ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಸಮೀಕ್ಷೆಗೆ ಸೂಚನೆ


Team Udayavani, Sep 30, 2020, 4:10 PM IST

ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಸಮೀಕ್ಷೆಗೆ ಸೂಚನೆ

ಕಲಬುರಗಿ: ಸತತ ಮಳೆಯಿಂದ ಹಾನಿಯಾಗಿರುವ ಸಾರ್ವಜನಿಕ ಆಸ್ತಿ-ಪಾಸ್ತಿ ಹಾಗೂ ಕೋಟ್ಯಂತರ ಮೊತ್ತದ ಬೆಳೆ ಹಾನಿಯನ್ನು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಾನಿ ವೀಕ್ಷಿಸಿದರು.

ಗ್ರಾಮೀಣ ಕ್ಷೇತ್ರದ ಸರಡಗಿ, ಬೋಳೆವಾಡ, ವೆಂಕಟಬೆನೂರ ಗ್ರಾಮದಲ್ಲಿ ಅತಿವೃಷ್ಟಿಯಿಂದ ಸಮಸ್ಯೆಗೆ ಒಳಗಾದ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ಹಿಂದೆಂದು ಕಂಡರೀಯದಷ್ಟು ಬೆಳೆ ಹಾನಿಯಾಗಿದೆ. ಹೀಗಾಗಿ ಸಮರ್ಪಕವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು. ಬಹು ಮುಖ್ಯವಾಗಿ ಹಾನಿಗೊಳಗಾದ ಒಬ್ಬ ರೈತನೂ ಪರಿಹಾರ ಸಿಗದೇ ಉಳಿಯಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಹಾಗೂ ಹಾನಿಯಾಗಿರುವ ಸೇತುವೆಗಳು ಜತೆಗೆ ಇತರ ಸಾರ್ವಜನಿಕ ಹಾನಿಯನ್ನು ಸಹ ವರದಿ ರೂಪಿಸಿ ಸಂಬಂಧಪಟ್ಟ ಇಲಾಖಾ ಮುಖಾಂತರ ಸಲ್ಲಿಸಬೇಕು ಎಂದರು. ಕಲಬುರಗಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಮುಖಂಡರಾದ ವಿನೋದ್‌ ಪಾಟೀಲ ಸರಡಗಿ, ಪ್ರಭು ರಾವೂರ, ಸಂತೋಷ ಆಡೆ ದಾಭಾ, ಅರವಿಂದ ಚವ್ಹಾಣ್‌ ಶಾಂತಕುಮಾರ ಪಾಟೀಲ ನಂದೂರ, ಜೀತು ರಾಥೋಡ್‌, ಜಗದೀಶ್‌ ಪಾಟೀಲ ಸಣ್ಣೂರ, ವಿಶ್ವನಾಥ್‌ ಪಾಟೀಲ ವೆಂಕಟಬೇನೂರ, ವಿಶ್ವನಾಥ್‌ ಗೋಧಿ,  ಶಿವಮೂರ್ತಿ ಸಣ್ಣೂರ, ವೀರೇಶ ಉಪ್ಪಳಾಂವ, ವೀರು ಸ್ವಾಮಿ ನರೋಣ, ಸಾಬಯ್ಯ ಗುತ್ತೇದಾರ, ವಿಜಯಕುಮಾರ್‌ ಗೋಳಾ ಸಂತೋಷ ಪಾಟೀಲ ಹರಸೂರ, ಶರಣಗೌಡ ಪಾಟೀಲ ಹರಕಂಚಿ, ಸತೀಶ್‌ ಸೂರಡೆ, ಮುಗಳಿ ರಾಜು ವಾಲಿ ನರೋಣ ಸೇರಿದಂತೆ ಮುಂತಾದವರಿದ್ದರು.

……………………………………………………………………………………………………………………………………………………………….

ವಿದ್ಯುತ್‌ ಸಮಸ್ಯೆ ಸರಿಪಡಿಸಲು ಒತ್ತಾಯ :

ಚಿಂಚೋಳಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ವಿದ್ಯುತ್‌ ಸಂಪರ್ಕದಲ್ಲಿ ಆಗುತ್ತಿರುವ ತೊಂದರೆಯಿಂದಾಗಿ ಹಳ್ಳಿಯ ಜನರ ಜೀವನ ಅಸ್ತವ್ಯಸ್ತವಾಗಿದೆ. ಜೆಸ್ಕಾಂ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಇದಕ್ಕೆ ಇಲಾಖೆ ಅಧಿ ಕಾರಿಗಳ ಬೇಜವಾªರಿತನ ಕಾರಣವಾಗಿದೆ ಎಂದು ತಾಲೂಕು ಭೀಮ ಆರ್ಮಿ ಅಧ್ಯಕ್ಷ ಅಮರನಾಥ ಲೊಡನೋರ ದೂರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಇಡೀ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆತನಕ ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಸಾಕಷ್ಟು ಜನರು ಜೆಸ್ಕಾಂಗೆ ದೂರವಾಣಿ ಕರೆ ಮಾಡಿ ಕೇಳಿದರೆ ಮೇಲಿಂದ ಲೈನ್‌ ಫಾಲ್ಟ್ ಆಗಿದೆ ಎಂದು ಹೇಳುತ್ತಾರೆ. ಜನರ ತಾಳ್ಳೆ ಪರೀಕ್ಷಿಸಬೇಡಿ. ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಎಂದು ಅಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.