಬ್ಬ ಪೋಷಕರಿಗೆ 275ರೂ. ನೀಡಲಾಗುತ್ತದೆ ಎಂದು ಜಿಲ್ಲಾ ಶಸ್ತ್ರಜ್ಞ ಡಾ| ರುದ್ರವಾಡಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.