ಪ್ರಚಾರಕ್ಕೆ ಐವರು ಸೀಮಿತ-ಬೈಕ್‌ ರ್ಯಾಲಿ ಮಾಡುವಂತಿಲ್ಲ: ಡಿಸಿ


Team Udayavani, Dec 3, 2020, 3:44 PM IST

ಪ್ರಚಾರಕ್ಕೆ ಐವರು ಸೀಮಿತ-ಬೈಕ್‌ ರ್ಯಾಲಿ ಮಾಡುವಂತಿಲ್ಲ: ಡಿಸಿ

ಕಲಬುರಗಿ: ಗ್ರಾಪಂ ಚುನಾವಣೆ ಪ್ರಚಾರಕ್ಕೆ ಐದಕ್ಕಿಂತ ಹೆಚ್ಚಿನ ಜನ ಸೇರಬಾರದು. ಬೈಕ್‌ ರ್ಯಾಲಿ ಮಾಡುವಂತಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಚುನಾವಣೆ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅಧಿಕಾರಿಗಳಿಗೆ ಸೂಚಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ, ಪೊಲೀಸ್‌, ಅಬಕಾರಿ ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ಶಾಂತಿಯುತ ಚುನಾವಣೆ, ಅಕ್ರಮ ಚಟುವಟಿಕೆ ನಿಯಂತ್ರಿಸಲು ರಾಜ್ಯ ಚುನಾವಣೆ ಆಯೋಗ ಜಾರಿಗೊಳಿಸಿರುವ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಮತದಾನಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತ ಗಟ್ಟೆಗಳ ಕುರಿತು ಪೊಲೀಸ್‌ ಅಧಿಕಾರಿಗಳು, ತಹಶೀಲ್ದಾರರು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲೆಯ ಗಡಿ ಭಾಗದಲ್ಲಿ ಸೆಕ್ಟರ್‌ ಅಧಿಕಾರಿಗಳು, ಎಂಸಿಸಿ ಅಧಿಕಾರಿಗಳ ತಂಡದ ಸಹಕಾರದೊಂದಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಮದ್ಯ ಸಾಗಾಣಿಕೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಹೊಂದಿರುವ ಅಂಗಡಿಗಳು, ದಾಸ್ತಾನು, ಮಾರಾಟದ ಸಂಪೂರ್ಣ ಅಂಕಿ-ಅಂಶವುಳ್ಳ ಮಾಹಿತಿ ನೀಡಬೇಕು ಎಂದು ಅಬಕಾರಿ ಇಲಾಖೆ ಪ್ರಭಾರಿ ಉಪ ಆಯುಕ್ತೆ ಶಶಿಕಲಾ ಒಡೆಯರ್‌ ಅವರಿಗೆ ಸೂಚಿಸಿದರು.

ಜಿ.ಪಂ ಸಿಇಒಗಳಾದ ಎಂಸಿಸಿ ನೋಡಲ್‌ ಅಧಿಕಾರಿ ಡಾ| ರಾಜಾ ಪಿ. ಮಾತನಾಡಿ, ಆಯೋಗದ ಮಾರ್ಗಸೂಚಿಗಳ ಅನ್ವಯ ಈಗಾಗಲೇ ಚಾಲನೆಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದರೆ, ಅವುಗಳನ್ನು ಮುಂದುವರಿಸಬೇಕು. ಹೊಸದಾಗಿ ಯಾವುದೇ ಕಾಮಗಾರಿಗಳನ್ನು ಆರಂಭಿಸುವಂತಿಲ್ಲ.ಅಲ್ಲದೇ ಹೊಸದಾಗಿ ನೇಮಕಾತಿ ಆದೇಶ ನೀಡುವಂತಿಲ್ಲ ಎಂದರು. ಎಸ್‌ಪಿ ಡಾ| ಸಿಮಿ ಮರಿಯಂ ಜಾರ್ಜ್‌, ಡಿಸಿಪಿ ಕಿಶೋರ ಬಾಬು, ಸಹಾಯಕ ಆಯುಕ್ತರಾದ ರಾಮಚಂದ್ರ ಗಡಾದೆ, ರಮೇಶ ಕೋಲಾರ ಹಾಗೂ ಜಿಲ್ಲೆಯ ತಹಶೀಲ್ದಾರರು ಹಾಜರಿದ್ದರು.

ಮತಪೆಟ್ಟಿಗೆ ಮೂಲಕ ಚುನಾವಣೆ ನಡೆಸಬೇಕಿರುವ ಕಾರಣ ಬ್ಯಾಲೆಟ್‌ ಪೇಪರ್‌ ಸಿದ್ಧಪಡಿಸಬೇಕು. ಮಸ್ಟರಿಂಗ್‌ ಮತ್ತು ಡೀ-ಮಸ್ಟರಿಂಗ್‌ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು. ವಿ.ವಿ. ಜ್ಯೋತ್ಸ್ನಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.