ಗ್ರಾಮೀಣ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Sep 23, 2022, 6:50 PM IST

12road

ಆಳಂದ: ತಾಲೂಕಿನ ಮಾಡಿಯಾಳ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ರಸ್ತೆ ದುರಸ್ಥಿ ಸೇರಿದಂತೆ ಪ್ರಮುಖ ಬೇಡಿಕೆಗೆ ಮುಂದಿಟ್ಟುಕೊಂಡು ಸಾರ್ವಜನಿಕರು ಬುಧವಾರ ರಸ್ತೆ ತಡೆ ಪ್ರತಿಭಟನಾ ಧರಣಿ ನಡೆಸಿದರು.

ಮಾಡಿಯಾಳ ಗ್ರಾಮದ ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ ಮೇಲೆ ವಿವಿಧ ಗ್ರಾಮಗಳ ಗ್ರಾಮಸ್ಥರಿಂದ ನಡೆದ ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಸಿದ್ಧರಾಮ ಪ್ಯಾಟಿ ಭಾಗವಹಿಸಿ ಮಾತನಾಡಿದರು.

ಮಾಡಿಯಾಳ ವಲಯದ ಅನೇಕ ಗ್ರಾಮ ಸಂಪರ್ಕ ರಸ್ತೆಗಳ ತೀರಾ ಹದಗೆಟ್ಟಿದ್ದು, ಅಧಿಕಾರಿಗಳು ಕೂಡಲೇ ದುರಸ್ತಿ ಮಾಡಿ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡಿಕೊಡಬೇಕೆಂದು ಪ್ಯಾಟಿ ಒತ್ತಾಯಿಸಿದರು.

ಔರಾದ ಸದಾಶಿವಗಡ ರಾಜ್ಯ ಹೆದ್ದಾರಿಯಲ್ಲಿ ಬರುವ ದೇವಂತಗಿ, ಮಾಡಿಯಾಳ, ಕುಲಾಲಿ ವರೆಗಿನ ರಸ್ತೆಯಲ್ಲಿ ಮೊದಲು ಬಸ್‌, ಜೀಪ್‌, ಟಂಟಂ, ದ್ವಿಚಕ್ರ ವಾಹನಗಳು ಹೋಗುತ್ತಿದ್ದವು. ಆದರೆ, ಈಗ ಜನರು ನಡೆಯಲು ಯೋಗ್ಯವಿಲ್ಲದ ರಾಜ್ಯ ಹೆದ್ದಾರಿಯಾಗಿದೆ. ಅಲ್ಲದೇ ಮಾಡಿಯಾಳದಿಂದ ನಿಂಬರ್ಗಾವರೆಗೆ ರಸ್ತೆಯೂ ಸಂಪೂರ್ಣವಾಗಿ ಹಾಳಾಗಿದೆ ಇದನ್ನು ದುರಸ್ತಿ ಮಾಡಬೇಕೆಂದು ಅವರು ಆಗ್ರಹಿಸಿದರು.

ಮುಖಂಡ ಚನ್ನಮಲೇಶ್ವರ ಬಿರಾದಾರ, ಭೀಮಾಶಂಕರ ಖೊಂಬಿನ ಮಾತನಾಡಿದರು. ಮುಖಂಡ ಕಲ್ಮೇಶ ಪಾಟೀಲ, ಬಾಬು ಗೊಬ್ಬರ, ಲಕ್ಷ್ಮಣ ಸೂಗುರ, ಶ್ರೀಕಾಂತ ಕೌಲಗಿ, ಸಂಗಣ್ಣಾ ಮುದ್ದಡಗಿ, ಬಿ.ಜಿ.ಮಡ್ಡಿತೋಟ್‌, ಪ್ರಭಾಕರ ಮಡ್ಡಿತೋಟ್‌, ರೇವಣಸಿದ್ಧ ಶ್ರೀಗಣಿ, ರಮೇಶ ಕಲಶಟ್ಟಿ, ಸುಭಾಷ ಪೊಲೀಸ್‌ ಪಾಟೀಲ, ರಮೇಶ ರಾಠೊಡ, ಸಿದ್ಧರಾಮ ಆಳಂದ, ಶಾಮರಾವ ಸಿಂಗೆ, ಈರಣ್ಣಾ ನಿಂಬಾಳ, ಪ್ರಭಾಕರ ಬಿರಾದಾರ, ಬಸವರಾಜ ಕಲಶೆಟ್ಟಿ, ಶಿವಾನಂದ, ಶಂಕರ ಬಿರಾದಾರ, ಬಸವರಾಜ ಕೌಲಗಿ, ಶಿವಯೋಗಿ ಕೌಲಗಿ, ನಿಂಗಪ್ಪ ನಾಶಿ, ಸುಭಾಷ ಕಂಬಾರ, ಭವಾನೇಪ್ಪ ಕೌಲಗಿ, ಕಲ್ಯಾಣಿ ಶ್ರೀಗಣಿ ಹಾಗೂ ವಿವಿಧ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಿಂಬರಗಾ ನಾಡ ತಹಶೀಲ್ದಾರ್‌ ಮಹೇಶ, ಕೆಕೆಆರ್‌ಟಿಸಿ ಘಟಕ ವ್ಯವಸ್ಥಾಪಕ ಜೆಟ್ಟೆಪ್ಪ ದೊಡ್ಡಮನಿ ಹಾಗೂ ಇನ್ನಿತರ ಇಲಾಖೆ ಸಿಬ್ಬಂದಿ ಮನವಿ ಸ್ವೀಕರಿಸಿದರು. ಸುಮಾರು ನಾಲ್ಕು ತಾಸು ರಸ್ತೆ ತಡೆಯಿಂದ ಆಳಂದ ಕಲಬುರಗಿ, ಅಕ್ಕಲಕೋಟ, ಸೊಲ್ಲಾಪುರ ಕಡೆ ಹೋಗುವ ಜನರಿಗೆ ತೊಂದರೆಯಾಯಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.