ಪೊಲೀಸರ ದೌರ್ಜನ್ಯ ಖಂಡಿಸಿ ಶವವಿಟ್ಟು ಪ್ರತಿಭಟನೆ


Team Udayavani, May 28, 2022, 12:20 PM IST

9protest

ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರು ಗ್ರಾಮದ ಮಂಜುನಾಥ ಶಂಕರ ಸಿಂಧೆ (32) ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಕುಟುಂಬದ ಸದಸ್ಯರು ಹಾಗೂ ಮೃತನ ಪತ್ನಿ ಡಿವೈಎಸ್ಪಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪೊಲೀಸರು ಬುಧವಾರ ಹಾಗೂ ಗುರುವಾರ ಶಂಕರನ ವಿಚಾರಣೆ ನಡೆಸಿ ಸಿಕ್ಕಾಪಟ್ಟೆ ಥಳಿಸಿದ್ದರು. ಅಲ್ಲದೇ ಜೈಲಿಗೆ ತಳ್ಳುವ ಭಯವೊಡ್ಡಿದ್ದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ದೂರಿದರು. ಪೊಲೀಸರು ಹಾಗೂ ಮಗು ಕಳ್ಳತನ ಮಾಡಿದ್ದಾನೆಂದು ದೂರು ನೀಡಿರುವ ಸಾಯಿಬಣ್ಣ ಜೋಗೂರು ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಶವದ ಮೇಲಿದ್ದ ಹೊಡೆದ ಗುರುತುಗಳನ್ನು ಸಿಪಿಐಗೆ ತೋರಿಸಿದರು. ಈ ವೇಳೆ ತುಸು ವಾಗ್ವಾದವೂ ನಡೆಯಿತು. ಸಂಜೆ ಪೊಲೀಸರು, ದೂರುದಾರರು ಮತ್ತು ಮೃತನ ಪತ್ನಿ ಸೀತಾ ಮಧ್ಯೆ ಮಾತುಕತೆ ನಡೆದು ಶವ ತೆಗೆದುಕೊಂಡು ಮರತೂರಕ್ಕೆ ಹೋಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ: ಬುಧವಾರ ಮಂಜುನಾಥ ಪತ್ನಿ ಸೀತಾಳ ಅಣ್ಣ ನಾಗೇಶ್‌ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮಗನನ್ನು ತಾಯಿ ಪ್ರತಿಭಾಳ ಬಳಿಯಿಂದ ಕರೆದುಕೊಂಡು ಹೋಗಿದ್ದ. ಅದರೆ ಆ ಮಗುವನ್ನು ಸೀತಾಳ ಗಂಡ ಮಂಜುನಾಥ ಕರೆದುಕೊಂಡು ಹೋಗಿದ್ದಾನೆಂದು ಪ್ರತಿಭಾಳ ತಂದೆ ಸಾಯಿಬಣ್ಣ ಜೋಗೂರು ಪೊಲೀಸರಿಗೆ ದೂರು ನೀಡಿದ್ದರು. ಇದರಿಂದಾಗಿ ಬುಧವಾರ ಮತ್ತು ಗುರುವಾರ ಕರೆಯಿಸಿ ಮಂಜುನಾಥನನ್ನು ಪೊಲೀಸರ ವಿಚಾರಣೆ ಮಾಡಿದ್ದರು.

ಡೆತ್‌ ನೋಟ್‌ನಲ್ಲೇನಿದೆ?

ಮಂಜುನಾಥ ನೇಣು ಹಾಕಿಕೊಳ್ಳುವ ಮುನ್ನ ಡೆತ್‌ ನೋಟು ಬರೆದಿಟ್ಟಿದ್ದಾನೆ. “ನಾನು ಮರ್ಯಾದಸ್ತ ಕುಟುಂಬದವ. ಜೀವನದಲ್ಲಿ ಯಾವ ತಪ್ಪು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಎಫ್‌ಐಆರ್‌ ಮಾಡಿದ್ದಲ್ಲದೇ, ನನ್ನನ್ನು ಮತ್ತು ಹೆಂಡತಿಯನ್ನು ಜೈಲಿಗೆ ಹಾಕುವುದಾಗಿ ಹೇಳಿದ್ದಾರೆ. ಇದು ನನಗಾದ ಅವಮಾನ. ನನ್ನ ಸಾವಿಗೆ ಸಾಯಿಬಣ್ಣ ಜೋಗೂರು, ಶರಣಮ್ಮ, ಪ್ರತಿಭಾ ಮತ್ತು ನಾಗೇಶ ಕಾರಣ. ಹೆಂಡತಿ ಸೀತಾಗಳಿಗೆ ಕ್ಷಮೆ ಕೋರಿ ನಾನು ನಿನಗೆ ಮೋಸ ಮಾಡಿದೆ. ನಿಮ್ಮನ್ನು ಬಿಟ್ಟು ಹೋಗುತ್ತಿದ್ದೇನೆ’ ಎಂದು ಬರೆದು ಮೃತಪಟ್ಟಿದ್ದಾನೆ.

ನಮ್ಮ ಪೊಲೀಸರು ಯಾವುದೇ ಟಾರ್ಚ್‌ರ್‌ ನೀಡಿಲ್ಲ. ಮಗು ಕಳ್ಳತನ ಪ್ರಕರಣದ ದೂರಿನ ಹಿನ್ನೆಲೆಯಲ್ಲಿ ಮಂಜುನಾಥನನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡಿದ್ದು ನಿಜ. ಆದರೆ ಹೊಡೆದಿಲ್ಲ. ಹೊಡೆತದಿಂದ ಆತ ಸತ್ತಿಲ್ಲ. ಆತ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಡೆತ್‌ ನೋಟ್‌ ಕೂಡ ಬರೆದಿಟ್ಟಿದ್ದಾನೆ. -ಇಶಾ ಪಂತ್‌, ಎಸ್ಪಿ

ನನ್ನ ಗಂಡನಿಗೆ ಪೊಲೀಸರು ಹೊಡೆದಿದ್ದಾರೆ. ಅಲ್ಲದೇ ಜೈಲಿಗೆ ಹಾಕುವುದಾಗಿ ಹೇಳಿದ್ದಾರೆ. ಇದರಿಂದ ಆತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಶ ಮತ್ತು ಪ್ರತಿಭಾಗಳಿಗೆ ಜಗಳ ಇತ್ತು. ನಾಗೇಶ ತನ್ನ ಮಗನನ್ನು ತಾನು ಕರೆದುಕೊಂಡು ಹೋದರೆ ನನ್ನ ಗಂಡನ ವಿರುದ್ಧ ದೂರು ನೀಡಿದವರ ವಿರುದ್ಧ ಕ್ರಮ ಆಗಬೇಕು, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. -ಸೀತಾ, ಮೃತ ಮಂಜುನಾಥ ಪತ್ನಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.