ಸಮೀಕ್ಷೆ ಗುರಿ ತಲುಪಲು ಸೂಚನೆ
Team Udayavani, May 20, 2017, 4:40 PM IST
ಆಳಂದ: ನಿರುದ್ಯೋಗ ಯುವಕರ ಬೇಡಿಕೆ ಸಮೀಕ್ಷೆ ಮತ್ತು ಆನ್ಲೈನ್ ನೋಂದಣಿ ಕಾರ್ಯದ ಗುರಿ ತಲುಪಲು ಸಂಬಂಧಿಸಿದ ಎಲ್ಲ ಇಲಾಖೆಗಳ ಸಿಬ್ಬಂದಿಗಳು ಶ್ರಮಿಸಬೇಕು ಎಂದು ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಪಂ, ಪುರಸಭೆ ಕಂದಾಯ, ಶಿಕ್ಷಣ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 10ರಿಂದ15 ಸಾವಿರ ನಿರುದ್ಯೋಗ ಯುವಕರ ನೋಂದಣಿ ಮಾಡುವ ಗುರಿ ಹಾಕಿಕೊಳ್ಳಲಾಗಿದೆ.
ಎಲ್ಲರೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು. ಪುರಸಭೆಯಿಂದ 2 ಸಾವಿರ, ಕಂದಾಯ ಇಲಾಖೆಯಿಂದ 3 ಸಾವಿರ, ಸಿಡಿಪಿಒ 2 ಸಾವಿರ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ 2 ಸಾವಿರ ಮಂದಿ ಸಮೀಕ್ಷೆ ನೋಂದಣಿ ಕೈಗೊಳ್ಳಬೇಕು. ನೋಂದಣಿ ಕಾರ್ಯಕ್ಕೆ ಮೇ 22ಕೊನೆ ದಿನಾಂಕವಾಗಿದೆ.
ಅಷ್ಟರೊಳಗೆ ಪರಿಶ್ರಮ ವಹಿಸಿ ಯುವಜನತೆಗೆ ಅನುಕೂಲ ಮಾಡಬೇಕು ಎಂದು ಹೇಳಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸಂಜಯ ರೆಡ್ಡಿ ಮಾತನಾಡಿ, ಗ್ರಾಪಂಗಳಲ್ಲಿ ಅಭಿವೃದ್ಧಿ ಅಧಿಕಾರಿಗಳು ಈಗಾಗಲೇ ನೋಂದಣಿ ಕಾರ್ಯ ಕೈಗೊಳ್ಳುತ್ತಿದ್ದಾರೆ.
ಯುವಜನರು ಸಹ ತಮಗೆ ಅನುಕೂಲವಾಗುವ ಕಚೇರಿ ಅಥವಾ ಖಾಸಗಿ ಕಂಪ್ಯೂಟರ್ ಅಂಗಡಿಗಳಲ್ಲಿ ಸೌಲಭ್ಯ ಹೊಂದಿರುವ ಮೊಬೈಲ್ನಿಂದಲೇ ನೋಂದಣಿ ಮಾಡಬಹುದಾಗಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಗ್ವಾಲೇಶ ಹೊನ್ನಳ್ಳಿ, ನೋಡಲ್ ಅಧಿಕಾರಿ ಜಾಫರ್ ಅನ್ಸಾರಿ ಸೇರಿ ಇನ್ನಿತರ ಇಲಾಖೆ ಅಧಿ ಕಾರಿಗಳು ಸಭೆಯಲ್ಲಿ ಹಾಜರಿದ್ದರು. ಯುವ ಜನರಿಗೆ ಕೌಶಲ ತರಬೇತಿ ನೀಡಲು ಕೌಶಲ್ಯ ವೆಬ್ ಪೋರ್ಟಲ್ನಲ್ಲಿ ನೋಂದಾಯಿಸಲಾಗುತ್ತಿದೆ.
ನೋಂದಣಿಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಥವಾ ಕಾರ್ಡ್ ಸಂಖ್ಯೆ ನಮೂದಿಸಬೇಕಾಗಿದೆ. ಮೇ 15ರಿಂದ 22ರ ವರೆಗೆ ಪುರಸಭೆ. ತಾಪಂ, ತಹಶೀಲ್ದಾರ ಮತ್ತು ಗ್ರಾಪಂ ಕಚೇರಿಗಳಲೂ ನೋಂದಣಿಗೆ ಅವಕಾಶ ಒದಗಿಸಲಾಗಿದೆ. ಅಲ್ಲದೆ, ಉದ್ಯೋಗ ವಿನಿಮಯ ಕಚೇರಿಗಳಲ್ಲಿ ವರ್ಷಪೂರ್ತಿ ನೋಂದಣಿ ಕಾರ್ಯ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.