ಮಾರ್ಚ್ 23ಕ್ಕೆ ಮೇಯರ್ ಚುನಾವಣೆ: ಬಿಜೆಪಿ, ಕಾಂಗ್ರೆಸ್,ಜೆಡಿಎಸ್… ಯಾರಿಗೆ ಯುಗಾದಿ?


Team Udayavani, Mar 21, 2023, 8:10 PM IST

ಮಾರ್ಚ್ 23ರಂದು ಮೇಯರ್ ಚುನಾವಣೆ: ಯಾರಿಗೆ ಯುಗಾದಿ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು ಒಂದು ವರ್ಷಗಳ ನಂತರ ಪ್ರಥಮ ಪ್ರಜೆ ( ಮೇಯರ್) ಆಯ್ಕೆಗೆ ಮುಹೂರ್ತ ನಿಗದಿಯಾಗಿದ್ದು, ಬಿಜೆಪಿ- ಕಾಂಗ್ರೆಸ್ ಇಲ್ಲವೇ ಜೆಡಿಎಸ್ ಈ ಮೂವರಲ್ಲಿ ಯಾರಿಗೆ ಯುಗಾದಿ ಎನ್ನುವಂತಾಗಿದೆ.

ಮಾರ್ಚ 23ರಂದು ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯಲಿದ್ದು, ಸ್ಪಷ್ಟ ಬಹುಮತ ಯಾರಿಗೂ ಇರದ ಹಿನ್ನೆಲೆಯಲ್ಲಿ ಆಡಳಿತ ಪಡೆಯಲು ಹಗ್ಗ ಜಗ್ಗಾಟ ನಡೆದಿದ್ದರಿಂದ ಯಾರ ಕೈ ಮೇಲುಗೈ ಆಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಚುನಾವಣೆ ಅತ್ಯಂತ ತಂತ್ರ- ಪ್ರತಿತಂತ್ರಗಳಿಂದ ಕೂಡಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವ ಪಾಲಿಕೆಯ ಇಂದಿರಾ ಸ್ಮಾರಕದ ಸುತ್ತ 200 ಮೀಟರ್ ವ್ಯಾಪ್ತಿ ಯೊಳಗೆ 144 ಕಲಂ ಜಾರಿಗೊಳಿಸಿ ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪಾಲಿಕೆಗೆ 2021ರ ಸೆಪ್ಟೆಂಬರ್ ದಲ್ಲಿ ಚುನಾವಣೆ ನಡೆದಿದ್ದು, ತದನಂತರ ವಿಧಾನ ಪರಿಷತ್ ಚುನಾವಣೆ, ಮೀಸಲಾತಿ ವಿವಾದ ಹಿನ್ನೆಲೆಯಲ್ಲಿ ಚುನಾವಣೆಗೆ ಕಾಲ ಕೂಡಿ ಬಂದಿರಲಿಲ್ಲ. ಆದರೆ ಹೊಸ ವರ್ಷ ಯುಗಾದಿ ಮರುದಿನ ಮುಹೂರ್ತ ನಿಗದಿಯಾಗಿದೆ.

ಪಾಲಿಕೆಯ ಒಟ್ಟಾರೆ 55 ಸ್ಥಾನಗಳಲ್ಲಿ ಚುನಾವಣೆ ಫಲಿತಾಂಶ ಪ್ರಕಾರ 23 ಬಿಜೆಪಿ, 27 ಕಾಂಗ್ರೆಸ್, 04 ಜೆಡಿಎಸ್ ಹಾಗೂ ಓರ್ವ ಪಕ್ಷೇತರ ಬಲಾ ಬಲ ಹೊಂದಿದ್ದರೆ ಇದರಲ್ಲಿ ಬಿಜೆಪಿಯಿಂದ ವಾರ್ಡ ನಂ 24 ರಲ್ಲಿ ಗೆಲುವು ಸಾಧಿಸಿದ್ದ ಪ್ರಿಯಾಂಕ ಅಂಬರೀಷ ಅನರ್ಹಗೊಂಡಿದ್ದಾರೆ. ಅದೇ ರೀತಿ ಪಕ್ಷೇತರ ಗೆದ್ದಿರುವ ವಾಡ್೯ ನಂ 36 ಪಕ್ಷೇತರ ಸದಸ್ಯ ಡಾ. ಶಂಭು ಬಳಬಟ್ಟಿ ಸಹ ಪಾಲಿಕೆ ಸದಸ್ಯನಾಗಿ ಪ್ರಮಾಣ ವಚನ ತೆಗೆದುಕೊಳ್ಳಬಹುದು.‌ಆದರೆ ಚುನಾವಣೆಯಲ್ಲಿ ಪಾಲ್ಗೊಳ್ಳುವಂತಿಲ್ಲ. ಪಾಲಿಕೆ ಚುನಾವಣೆ ನಂತರ ಬಿಜೆಪಿಗೆ ಸೇರಿದ್ದರು. ಹೀಗಾಗಿ ಬಿಜೆಪಿಗೆ ಎರಡು ಮತ ಮೈನಸ್ ಆಗುವಂತಾಗಿದೆ.

ಸಮ ಸಂಖ್ಯಾಬಲ ಮೂಡಿದ ಕುತೂಹಲ: ಬಿಜೆಪಿಯ 22 ಸದಸ್ಯರು, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಸವರಾಜ ಮತ್ತಿಮಡು, ಸಂಸದರಾದ ಡಾ. ಉಮೇಶ ಜಾಧವ್, ಲೇಹರಸಿಂಗ್

ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ್ , ಸುನೀಲ್ ವಲ್ಲಾಪುರೆ, ಲಕ್ಷ್ಮಣ ಸವದಿ, ಮುನಿರಾಜಗೌಡ, ಭಾರತಿಶೆಟ್ಟಿ, ರಘುನಾಥ ಮಲ್ಕಾಪುರೆ, ಸಾಯಬಣ್ಣ ತಳವಾರ ಸೇರಿ ಸಂಖ್ಯಾಬಲ 34 ಆಗುತ್ತದೆ.

ಅದೇ ರೀತಿ ಕಾಂಗ್ರೆಸ್ ದಿಂದ 27 ಪಾಲಿಕೆ ಸದಸ್ಯರು, ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಶಾಸಕಿ ಖನೀಜಾ ಫಾತೀಮಾ, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ ಹುಮನಾಬಾದ್ ಸೇರಿದರೆ 30 ಆಗುತ್ತದೆ. ಹೀಗಾಗಿ ಜೆಡಿಎಸ್ ಬೆಂಬಲ ನೀಡಿದಲ್ಲಿ ಸಂಖ್ಯಾ ಬಲ ಸಮಾನಾಗುತ್ತದೆ. ಹೀಗಾಗಿ ಟಾಸ್ ವೇ ಫಲಿತಾಂಶ ನಿರ್ಧರಿಸುತ್ತದೆ.

ಜೆಡಿಎಸ್ ಕಿಂಗ ಮೇಕರ್: ನಾಲ್ಕು ಸದಸ್ಯರನ್ನು ಹೊಂದಿರುವ ಜೆಡಿಎಸ್ ಪಕ್ಷವೇ ಕಿಂಗ್ ಮೇಕರ್ ಆಗಿದೆ. ಹೀಗಾಗಿ ಜೆಡಿಎಸ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಖರ್ಗೆ ಬರುವರೇ?: ಪಾಲಿಕೆಯಯಲ್ಲಿ ಅಧಿಕಾರಕ್ಕೇರುವುದು ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ಹೀಗಾಗಿ ಇಬ್ಬರ ನಡುವೆ ಜಂಗೀ ಕುಸ್ತಿ ಏರ್ಪಟ್ಟಿದೆ. ಹೇಗಾದರೂ ಮಾಡಿ ಅಧಿಕಾರಕ್ಕೆ ಬರಲೇಬೇಕೆಂಬುದು ಎರಡು ಪಕ್ಷಗಳು ಹವಣಿಸುತ್ತಿರುವುದರಿಂದ ಪ್ರಮುಖವಾಗಿ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವುದರಿಂದ ಈ ಚುನಾವಣೆಗೆ ಏಲ್ಲಿಲ್ಲದ ಮಹತ್ವ ಬಂದಿದೆ.

ಟಾಸ್ ಇಲ್ಲವೇ ಕೂದಲೆಳೆ ಅಂತರದ ಮತದಿಂದ ಗೆಲುವು ಸಾಧಿಸುವುದರಿಂದ ರಾಜ್ಯಸಭಾ ಸದಸ್ಯರಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಮತದಾನದಲ್ಲಿ ಪಾಲ್ಗೊಳ್ಳುತ್ತಾರೆ ಎಂಬುದೇ ಯಕ್ಷ ಪ್ರಶ್ನೆ ಯಾಗಿದೆ. ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ ಇಲ್ಲವೇ ಕಾಂಗ್ರೆಸ್ ಈ ಎರಡರಲ್ಲಿ ಯಾರೇ ಅಧಿಕಾರದ ಗದ್ದುಗೆ ಹಿಡಿದಿದ್ದರೂ ರಾಷ್ಟ ಮಟ್ಟದಲ್ಲಿ ಸುದ್ದಿಯಾಗುತ್ತದೆ.‌ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಾಗಿರುವುದರಿಂದ ಕಲಬುರಗಿ ಮೇಯರ ಚುನಾವಣೆ ರಾಷ್ಟ್ರದ ಗಮನ ಸೆಳೆದಿದೆ. ಹೀಗಾಗಿ ಡಾ. ಮಲ್ಲಿಕಾರ್ಜುನ ಖರ್ಗೆ ಆಗಮನ ಮೇಲೆ ಎಲ್ಲರ ಗಮನ ಸೆಳೆದಿದೆ.

ಪಕ್ಷದ ಸಂಘಟನೆಯಲ್ಲಿ ತೊಡಗಿಸಿದ್ದರಿಂದ ಬರುವುದು ಕುತೂಹಲ ಮೂಡಿಸಿದೆ ‌ಅದಲ್ಲದೇ ಮಾರ್ಚ 25 ರಂದು ಮಾಜಿ ಸಚಿವ ಬಾಬುರಾವ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದರಿಂದ ಮಾರ್ಚ 23ರ ಪಾಲಿಕೆ ಚುನಾವಣೆಗೆ ಬರುತ್ತಾರೆಯೇ? ಒಂದು ಯಕ್ಷ ಪ್ರಶ್ನೆ ಯಾಗಿ ಪರಿಣಮಿಸಿದೆ.

ಬಿಜೆಪಿ ನಾಯಕರ ದಂಡು: ಚುನಾವಣೆಯಲ್ಲಿ ತಂತ್ರಗಳನ್ನು ಹೆಣೆಯಲು ಬಿಜೆಪಿ ನಾಯಕರ ದಂಡು ಯುಗಾದಿ ಹಬ್ಬದಂದು ಆಗಮಿಸಲಿದೆ. ಇನ್ನೂ ಕಾಂಗ್ರೆಸ್ ಉನ್ನತ ಮಟ್ಟದಲ್ಲಿ ಮಾತುಗಾರಿಕೆ ನಡೆಸುತ್ತಿದೆ. ಒಟ್ಟಾರೆ ಯುಗಾದಿ ಹಬ್ಬ ಬಿಜೆಪಿಗೋ ಇಲ್ಲವೇ ಕಾಂಗ್ರೆಸ್ ಗೋ ಎನ್ನುವಂತಾಗಿರುವುದು ಸ್ಪಷ್ಟ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.