ನಿರಂತರ ನೀರು ವರದಿ ಸಲ್ಲಿಕೆಗೆ ಸೂಚನೆ


Team Udayavani, Jul 5, 2018, 10:29 AM IST

gul-1.jpg

ಕಲಬುರಗಿ: ನಗರಕ್ಕೆ 24×7ನಿರಂತರ ನೀರು ಸರಬರಾಜು ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಪ್ರಾತ್ಯಕ್ಷಿಕೆ ವಲಯದಲ್ಲಿ 24 ತಾಸು ನಿರಂತರ ನೀರು ಸರಬರಾಜು ಆಗುತ್ತಿರುವ ಬಗ್ಗೆ ಸಮಗ್ರ ಅಧ್ಯಯನ ವರದಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಅಧಿಕಾರಿಗಳಿಗೆ
ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ 24×7ನಿರಂತರ ನೀರು ಸರಬರಾಜು ಯೋಜನೆ ಅನುಷ್ಠಾನ ಮತ್ತು ಸಾಂಸ್ಥಿಕ ಸುಧಾರಣೆಗಳ ಮೇಲ್ವಿಚಾರಣೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತಾವಿತ ಯೋಜನೆಯಲ್ಲಿ ನಗರದ ಆಯ್ದ ವಾರ್ಡುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಡೆಮೋ ವಲಯದಲ್ಲಿ ಪ್ರತಿ ದಿನ, ತಿಂಗಳುವಾರು ನೀರು ಸರಬರಾಜು ಮಾಡಲಾಗುತ್ತಿರುವ ಪ್ರಮಾಣ, ಇದರಲ್ಲಿ ಬಳಕೆ ಮತ್ತು ಸೋರಿಕೆಯಾಗುತ್ತಿರುವ ಪ್ರಮಾಣ, ಕರಪಾವತಿ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಜಲಮಂಡಳಿ ಮತ್ತು ಕೆ.ಯೂ.ಐ.ಎಫ್‌. ಡಿ.ಸಿ ಅಧಿಕಾರಿಗಳಿಗೆ ಸೂಚಿಸಿದರು.

ಮಹಾನಗರದ ಜನತೆಗೆ 24×7ನಿರಂತರ ನೀರು ಒದಗಿಸುವ 562 ಕೋಟಿ ರೂ. ಅಂದಾಜಿನ ವಿಶ್ವ ಬ್ಯಾಂಕ್‌ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಆಪರೇಟರ್‌ ಆಯ್ಕೆಗಾಗಿ ಈಗಾಗಲೆ ಕರೆಯಲಾದ ಎರಡು ಟೆಂಡರ್‌ಗಳಿಗೆ ಯಾವುದೇ ಬಿಡ್‌ ಸ್ವೀಕೃತವಾಗಿಲ್ಲ ಎಂದು ಹೇಳಿದರು. 

ಮುಂದೆ ಕರೆಯುವ ಬಿಡ್‌ ಸಫಲಗೊಳ್ಳಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು ಯೋಜನೆ ಯಶಸ್ವಿ ಅನುಷ್ಠಾನಕ್ಕಾಗಿ ಟೆಂಡರ್‌ ಷರತ್ತುಗಳಲ್ಲಿ ಸರಳೀಕರಣ ಮಾಡಲು ಹಾಗೂ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೆಳ ಹಂತದಲ್ಲಿ ಆಗುತ್ತಿರುವ ತೊಂದರೆಗಳ ಕುರಿತು ಕೆ.ಯೂ.ಐ.ಎಫ್‌.ಡಿ.ಸಿ. ಹಿರಿಯ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು. 

ನೀರಿನ ಕರ ಪಾವತಿಯನ್ನು ಆನ್‌ಲೈನ್‌ ಮೂಲಕ ಮಾಡುವಂತೆ ಸಾಫ್ಟವೇರ್‌ ಅಭಿವೃದ್ಧಿಪಡಿಸಬೇಕು. ಬಿಲ್‌ ಕಲೆಕ್ಟರ್‌ಗಳಿಗೆ ಹ್ಯಾಂಡ್‌ ಡಿವೈಸ್‌ ನೀಡಲು ಕ್ರಮ ಕೈಗೊಳ್ಳುವಂತೆ ನೀರು ಸರಬರಾಜಿನ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ವಿಯೋಲಿಯಾ ಇಂಡಿಯಾ ಪ್ರೈ.ಲಿ.ನ ಜಿಲ್ಲಾ ಸಹಾಯಕ ವ್ಯವಸ್ಥಾಪಕ ಅಶೋಕ ಚೌಧರಿಗೆ ನಿರ್ದೇಶನ ನೀಡಿದರು.

ನಿರಂತರ ನೀರು ಸರಬರಾಜು ಯೋಜನೆ ಹೊರತುಪಡಿಸಿ ನಗರಕ್ಕೆ ನೀರು ಸರಬರಾಜಿನ ಮೂಲಗಳಾದ ಬೆಣ್ಣೆತೋರಾ, ಭೀಮಾ ಮತ್ತು ಕೆರೆ ಭೋಸಗಾಗಳಿಂದ ನೀರು ಸರಬರಾಜಿನಲ್ಲಿ ಪ್ರಸ್ತುತ ತೀವ್ರ ಅಗತ್ಯವಾದ ಕಾಮಗಾರಿ ಕೈಗೊಳ್ಳಿ . ಇದಕ್ಕೆ ಬೇಕಾದ ಅನುದಾನದ ಬೇಡಿಕೆ ಕೂಡಲೇ ಸಲ್ಲಿಸಿ. ಅಲ್ಲದೆ ಕೊಳವೆ ಬಾವಿ ಫ್ಲಶ್‌ ಮಾಡುವ, ಮೋಟಾರ್‌ ಅಳವಡಿಕೆ ಬಗ್ಗೆಯೂ ಗಮನಹರಿಸಿ ಎಂದರು. 

ಕಲಬುರಗಿ ನಗರದಲ್ಲಿ 24×7ನಿರಂತರ ನೀರು ಸರಬರಾಜು ಯೋಜನೆ ಕಾಮಗಾರಿಯನ್ನು 2005ರಲ್ಲಿ ಆರಂಭಿಸಿ 2008ಕ್ಕೆ ಮುಕ್ತಾಯಗೊಳಿಸಲಾಗಿದೆ. ಪ್ರಸ್ತುತ ಪ್ರಾತ್ಯಕ್ಷಿಕವಾಗಿ ನಗರದ ವಾರ್ಡ್‌ ಸಂಖ್ಯೆ: 17, 23, 33 ಮತ್ತು 44ರಲ್ಲಿ ನಿರಂತರ ನೀರು ಸರಬರಾಜು ಸಂಪೂರ್ಣವಾಗಿ ಅನುಷ್ಠಾನಗೊಳಿಸಿದ್ದು, ವಾರ್ಡ್‌ ಸಂಖ್ಯೆ: 6, 19, 24, 32, 42, 43 ಮತ್ತು 49ರಲ್ಲಿ ಭಾಗಶಃ ಪೂರ್ಣಗೊಳಿಸಲಾಗಿದೆ ಎಂದು ಕೆ.ಯೂ.ಐ.ಎಫ್‌.ಡಿ.ಸಿ ಕಾರ್ಯನಿರ್ವಾಹಕ ಅಭಿಯಂತ ಡಿ.ವಿ. ಬಂಡೆವಾಡ ಮಾಹಿತಿ ನೀಡಿದರು.

ಪಾಲಿಕೆ ಮಹಾಪೌರರಾದ ಶರಣಕುಮಾರ ಮೋದಿ, ಪಾಲಿಕೆ ಕಾರ್ಯನಿರ್ವಾಹಕ ಅಭಿಯಂತ ಆರ್‌.ಪಿ. ಜಾಧವ್‌, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತ ಉಮೇಶ ಪಾಂಚಾಳ, ಕೆ.ಯೂ.ಐ.ಎಫ್‌.ಡಿ.ಸಿ ಸಹಾಯಕ ಯೋಜನಾ ನಿರ್ದೇಶಕ ಜಿ.ಕೆ.ಪಾಟೀಲ, ಭಗವನದಾಸ್‌ ಸೇರಿದಂತೆ ಕೆ.ಯೂ.ಡಬ್ಲ್ಯು.ಎಸ್‌.ಡಿ.ಬಿ ಮತ್ತು ಕೆ.ಯೂ.ಐ.ಎಫ್‌.ಡಿ.ಸಿ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.

ನಳದ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ:
24×7ನೀರು ಸರಬರಾಜು ಯೋಜನೆಯಡಿ ನಳದ ಸಂಪರ್ಕ ಪಡೆಯಲು ಸೇಡಂ ಪಟ್ಟಣದ ಸಾರ್ವಜನಿಕರು ಅರ್ಜಿಯನ್ನು ಸೇಡಂ ಪುರಸಭೆ ಕಾರ್ಯಾಲಯದಿಂದ ಜು. 10 ರಿಂದ ಪಡೆದು ಭರ್ತಿಮಾಡಿ ನಿಗದಿತ ಶುಲ್ಕ ಭರಿಸಿ ಸೂಕ್ತ ದಾಖಲೆಯೊಂದಿಗೆ ಸಲ್ಲಿಸಿ ನಳದ ಸಂಪರ್ಕ ಪಡೆಯಬೇಕು ಎಂದು ಸೇಡಂ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಆ. 10 ಕೊನೆ ದಿನವಾಗಿದೆ. ಕೊನೆ ದಿನಾಂಕದ ನಂತರ ಅರ್ಜಿ ಸಲ್ಲಿಸುವ ಸಾರ್ವಜನಿಕರುಪುರಸಭೆ ನಿಗದಿಪಡಿಸಿದ ಶುಲ್ಕಗಳೊಂದಿಗೆ ನಳದ ಸಂಪರ್ಕ ಜೋಡಣಾ ವೆಚ್ಚ, ರಸ್ತೆ ಅಗೆತ ಮತ್ತು ದುರಸ್ತಿ ವೆಚ್ಚ ಭರಿಸಿ ನಳದ ಸಂಪರ್ಕ ಪಡೆಯಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆ ಕಚೇರಿ ಸಂಪರ್ಕಿಸಲು ಕೋರಲಾಗಿದೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.