ಅವಿರೋಧ ಆಯ್ಕೆ ವಿರೋಧಿಸಿ ಪ್ರತಿಭಟನೆ


Team Udayavani, Dec 18, 2020, 5:23 PM IST

ಅವಿರೋಧ ಆಯ್ಕೆ ವಿರೋಧಿಸಿ ಪ್ರತಿಭಟನೆ

ವಾಡಿ: ಅಭ್ಯರ್ಥಿಗಳು ನಾಮಪತ್ರಕ್ಕೆ ಸಹಿ ಹಾಕುವ ಸಂದರ್ಭ ದುರ್ಬಳಕೆ ಮಾಡಿಕೊಂಡ ಗ್ರಾಮದ ರಾಜಕೀಯ ಪ್ರಭಾವಿಮುಖಂಡರು, ಅಭ್ಯರ್ಥಿಗಳ ಗಮನ ಬೇರೆಡೆ ಸೆಳೆದು ನಾಮಪತ್ರ ಹಿಂಪಡೆಯುವ ಪತ್ರಕ್ಕೂ ಸಹಿ ಹಾಕಿಸಿಕೊಂಡು ಮೋಸ ಮಾಡಿರುವ ಆರೋಪ ರಾವೂರ ಗ್ರಾಮಸ್ಥರಿಂದ ಕೇಳಿಬಂದಿದೆ.

ರಾವೂರ ಗ್ರಾಪಂ ವ್ಯಾಪ್ತಿಯ ಒಟ್ಟು 32 ಸ್ಥಾನಗಳಿಗೆ 56 ನಾಮಪತ್ರ ಸಲ್ಲಿಕೆಯಾಗಿವೆ. ಗ್ರಾಮದ ಪ್ರಭಾವಿಮುಖಂಡರು, ಎಲ್ಲ ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆಗೊಳಿಸಲು ಮುಂದಾಗಿರುವುದೇ ಜನಾಕ್ರೋಶಕ್ಕೆ, ಪ್ರತಿಭಟನೆಗೆ ಕಾರಣವಾಗಿದೆ.

ಗುರುವಾರ ವಾರ್ಡ್‌-7ರ ನೂರಾರು ಜನಮತದಾರರು ಗ್ರಾಪಂ ಮುಂದೆ ದಿಢೀರ್‌ ಪ್ರತಿಭಟನೆನಡೆಸಿದ ಪ್ರಸಂಗ ನಡೆಯಿತು. ರಾವೂರ ಗ್ರಾಮದಲ್ಲಿ ಜನಾಭಿಪ್ರಾಯ ಪಡೆಯದೇ ಎರಡು ಪಕ್ಷಗಳ ಮುಖಂಡರುತಮಗಿಷ್ಟವಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಜನರುಸೂಚಿಸುವ ನಾಯಕನನ್ನು ಚುನಾವಣೆಗೆ ಸ್ಪರ್ಧಿಸದಂತೆಬೆದರಿಕೆ ಹಾಕುತ್ತಿದ್ದಾರೆ. ನಾವು ಸಲ್ಲಿಸಿದ ನಾಮಪತ್ರದಜತೆಗೆ ನಾಮಪತ್ರ ವಾಪಸ್‌ ಪಡೆಯುವ ಅರ್ಜಿಯನ್ನು ಜೋಡಿಸಿಟ್ಟು ಮೋದಿಂದ ನಮ್ಮ ಸಹಿ ಹಾಕಿಸಿಕೊಂಡಿದ್ದಾರೆ. ಬಹುತೇಕ ವಾರ್ಡ್‌ಗಳಲ್ಲಿ ಇದೇ ತಂತ್ರ ಅನುಸರಿಸಿಪ್ರಜಾತಂತ್ರ ವ್ಯವಸ್ಥೆಗೆ ಮಸಿ ಬಳಿದಿದ್ದಾರೆ ಎಂದು ಸಹಿವಂಚನೆಗೊಳಗಾದ ಅಭ್ಯರ್ಥಿಗಳಾದ ಶ್ರೀದೇವಿ ರಜನಿಕಾಂತಭೋವಿ (ಪರಿಶಿಷ್ಟ ಜಾತಿ ಮೀಸಲು), ರಹೆಮಾನ್‌ಪಟೇಲ (ಸಾಮಾನ್ಯ), ಯುವ ಮುಖಂಡ ಮಹೆಬೂಬಖಾನ್‌ ಆರೋಪಿಸಿದರು.

ನಾವು ಯಾರದೇ ಒತ್ತಡಕ್ಕೆ ಮಣಿಯುವುದಿಲ್ಲ. ನಾಮಪತ್ರ ಹಿಂಪಡೆಯುವುದಿಲ್ಲ. ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಅಕ್ರಮವಾಗಿಸಹಿ ಹಾಕಿಸಿ, ಅಭ್ಯರ್ಥಿಗಳನ್ನು ವಂಚಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಚುನಾವಣೆ ಅಧಿಕಾರಿಗಳನ್ನು ಒತ್ತಾಯಿಸಿದರು. ಒಟ್ಟು 32 ಸದಸ್ಯ ಸ್ಥಾನ ಹೊಂದುವ ಮೂಲಕ

ಚಿತ್ತಾಪುರ ತಾಲೂಕಿನಲ್ಲೇ ಅತಿ ದೊಡ್ಡ ಗ್ರಾಪಂ ಎಂದು ಕರೆಯಿಸಿಕೊಂಡಿರುವ ರಾವೂರ ಗ್ರಾಪಂ ರಾಜಕಾರಣ ಇದೀಗ ಜನಾಕ್ರೋಶಕ್ಕೆ ಗುರಿಯಾಗಿದೆ. ಪಕ್ಷ ರಾಜಕಾರಣದಿಂದ ಮುಕ್ತವಾಗಿ ನಡೆಯಬೇಕಿದ್ದ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ಹೆಣೆಯುತ್ತಿದ್ದಾರೆ. ಪ್ರತಿಸ್ಪರ್ಧಿಗಳ ಮೇಲೆ ಒತ್ತಡ ಹೇರುವ ಮೂಲಕ ಎಲ್ಲ ಸ್ಥಾನಗಳನ್ನು ಅವಿರೋಧವಾಗಿ ಗೆಲ್ಲಲು ವಿವಿಧ ರೀತಿಯ ಬಲ ಪ್ರಯೋಗ ಮಾಡುತ್ತಿದ್ದು, ಮತದಾರರಿಂದ ಪ್ರತಿರೋಧ ಎದುರಿಸುತ್ತಿದ್ದಾರೆ.

ಚುನಾವಣೆಗೆ ಸ್ಪರ್ಧೆ ಬಯಸಿಸಲ್ಲಿಸಲಾದ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಿಕ್ರಮಬದ್ಧವಾಗಿ ನಾಮಫಲಕಕ್ಕೆ ಲಗತ್ತಿಸಿದ್ದೇವೆ. ನಾಮಪತ್ರಹಿಂಪಡೆಯಲು ನಾವು ಯಾರಿಗೂಅರ್ಜಿ ವಿತರಿಸಿಲ್ಲ. ಹೊರಗಿನ ಖಾಸಗಿ ಅಂಗಡಿಗಳಲ್ಲೂಈ ಅರ್ಜಿಗಳು ಲಭ್ಯವಿವೆ. ಅಭ್ಯರ್ಥಿಗಳು ಮುಖಾಮುಖೀಹಾಜರಾಗಿ ನಾಮಪತ್ರ ಹಿಂದಕ್ಕೆ ಪಡೆಯಬೇಕು. ಅಭ್ಯರ್ಥಿಕಚೇರಿಗೆ ಹಾಜರಾಗದ ಸ್ಥಿತಿಯಲ್ಲಿದ್ದರೆ, ಅವರ ಸೂಚಕರುಹಾಜರಾಗಿ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಆಗಲೂ ನಾವು ಅಭ್ಯರ್ಥಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಅಭಿಪ್ರಾಯ ಪಡೆಯುತ್ತೇವೆ. – ರಾಜಶೇಖರ ಮಠ,ಚುನಾವಣೆ ಅಧಿಕಾರಿ, ಗ್ರಾ.ಪಂ, ರಾವೂರ

ರಾವೂರಿನಲ್ಲಿ ರಾಜಕೀಯ ಮುಖಂಡರಿಂದ ಪ್ರಜಾಪ್ರಭುತ್ವದಕಗ್ಗೊಲೆಯಾಗಿದೆ. ಚುನಾವಣೆ ಎದುರಿಸಲು ಉತ್ಸಾಹಿ ಯುವಕರು ಸಿದ್ಧರಿದ್ದರೂ ಸ್ಪರ್ಧಿಸದಂತೆ ಬೆದರಿಕೆ ಹಾಕುತ್ತಿದ್ದಾರೆ. ನಾಮಪತ್ರ ಸಲ್ಲಿಸಲು ಮುಂದಾದವರ ಅರ್ಜಿಗಳನ್ನು ಕಸಿದುಕೊಂಡು ಹರಿದು ಹಾಕುವ ಮಟ್ಟಕ್ಕೆ ಗೂಂಡಾ ರಾಜಕಾರಣ ಹುಟ್ಟಿಕೊಂಡಿದೆ. ಹೀಗಾಗಿ ಅನೇಕ ಯುವಕರುರಾಜಕೀಯ ಅಧಿಕಾರದಿಂದ ವಂಚಿತರಾಗಿದ್ದಾರೆ.  –ರಾಘವೇಂದ್ರ ಹೂಗಾರ, ಯುವ ಮುಖಂಡ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.