ಜಿಇಗೆ ಕಾರ್ಮಿಕ ಅಧಿಕಾರಿಗಳ ಭೇಟಿ


Team Udayavani, May 20, 2018, 10:53 AM IST

gul-3.jpg

ಶಹಾಬಾದ: ನಗರದ ಜಿಇ ಕಾರ್ಖಾನೆ ಕಾನೂನು ಬಾಹಿರವಾಗಿ ಕಂಪನಿಯ ಮುಖ್ಯದ್ವಾರ ಮುಚ್ಚಿ ಕಾರ್ಮಿಕರಿಗೆ ಶೋಷಣೆ ಮಾಡುತ್ತಿರುವ ಬಗ್ಗೆ ಕಾರ್ಮಿಕರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ತಂಡ ಜಿಇ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಅವರ ತಂಡ ಹಾಗೂ ಸಿಪಿಐ ಆನಂದರಾವ ಜಿಇ ಕಾರ್ಖಾನೆಯ ಮುಖ್ಯದ್ವಾರಕ್ಕೆ ಬೀಗ ಹಾಕಿರುವುದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಿಪಿಐ ಆನಂದರಾವ ಕಾರ್ಖಾನೆ ಕಾವಲುಗಾರರಾಗಿ ನೇಮಕವಾದ ಸುಮಾರು 11 ಸುರಕ್ಷತಾ ಸಿಬ್ಬಂದಿ ಕಾರ್ಖಾನೆ ಒಳಗಡೆ ಇದ್ದಾರೆ. ಅವರಿಗೆ ಕುಡಿಯಲು ನೀರಿಲ್ಲ ಹಾಗೂ ತಿನ್ನಲು ಆಹಾರವಿಲ್ಲ. ಸುಮಾರು ನಾಲ್ಕು ದಿನಗಳಿಂದ ಕಂಪನಿಯ ಒಳಗಡೆ ಪರದಾಡುತ್ತಿದ್ದಾರೆ. ಅಲ್ಲದೇ ಕಾರ್ಮಿಕರು ಯಾವುದೇ ಆಹಾರ ನೀಡಲು ಕೊಡುತ್ತಿಲ್ಲ. ಏನಾದರೂ ಅನಾಹುತವಾದರೆ ಯಾರು ಜವಾಬ್ದಾರರು ಎಂದು ಸಿಪಿಐ ಆನಂದರಾವ ಕಾರ್ಮಿಕ ಅಧಿಕಾರಿ ಗಮನಕ್ಕೆ ತಂದರು. ಆಗ ಜಿಲ್ಲಾ ಕಾರ್ಮಿಕ ಅಧಿಕಾರಿ ಸುರಕ್ಷತಾ ಸೂಪರ್‌ ವೈಸರ್‌ ವೀರಣ್ಣ ಅವರಿಗೆ ಆಹಾರ ಸೇವನೆ ಇಲ್ಲದೇ ಹೆಚ್ಚು ಕಮ್ಮಿ ಏನಾದರೂ ಆದರೆ ಯಾರು ಜವಾಬ್ದಾರರು. ಮೊದಲು ಗೇಟಿನ ಕೀಲಿ ತೆಗೆದು ಊಟ ಮಾಡಿ ಬನ್ನಿ. ಪಾಳಿಗೊಬ್ಬರಂತೆ ಕೆಲಸ ಮಾಡಿ ಎಂದರು. ಆದರೆ ಸುರಕ್ಷತಾ ಸೂಪರ್‌ ವೈಸರ್‌ ವೀರಣ್ಣ ನಮ್ಮ ಹತ್ತಿರ ಕೀಲಿ ಕೈ ಇಲ್ಲ ಎಂದರು. ಅಲ್ಲದೇ ಸುರಕ್ಷತಾ ಮೇಲಾಧಿಕಾರಿಗಳಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದರೂ ಯಾವುದಕ್ಕೂ ಸ್ಪಂದಿಸಲಿಲ್ಲ. ಸಿಪಿಐ ಆನಂದರಾವ್‌ ಕೀಲಿ ತೆಗೆಯುವಂತೆ ತಿಳಿಸಿದರೂ ತೆಗೆಯಲಿಲ್ಲ. ಇವರು ಕಾರ್ಮಿಕ ಅಧಿಕಾರಿಗಳ ಮಾತಿಗೂ ಕಿಮ್ಮತ್ತು ನೀಡುತ್ತಿಲ್ಲ ಎಂದರೆ ನಮಗೆ ಹೇಗೆ ಕೊಡುತ್ತಾರೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ನಾವು ಕೆಲಸಗಾರರು ಸರ್‌.ಜಿಇ ಕಂಪನಿಯವರು ಹೇಳಿದಂತೆ ನಾವು ಕೆಲಸ ಮಾಡುತ್ತಿದ್ದೇವೆ ಎನ್ನುವುದನ್ನು ಬಿಟ್ಟರೆ ಮತ್ತೇನು ಹೇಳಲು ಸುರಕ್ಷತಾ ಸಿಬ್ಬಂದಿ ಹಿಂಜರಿಯುತ್ತಿರುವದು ಕಂಡು ಬಂತು.

ಕಾರ್ಮಿಕ ಮುಖಂಡರಾದ ಸತ್ಯನಾರಾಯಣ ಜೋಷಿ, ಮಹಾದೇವ ಮಾನಕರ್‌, ಭೀಮರಾಯ ಸಿರಗೊಂಡ, ದಾವೂದ್‌ ಹುಸೇನ್‌, ಜಿ.ರಮೇಶ, ಶರಣು ಪಾಟೀಲ, ಸುಧಾಕರ, ವಿರೇಂದ್ರ, ಸೂರ್ಯಕಾಂತ ಕಲಾಲ, ನಿಂಗಣ್ಣ ಕಾರೊಳ್ಳಿ, ಸ್ಟಾನಿಲಿ, ಜಾನ್‌, ಮಹೇಶ ಹೀರಾಳ ಹಾಗೂ ಇನ್ನಿತರರ ಕಾರ್ಯಕರ್ತರು ಹಾಜರಿದ್ದರು. 

ಯಾವುದೇ ಮುನ್ಸೂಚನೆಯಿಲ್ಲದೇ ಕಾರ್ಖಾನೆ ಆಡಳಿತ ಮಂಡಳಿ ಮುಖ್ಯ ದ್ವಾರ ಬಂದ್‌ ಮಾಡುವ ಕ್ರಮ ಕೈಗೊಂಡಿರುವುದರಿಂದ ಕಾರ್ಮಿಕರು ಕಂಗಾಲಾಗಿದ್ದಾರೆ. ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ವಿಚಾರಣೆ ನಡೆಯುತ್ತಿದ್ದರೂ, ಒಮ್ಮಿಂದೊಮ್ಮೆಲೆ ಈ ರೀತಿ ಮಾಡಿರುವ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು.ಅಲ್ಲದೇ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು.
ಸತ್ಯನಾರಾಯಣ ಜೋಷಿ, ಜಿಇ ಕಾರ್ಮಿಕ ಮುಖಂಡ

ಮುನ್ಸೂಚನೆಯಿಲ್ಲದೇ ಹಾಗೂ ಕಾರ್ಮಿಕ ಇಲಾಖೆಗೆ ಅರ್ಜಿ ಸಲ್ಲಿಸದೆ ಕಾರ್ಖಾನೆ ಗೇಟ್‌ ಬಂದ್‌ ಮಾಡಿರುವುದು ಕಾನೂನು ಬಾಹಿರ ಕ್ರಮ. ಈಗಾಗಲೇ ಕಾರ್ಮಿಕ ಆಯುಕ್ತರ ಬಳಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ಕ್ರಮ ಕೈಗೊಂಡಿರುವುದು ಸರಿಯಲ್ಲ. ಈಗಾಗಲೇ ಜಿಲ್ಲಾ ಕಾರ್ಮಿಕ ಆಯುಕ್ತರ ಆದೇಶದ ಮೇರೆಗೆ ನಾವು ಬೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಮೇ 21ರಂದು ಆಯುಕ್ತರು ಕಾರ್ಮಿಕ ಮುಖಂಡರಿಗೆ ಹಾಗೂ ಕಂಪನಿ ಆಡಳಿತ ಮಂಡಳಿ ಸಭೆ ಕರೆಯಲಾಗಿದೆ.
ಶ್ರೀಹರಿ ದೇಶಪಾಂಡೆ,ಜಿಲ್ಲಾ ಕಾರ್ಮಿಕ ಅಧಿಕಾರಿ

ಟಾಪ್ ನ್ಯೂಸ್

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.