ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಶಾಸಕ ಡಾ|ಅಜಯಸಿಂಗ್‌ ಇಚ್ಛಾಶಕ್ತಿ ತೋರಬೇಕು ಎಂಬುದು ಜನರ ಆಶಯವಾಗಿದೆ.

Team Udayavani, May 29, 2023, 6:11 PM IST

ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಯಡ್ರಾಮಿ: ತಾಲೂಕು ರಚನೆಯಾಗಿ ನಾಲ್ಕು ವರ್ಷಗಳೇ ಕಳೆದರೂ ಮೂಲಭೂತ ಸೌಕರ್ಯಗಳು ಮರೀಚಿಕೆ ಎಂಬಂತಾಗಿದೆ. ತಾಲೂಕು ಕೇಂದ್ರ ಹೊಂದಿರಬೇಕಾದ ಮೂಲ ಸೌಲಭ್ಯಗಳು ಸಿಗದೇ ಹೆಸರಿಗಷ್ಟೇ ತಾಲೂಕು ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಸದ್ಯ ತಹಶೀಲ್ದಾರ್‌ ಕಚೇರಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಕಾರ್ಯಾಲಯಗಳನ್ನು ಹೊರತು ಪಡಿಸಿದರೆ ತಾಲೂಕು ಕೇಂದ್ರದಲ್ಲಿರಬೇಕಾದ ಕೃಷಿ ಸಹಾಯಕ ನಿರ್ದೇಶಕ ಕಚೇರಿ, ಬಿಇಒ,
ಅರಣ್ಯ, ಪೊಲೀಸ್‌ ವೃತ್ತ ನಿರೀಕ್ಷಕರ ಕಚೇರಿ, ಬಸ್‌ ಡಿಪೋ, ಉಪ ನೋಂದಣಿ ಕಚೇರಿ, ಭೂ ಮಾಪನ ಇಲಾಖೆ, ತೋಟಗಾರಿಕೆ, ಅಗ್ನಿಶಾಮಕ, ಸಮಾಜ ಕಲ್ಯಾಣ, ಲೋಕೋಪಯೋಗಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳಾ ಮತ್ತು ಮಕ್ಕಳ ಇಲಾಖೆ ಕಚೇರಿ ಸೇರಿದಂತೆ ಇತರೆ ಕಾರ್ಯಾಲಯಗಳನ್ನು ತೆರೆಯಬೇಕು.

ತಾಲೂಕಿನ ಜನತೆ ಈಗಲೂ ಸರಕಾರಿ ಕೆಲಸಗಳಿಗಾಗಿ ಜೇವರ್ಗಿಗೆ ತೆರಳುವುದು ಸಾಮಾನ್ಯವಾಗಿದೆ. ರೈತರು, ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು, ಅಂಗವಿಕಲರು ಪರದಾಡುವಂತಾಗಿದೆ. ಡಾ|ಅಜಯಸಿಂಗ್‌ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದು, ಈ ಬಾರಿಯಾದರೂ ತಾಲೂಕಿನಲ್ಲಿ ಎಲ್ಲ ಕಚೇರಿಗಳು ಆರಂಭವಾಗಲಿವೆ ಎಂಬ ನಿರೀಕ್ಷೆಯಲ್ಲಿ ಈ ಭಾಗದ ಜನರಿದ್ದಾರೆ.

ಈಗಾಗಲೇ ತಾಲೂಕು ಆಡಳಿತ ಸೌಧ ಹಾಗೂ ನ್ಯಾಯಾಲಯ ಕಟ್ಟಡದ ನಿರ್ಮಾಣಕ್ಕೆ ತಲಾ ಐದು ಎಕರೆ ಭೂಮಿ ಮಂಜೂರಾಗಿದೆ. ಸದ್ಯದ ರಾಜ್ಯ ಸರ್ಕಾರದಿಂದ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ತರುವಲ್ಲಿ ಡಾ| ಅಜಯಸಿಂಗ್‌ ಹೆಚ್ಚಿನ ಮುತುವರ್ಜಿ ವಹಿಸಿದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಧೋರಣೆ ಅನುಸರಿಸಿತ್ತು ಎಂಬುದು ಶಾಸಕರ ಪ್ರಬಲ ಆರೋಪ.

ಆದರೀಗ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದಿರುವುದರಿಂದ ಅನುದಾನ ತರುವಲ್ಲಿ ಯಾವ ಅಡೆತಡೆಯಾಗದು. ನೂತನ ಯಡ್ರಾಮಿ ತಾಲೂಕಿನ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಶಾಸಕ ಡಾ|ಅಜಯಸಿಂಗ್‌ ಇಚ್ಛಾಶಕ್ತಿ ತೋರಬೇಕು ಎಂಬುದು ಜನರ ಆಶಯವಾಗಿದೆ.

ಯಡ್ರಾಮಿ ತಾಲೂಕು ಎಂದು ಹೇಳಲು ನಾಚಿಕೆ ಬರುತ್ತಿದೆ. ತಾಲೂಕಾಗಿ ನಾಲ್ಕು ವರ್ಷಗಳೇ ಕಳೆದಿವೆ. ಆದರೆ ಅನೇಕ ಕಚೇರಿಗಳು ಇರದೇ ಇರುವುದರಿಂದ ಜೇವರ್ಗಿಗೆ ಅನಿವಾರ್ಯವಾಗಿ ತೆರಳಬೇಕಾಗುವ ದಯನೀಯ ಸ್ಥಿತಿ ಇಲ್ಲಿನ ಜನತೆಯದ್ದಾಗಿದೆ. ಶಾಸಕರು ಕೂಡಲೇ ತಾಲೂಕಿನಲ್ಲಿರಬೇಕಾದ ಎಲ್ಲ ಕಚೇರಿಗಳನ್ನು ಆರಂಭಿಸಿ ಜನರ ಗೋಳು ತಪ್ಪಿಸಬೇಕಿದೆ.
ಆನಂದ ಯತ್ನಾಳ, ಜೆಡಿಎಸ್‌ ಯುವ ಮುಖಂಡ

ಶಾಸಕ ಡಾ|ಅಜಯಸಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ
ಬಂದಿರುವುದರಿಂದ ಯಡ್ರಾಮಿಗೆ ಬೇಕಾದ ಅಗತ್ಯ ಅನುದಾನ ತಂದು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತಾರೆನ್ನುವ ಅಚಲ ವಿಶ್ವಾಸವಿದೆ.
*ಮಲ್ಲಿಕಾರ್ಜುನ ಹಲಕರ್ಟಿ, ಕಾಂಗ್ರೆಸ್‌ ಮುಖಂಡ

ಈ ಬಾರಿ ಕಾಂಗ್ರೆಸ್‌ನ ಬಹುಮತದ ಸರ್ಕಾರ ಬಂದಿದೆ. ಯಡ್ರಾಮಿಯಲ್ಲಿ ಮಿನಿ ವಿಧಾನಸೌಧದ ಕಟ್ಟಡ ನಿರ್ಮಾಣ ಮಾಡುತ್ತೇವೆ. ಹೆಚ್ಚಿನ ಅನುದಾನದೊಂದಿಗೆ ತಾಲೂಕಿನಲ್ಲಿರಬೇಕಾದ ಕಚೇರಿ ಆರಂಭಕ್ಕೆ ಪ್ರಯತ್ನಿಸುತ್ತೇನೆ.
* ಡಾ|ಅಜಯಸಿಂಗ್‌, ಶಾಸಕ

*ಸಂತೋಷ ನವಲಗುಂದ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.