Jan.19 ರಂದು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ
Team Udayavani, Jan 16, 2024, 10:41 PM IST
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಜ. 19) ನಗರಕ್ಕೆ ಬಂದು ಹೋಗಲಿದ್ದಾರೆ.
ಅಂದು ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 9.30ಕ್ಕೆ ಆಗಮಿಸುವ ಅವರು, ಬಳಿಕ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವರು.
ಅಲ್ಲಿ ಸಹಸ್ರಾರು ಮನೆಗಳ ಹಕ್ಕುಪತ್ರ ವಿತರಣೆ ನೆರವೇರಿಸಿ ಮರಳಿ ಕಲಬುರಗಿಗೆ ಮಧ್ಯಾಹ್ನ 12.30ಕ್ಕೆ ಮರಳುವರು. ಮೋದಿ ಅವರು ಈ ಹಿಂದೆಯೂ ಮನೆಗಳ ನಿರ್ಮಾಣದ ಭೂಮಿಪೂಜೆ ನೆರವೇರಿಸುವ ಸಂದರ್ಭದಲ್ಲೂ ಕಲಬುರಗಿ ಮೂಲಕವೇ ಬಂದು ಹೋಗಿದ್ದರು.
ಸೊಲ್ಲಾಪುರದಿಂದ ಮರಳಿದ ಬಳಿಕ ವಿಶೇಷ ವಿಮಾನ ಮೂಲಕ ಮೈಸೂರಿಗೆ ತೆರಳಲಿದ್ದಾರೆ ಎಂದು ಗೊತ್ತಾಗಿದೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತ ಬಂದೋಬಸ್ತ್ ಕಲ್ಪಿಸುವ ನಿಟ್ಟಿನಲ್ಲಿ ಕಲಬುರಗಿ ಪೊಲೀಸ್ ಆಯುಕ್ತರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಈ ಮಧ್ಯೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಬುಧವಾರ ಬೆಳಿಗ್ಗೆ 11ಕ್ಕೆ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಅಲ್ಲದೇ ವಿಶೇಷ ಭದ್ರತಾ ಪಡೆ ಸಹ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದೆ.
ಇನ್ನೊಂದೆಡೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಸಮಾರಂಭವನ್ನು ಕಲ್ಯಾಣ ಕರ್ನಾಟಕದ ಕಲಬುರಗಿ ಇಲ್ಲವೇ ಬೀದರ್ ಜಿಲ್ಲೆಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಪ್ರಧಾನ ಮೋದಿ ಆಗಮಿಸಲಿದ್ದಾರೆ. ಈ ಕುರಿತು ಈಗಾಗಲೇ ಬಿಜೆಪಿ ಎರಡು ಸುತ್ತಿನ ಸಭೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.