Election Result: ಈಶಾನ್ಯ ಪದವೀಧರ ಕ್ಷೇತ್ರ; ಬಿಜೆಪಿಯ ಅಮರನಾಥ ಪಾಟೀಲ್ ಗೆ ಆರಂಭಿಕ ಮುನ್ನಡೆ
Team Udayavani, Jun 6, 2024, 8:21 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗ ಒಳಗೊಂಡ ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಚುನಾವಣೆ ಮತ ಏಣಿಕೆ ಇಲ್ಲಿನ ಗುಲ್ಬರ್ಗ ವಿವಿಯ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಕೇಂದ್ರದಲ್ಲಿ ನಡೆದಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ.
ಪ್ರಥಮ ಸುತ್ತಿನ ಮತ ಎಣಿಕೆ ಮುಕ್ತಾಯ ನಂತರ ಅಭ್ಯರ್ಥಿ ಅಮರನಾಥ ಪಾಟೀಲ್ 4,521 ಮತಗಳು ಪಡೆದಿದ್ದು, 306 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಸಮೀಪದ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ್ ಅವರು 4,215 ಮತಗಳು ಮತ್ತು ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 3,037 ಮತಗಳು ಪಡೆದಿದ್ದಾರೆ. 1,585 ಮತಗಳು ತಿರಸ್ಕೃತವಾಗಿವೆ. ಇದೂವರೆಗೆ ಒಟ್ಟಾರೆ 13,990 ಮತಗಳ ಎಣಿಕೆ ಮುಕ್ತಾಯವಾಗಿದೆ.
ಬೆಳಿಗ್ಗೆ ಮತಪೆಟ್ಟಿಗೆಗಳನ್ನು ತೆರೆದು ಎಲ್ಲ ಮತಪತ್ರಗಳನ್ನು ಕ್ರೋಢಿಕರಿಸಿ ತಲಾ 25 ರ ಮತಪತ್ರಗಳಂತೆ ಬಂಡಲ್ ಮಾಡಲಾಗಿ ಸಂಜೆ 4.30 ರ ನಂತರ ಮತ ಏಣಿಕೆ ಶುರುವಾಯಿತು.
ಬಿಜೆಪಿ ಹಾಗೂ ಕಾಂಗ್ರೆಸ್ ಜತೆಗೆ ಪಕ್ಷೇತರ ಅಭ್ಯರ್ಥಿ ಪ್ರತಾಪರೆಡ್ಡಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂರ ಶುಕ್ರವಾರ ಬೆಳಗಿನ ಜಾವ ಫಲಿತಾಂಶ ಹೊರ ಬೀಳುವ ನಿರೀಕ್ಷೆವಿದೆ.
ಬಿಜೆಪಿಯಿಂದ ಅಮರನಾಥ ಪಾಟೀಲ್, ಕಾಂಗ್ರೆಸ್ ನಿಂದ ಡಾ.ಚಂದ್ರಶೇಖರ ಪಾಟೀಲ್ ಹಾಗೂ ಪಕ್ಷೇತರಾಗಿ ಎನ್. ಪ್ರತಾಪ ರೆಡ್ಡಿ ಕಣದಲ್ಲಿರುವ ಪ್ರಮುಖರಾಗಿದ್ದಾರೆ.
1.56 ಲಕ್ಷ ಮತದಾರರ ಪೈಕಿ 1.09 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಶೇ.69.65 ಪ್ರತಿಶತ ಮತದಾನವಾಗಿದೆ.
ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ನೇತೃತ್ವದ ಲ್ಲಿ ಮತ ಏಣಿಕೆ ನಡೆಯುತ್ತಿದ್ದು, ವಿಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲಾಧಿಕಾರಿಗಳು ಹಾಜರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.