![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 23, 2022, 7:09 PM IST
ಚಿಂಚೋಳಿ: ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದ ಪೋಕೊÕà ಪ್ರಕರಣ ತಲೆ ತಗ್ಗಿಸುವಂತಹದಾಗಿದೆ. ಆದರೆ ಕಲಬುರಗಿ ಸಂಸದ ಡಾ| ಉಮೇಶ ಜಾಧವ ರಾಜಕೀಯವಾಗಿ ಬಳಸಿಕೊಂಡು ಸೇಡಿನ ಮತ್ತು ದ್ವೇಷದಿಂದ ಕಾಂಗ್ರೆಸ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸುಭಾಷ ರಾಠೊಡ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕುಂಚಾವರಂ ಶಾಲೆಯೊಂದರಲ್ಲಿ ಘಟನೆ ಬಗ್ಗೆ ನಿಷ್ಟಕ್ಷಪಾತವಾಗಿ ತನಿಖೆ ನಡೆಯಲಿ. ಆದರೆ ಸಂಸದರು ಕಾಳಗಿ, ಮಿರಿಯಾಣ, ಚಿಂಚೋಳಿ, ಕುಂಚಾವರಂ, ರಟಕಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಮೇಲೆ ಪ್ರಭಾವ ಬೀರಿ ಕಾಂಗ್ರೆಸ್ ಕಾರ್ಯಕರ್ತರನ್ನು ತೊಂದರೆ ಕೊಡುತ್ತಿದ್ದಾರೆ. ಸೇಡಿನ ಮತ್ತು ದ್ವೇಷದ ರಾಜಕಾರಣ ಚಿಂಚೋಳಿ ಮತಕ್ಷೇತ್ರದಲ್ಲಿ ಯಾವ ರಾಜಕಾರಣಿಗಳು ಮಾಡಿಲ್ಲ. ಕುಂಚಾವರಂ ಪೋಸ್ಕೋ ಘಟನೆ ಸೆ.12ರಂದು ನಡೆದಿದೆ. ಆದರೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸೆ.15ರಂದು ಉದ್ದೇಶಪೂರ್ವಕ ಬಿಜೆಪಿ ವಕ್ತಾರನಿಂದ ಕೊಡಿಸಿದ್ದಾರೆ. ಇದೊಂದು ಷಡ್ಯಂತ ಮತ್ತು ಕುತಂತ್ರದಿಂದ ಕೂಡಿದೆ ಎಂದರು.
ತಾಲೂಕಿನ ಪವಿತ್ರ ಧಾರ್ಮಿಕ ಕ್ಷೇತ್ರ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ರಾಜಕೀಯ ಬೆರೆಸಿ ಪಾವಿತ್ಯತೆ ಹಾಳು ಮಾಡಿದ್ದಾರೆ. ಚಿಂಚೋಳಿ ಮತಕ್ಷೇತ್ರ ಭ್ರಷ್ಟಾಚಾರ ಕಣಜವಾಗಿ ಮಾರ್ಪಟ್ಟಿದೆ. ಅಧಿಕಾರಿಗಳು ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಜನಪ್ರತಿನಿಧಿಗಳ ತಾಳಕ್ಕೆ ತಕ್ಕಂತೆ ಕುಣಿಯಬೇಡಿ ಎಂದು ಕಾಂಗ್ರೆಸ್ ಮುಖಂಡ ಸುಭಾಷ ರಾಠೊಡ ತಿಳಿಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಿ, ಶರಣು ಮೋತಕಪಳ್ಳಿ, ಗೋಪಾಲರಾವ ಕಟ್ಟಿಮನಿ, ಚಿತ್ರಶೇಖರ ಪಾಟೀಲ, ಅನವರ ಖತೀಬ, ಸುರೇಶ ಬಂಟಾ, ನರಸಿಂಹಲು ಕುಂಬಾರ, ಚಿರಂಜೀವಿ ಶಿವರಾಮಪುರ, ನರಸಿಂಹಲು ಸವಾರಿ, ನಾಗೇಶ ಗುಣಾಜಿ, ಶಬ್ಬೀರ ಅಹೆಮದ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.