ಜಾನಪದ ಸಾಹಿತ್ಯದ ಅಗತ್ಯ ಈಗಲೇ ಹೆಚ್ಚು


Team Udayavani, Feb 7, 2020, 12:14 PM IST

7-February-7

ಕಲಬುರ್ಗಿ: ಮೌಲ್ಯಗಳು ಅಪಮೌಲ್ಯಗಳಾಗುತ್ತಿರುವ ಸಂದರ್ಭದಲ್ಲಿ ಜನಪದ ಸಾಹಿತ್ಯ ಎಂದಿಗಿಂತ ಹೆಚ್ಚು ಅವಶ್ಯಕವಾಗಿದೆ ಎಂದು ಡಾ. ಶೈಲಜಾ ಬಾಗೇವಾಡಿ ಹೇಳಿದರು.

ಸಮ್ಮೇಳನದ ದ್ವಿತೀಯದಿನ ನಡೆದ ಜಾನಪದ ಜಗತ್ತು ಗೋಷ್ಠಿಯಲ್ಲಿ  ಜಾನಪದ ಸಾಹಿತ್ಯದ ವಿಷಯದ ಕುರಿತು ಮಾತನಾಡಿದರು. ಜಾಗತೀಕರಣದ ಯುಗದಲ್ಲಿ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ. ಮಾನವೀಯ ಮೌಲ್ಯಗಳು, ಜೀವನ ಪದ್ಧತಿ, ರೀತಿ-ನೀತಿ ಪ್ರತಿಪಾದಿಸುವ ಜಾನಪದ ಸಾಹಿತ್ಯ ಹೆಚ್ಚು ಅವಶ್ಯಕವೆನಿಸುತ್ತದೆ ಎಂದರು. ಜಾನಪದ ಸಾಹಿತ್ಯದಲ್ಲಿನ
ಜೀವನಮೌಲ್ಯ ಶಿಷ್ಟ ಸಾಹಿತ್ಯದಲ್ಲಿ ಸಿಗಲಾರದು.

ಅನುಭವಾಮೃತವೇ ಇದಕ್ಕೆ ಕಾರಣವಾಗಿದೆ. ಜಾನಪದ ಸಾಹಿತ್ಯದಲ್ಲಿ ವೈಯಕ್ತಿಕ ಮೌಲ್ಯಕ್ಕಿಂತ, ಸಾಮಾಜಿಕ ಮೌಲ್ಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ. ಜಾನಪದವು ಹೃದಯದಿಂದ ಹೃದಯಕ್ಕೆ ಹರಿಯುವ ಜೀವದ್ರವ್ಯವಾಗಿದೆ. ಬದುಕಿನ ರಸಾನುಭವ ಇದರಲ್ಲಿದೆ. ಅದರೂ ಕೆಲವರು ಜಾನಪದ ಸಾಹಿತ್ಯವನ್ನು ಲಘುವಾಗಿ ಪರಿಗಣಿಸುತ್ತಿರುವುದು ದುರ್ದೈವದ ಸಂಗತಿ. ಜನವಾಣಿ ಬೇರು, ಕವಿವಾಣಿ ಹೂವು ಎಂದು ಹಿರಿಯ ಕವಿಗಳೇ ಹೇಳಿದ್ದನ್ನು ಸ್ಮರಿಸಿಕೊಳ್ಳುವುದು ಸೂಕ್ತವಾಗಿದೆ ಎಂದರು. ಡಾ.ರಾಜಶ್ರೀ ಜಾನಪದ ಹಾಗೂ ಸಮಕಾಲೀನತೆ ಕುರಿತು ಮಾತನಾಡಿ, ಪ್ರಸ್ತುತ ಜಾನಪದ ಲಿಖೀತ ರೂಪದಲ್ಲಿ ಮಾತ್ರವಲ್ಲ, ಆದು ನಾಗರಿಕ ಹಾಗೂ ಜಾಗತಿಕ ನೆಲೆಯಲ್ಲಿ ವಿಸ್ತರಿತಗೊಂಡಿದೆ.

ಜಾನಪದವನ್ನು ಅಧ್ಯಯನ ಶಿಸ್ತಾಗಿ ಬೆಳೆಸಲಾಗುತ್ತಿದೆ. ಇದು ಪರಿಶೀಲನೆಯ ಹೊಸ ವಿಷಯವಾಗಿ ರೂಪಗೊಂಡಿದೆ ಎಂದರು. ಡಾ.ಹಣಮಂತರಾವ ದೊಡ್ಡಮನಿ ಜಾನಪದ ಕಲೆಗಳು ಕುರಿತು ಮಾತನಾಡಿ, ಬಾಯಿಯಿಂದ ಕಿವಿಗೆ ಕಂಠಸ್ಥವಾಗಿ ಬಂದ ಸಾಹಿತ್ಯವೇ ಜಾನಪದ. ಮಾನವರಲ್ಲಿ ಮಾನವೀಯ ಮೌಲ್ಯಗಳು ಅರಂಭಗೊಂಡಂದಿನಿಂದ ಜಾನಪದ ಅರಂಭಗೊಂಡಿದೆ. ಜಾಗತೀಕರಣದ ಯುಗದಲ್ಲಿ ಯಂತ್ರಗಳಿಂದಾಗಿ ಜಾನಪದ ಹಾಡುಗಳು ಮಾಯವಾಗುತ್ತಿವೆ. 10-15 ದಿನಗಳ ಕಾಲ ನಡೆಯುತ್ತಿದ್ದ ಮದುವೆಗಳು ಕೆಲ ಗಂಟೆಗಳಿಗೆ ಸೀಮಿತಗೊಳ್ಳುತ್ತಿರುವುದರಿಂದ ಜಾನಪದಕ್ಕೆ ಆಚರಣೆಗಳಲ್ಲಿ ಸ್ಥಾನ ಇಲ್ಲವಾಗಿದೆ.

ಶಿಶುನಾಳ ಶರೀಫ‌, ಕಡಕೋಳ ಮಡಿವಾಳಪ್ಪ ತತ್ವಪದಗಳಿಂದ ಜಾನಪದವನ್ನು ಜನರಿಗೆ ಮುಟ್ಟಿಸುವ ಪ್ರಮುಖ ಕಾರ್ಯ ಮಾಡಿದರು ಎಂದರು.

ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಬಿ.ಆರ್‌. ಪೊಲೀಸ್‌ ಪಾಟೀಲ, ಬಯಲಾಟ ಹಾಗೂ ಯಕ್ಷಗಾನ ಕುರಿತು ಮಾತನಾಡಿ, ಮಕ್ಕಳ ಕೈಗೆ ಮೊಬೈಲ್‌ ಬದಲಿಗೆ ಜಾನಪದ ಸಾಹಿತ್ಯವನ್ನು ನೀಡುವ ಅವಶ್ಯಕತೆಯಿದೆ. ಇದೇ ಸಂದರ್ಭದಲ್ಲಿ ಅಪ್ಪಟ ಜಾನಪದ ಹಾಡುಗಳನ್ನು ಮೊಬೈಲ್‌ ಅಪ್ಲಿಕೇಶನ್‌ ಮೂಲಕ ಹೆಚ್ಚು ಜನರಿಗೆ ಮುಟ್ಟಿಸಬೇಕು. ಜಾನಪದ ಸಾಹಿತ್ಯವನ್ನು ಓದಿದರೆ ಸಾಲದು, ಅದನ್ನು ಅನ್ವಯಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ, ಉತ್ತರ ಕನ್ನಡದವರು ಯಕ್ಷಗಾನ ಬೆಳೆಸಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದವರು ದೊಡ್ಡಾಟ, ಸಣ್ಣಾಟ ಬೆಳೆಸಬೇಕು. ನಮ್ಮ ಕಲೆಗಳನ್ನು ಪೋತ್ಸಾಹಿಸಬೇಕು ಎಂದರು.

ವಿಶ್ವನಾಥ ಕೋಟಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.