ಅನುದಾನ ದುರ್ಬಳಕೆ: ಕ್ರಮಕ್ಕೆ ಆಗ್ರಹ


Team Udayavani, Mar 6, 2021, 5:44 PM IST

ಅನುದಾನ ದುರ್ಬಳಕೆ: ಕ್ರಮಕ್ಕೆ ಆಗ್ರಹ

ಜೇವರ್ಗಿ: ಎಸ್ಸಿ ಜನಾಂಗದ ಬಡಾವಣೆ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಅಧಿಕಾರಿಗಳು, ಗುತ್ತಿಗೆದಾರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಮಾದಿಗ ಸಂಘ ಜಿಲ್ಲಾ ಘಟಕ ಲೋಕೋಪಯೋಗಿ ಇಲಾಖೆಗೆ ದೂರು ಸಲ್ಲಿಸಿದೆ.

ಲೋಕೋಪಯೋಗಿ ಇಲಾಖೆಯಿಂದ ಪಟ್ಟಣದ ಶಹಾಪುರ ರಸ್ತೆಯಸಿದ್ದಣ್ಣ ಹರಿಜನ ಮನೆಯಿಂದ ಮುಖ್ಯ ರಸ್ತೆ ವರೆಗೆ ಸಿಸಿ ರಸ್ತೆ, ಚರಂಡಿ ನಿರ್ಮಾಣ, ಗಾಂಧಿ ನಗರದ ಹರಿಜನವಾಡಾದಿಂದ ಮುಖ್ಯರಸ್ತೆ ವರೆಗೆ ವ್ಹಾಯಾ ಹಳೆ ತಹಶೀಲ್ದಾರ್‌ ಕಚೇರಿಯಿಂದ ಸಿಸಿ ರಸ್ತೆ,ವಡ್ಡರಗಲ್ಲಿಯಿಂದ ಮುಖ್ಯರಸ್ತೆ ವರೆಗೆಸಿಸಿ ರಸ್ತೆ ಹಾಗೂ ತಾಲೂಕಿನ ಅವರಾದಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿನಿರ್ಮಾಣ ಕಾಮಗಾರಿಗೆ ಸುಮಾರು80 ಲಕ್ಷ ರೂ. ಅನುದಾನ ಬಿಡುಗಡೆಮಾಡಲಾಗಿದೆ. ಆದರೆ ಗುತ್ತಿಗೆದಾರಹಾಗೂ ಅಧಿಕಾರಿಗಳು ಸೇರಿಕೊಂಡು ನಾಲ್ಕು ಕಡೆ ಮಾಡಬೇಕಾದ ಈ ಕಾಮಗಾರಿಯನ್ನು ತಹಶೀಲ್‌ ಕಚೇರಿಆವರಣ ಹಾಗೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾತ್ರೋರಾತ್ರಿ ಕೆಲಸ ಮಾಡಿ ಮುಗಿಸಿದ್ದಾರೆ. ಇದುಪಟ್ಟಣದ ನಾಗರಿಕರಲ್ಲಿ ಹಲವಾರು ಅನುಮಾನ ಹುಟ್ಟಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಮಾರು 80 ಲಕ್ಷ ರೂ.ಅಂದಾಜು ವೆಚ್ಚದ ಈ ಕಾಮಗಾರಿಗಳು ಪರಿಶಿಷ್ಟ ಜಾತಿಗಳ ಬಡಾವಣೆ ಅಭಿವೃದ್ಧಿಗಾಗಿ ಮೀಸಲಾಗಿದ್ದ ಅನುದಾನವಾಗಿದೆ.ಆದರೆ ನಿಗದಿತ ಬಡಾವಣೆಗಳಲ್ಲಿ ನಿರ್ಮಿಸಬೇಕಾಗಿದ್ದ ಕಾಮಗಾರಿಯನ್ನು ಬೇರೆ ಕಡೆ ನಿರ್ಮಿಸಲಾಗಿದೆ. ಅಲ್ಲದೇ ರಾತ್ರಿ ವೇಳೆ ಕಳಪೆ ಕಾಮಗಾರಿ ಮಾಡಲಾಗಿದೆ. ಆದ್ದರಿಂದ ಈ ಕುರಿತುಸೂಕ್ತ ತನಿಖೆ ನಡೆಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ದೂರುನೀಡಲು ಸಂಘ ನಿರ್ಧರಿಸಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಅನುದಾನ ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ನಡೆಸಿದ ಲೋಕೋಪಯೋಗಿಇಲಾಖೆ ಎಇಇ ಹಾಗೂ ಎಇ ಅವರನ್ನು ಅಮಾನತುಮಾಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು. -ಮರೆಪ್ಪ ಕೋಬಾಳಕರ್‌, ಅಧ್ಯಕ್ಷ, ಮಾದಿಗ ದಂಡೋರಾ ಹೋರಾಟ ಸಮಿತಿ

ಎಸ್ಸಿಪಿ ಅನುದಾನವನ್ನು ನಿಗದಿತ ಬಡಾವಣೆಗಳಲ್ಲಿ ಮಾಡದೇ, ಬೇರೆ ಕಡೆ ರಾತ್ರೋ ರಾತ್ರಿ ಮಾಡಿದ್ದಲ್ಲದೇ,ಕಳಪೆಯಾಗಿ ಮಾಡಿದ್ದು ಖಂಡನೀಯ. ಸರ್ಕಾರದ ಹಣ ಲೂಟಿ ಮಾಡಲು ಹೊರಟಿರುವ ಗುತ್ತಿಗೆದಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.  -ಸುಧೀಂದ್ರ ಇಜೇರಿ, ಅಧ್ಯಕ್ಷ, ಜಯ ಕರ್ನಾಟಕ ಸಂಘಟನೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.