![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 21, 2021, 7:21 PM IST
ವಾಡಿ (ಚಿತ್ತಾಪುರ): ಸರಕಾರದ ಅನ್ನಭಾಗ್ಯ ಯೋಜನೆಯ ಬಡವರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಮಾರಾಟ ದಂಧೆಯಲ್ಲಿ ತೊಡಗಿದ್ದ ವ್ಯಕ್ತಿಯೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ನಾಲವಾರ ಗ್ರಾಮದ ಕಿರಾಣಿ ಅಂಗಡಿ ವ್ಯಾಪಾರಿ ಮಲ್ಲಯ್ಯಸ್ವಾಮಿ ಬಂಧಿತ ಆರೋಪಿ ಯಾಗಿದ್ದು, ಅಧಿಕಾರಿಗಳ ಈ ಮಿಂಚಿನ ದಾಳಿ ಪಡಿತರ ಅಕ್ಕಿ ದಂಧೆಕೋರರಲ್ಲಿ ನಡುಕ ಹುಟ್ಟಿಸಿದೆ.
ರಾವೂರಿನ ಕಿರಾಣಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ ಸಾಗಿಸುತ್ತಿದ್ದ ವೇಳೆ ಪಡಿತರ ಅಕಿ ಪತ್ತೆಯಾದ ಬಳಿಕ ಆಹಾರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ದಾಳಿ ಮುಂದುವರೆದಿದ್ದು, ಖಚಿತ ಮಾಹಿತಿ ಮೇರೆಗೆ ಸೋಮವಾರ ಮದ್ಯಾಹ್ನ ನಾಲವಾರ ಗ್ರಾಮದ ಮಲ್ಲಯ್ಯಸ್ವಾಮಿ ಎಂಬುವವರ ಕಿರಾಣಿ ಅಂಗಡಿ ಮೇಲೆ ಮತ್ತೊಂದು ದಾಳಿ ನಡೆದಿದೆ.
ಚಿತ್ತಾಪುರ ತಾಲೂಕು ಆಹಾರ ಇಲಾಖೆಯ ಶಿರಸ್ತೆದಾರ ಚನ್ನಮಲ್ಲಪ್ಪ ಹೂನಳ್ಳಿ, ವಾಡಿ ಠಾಣೆಯ ಪಿಎಸ್ಐ ವಿಜಯಕುಮಾರ ಭಾವಗಿ ಮತ್ತು ನಾಲವಾರ ಕಂದಾಯ ಅಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಒಟ್ಟು 1.4 ಲಕ್ಷ ರೂ. ಮೌಲ್ಯದ 40 ಕ್ವಿಂಟಲ್ ಅನ್ನಭಾಗ್ಯದ ಅಕ್ಕಿ ಜಪ್ತಿಮಾಡಿಕೊಂಡಿದ್ದಾರೆ.
ಆರೋಪಿ ಮಲ್ಲಯ್ಯ ರೇವಣಸಿದ್ದಯ್ಯಸ್ವಾಮಿಯನ್ನು ಬಂಧಿಸಿ ವಶಪಡಿಸಿಕೊಳ್ಳಲಾದ ನೂರಾರು ಅಕ್ಕಿ ಚೀಲಗಳನ್ನು ಟ್ರ್ಯಾಕ್ಟರ್ ಮತ್ತು ಇತರ ಗೂಡ್ಸ್ ವಾಹನಗಳಲ್ಲಿ ತುಂಬಿ ಠಾಣೆಗೆ ತರಲಾಗಿದೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.