![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 21, 2020, 5:50 PM IST
ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಕಾಯ್ದೆಗಳನ್ನು ವಿರೋಧಿಸಿ ಕಲಬುರಗಿ ನಗರದಲ್ಲಿ ರಾಷ್ಟ್ರೀಯ ಮಟ್ಟದ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿದ್ದಾರೆ.
ನಗರದ ಬೆಂಗಾಲಿ ಪೀರ್ ಮೈದಾನದಲ್ಲಿ ಸಮಾವೇಶ ನಡೆಯುತ್ತಿದ್ದು, ಸೀತಾರಾಮ ಯೆಚೂರಿ, ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ, ಮಾರುತಿ ಮಾನ್ಪಡೆ ಸೇರಿದಂತೆ ಹಲವರು ನಾಯಕರು ಭಾಗವಹಿಸಿದ್ದಾರೆ.
ಕಲ್ಯಾಣ ಕರ್ನಾಟಕ ಸೇರಿ ವಿವಿಧ ಭಾಗಗಳಿಂದ ಜನರು ಬಂದು ಸಮಾವೇಶದಲ್ಲಿ ತಿರಂಗ ಧ್ವಜಗಳನ್ನು ಹಿಡಿದು ಪಾಲ್ಗೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.