ಕೋರಿಸಿದ್ಧೇಶ್ವರ ರಥೋತ್ಸವ- ಫಲಿಸದ ಸಂಧಾನ: ಲಘು ಲಾಠಿ ಪ್ರಹಾರ

ಸಂಭ್ರಮದ ನಾಲವಾರ ಕೋರಿಸಿದ್ಧೇಶ್ವರ ರಥೋತ್ಸವ

Team Udayavani, Feb 3, 2022, 9:16 AM IST

rathossava

ವಾಡಿ: ಮಹಾಮಾರಿ ಸಾಂಕ್ರಾಮಿಕ ರೋಗ ಕೊರೊನಾ ಸೋಂಕಿನ ರೂಪಾಂತರಿ ವೈರಸ್ ಹೆಚ್ಚಾಗುತ್ತಿರುವ ಕಾರಣಕ್ಕೆ ಮಾರ್ಗಸೂಚಿಗಳನ್ವಯ ರದ್ದಾಗಿದ್ದ ಚಿತ್ತಾಪುರ ತಾಲೂಕಿನ ನಾಲವಾರ ಶ್ರೀಕೋರಿಸಿದ್ಧೇಶ್ವರ ರಥೋತ್ಸವ ಬುಧವಾರ ತಾಲೂಕು ಆಡಳಿತದ ಆದೇಶವನ್ನು ಧಿಕ್ಕರಿಸಿ ಸಾಗಿತು. ಪೊಲೀಸರ ಸರ್ಪಗಾವಲು ಬೇಧಿಸಿ ರಥ ಎಳೆದ ಭಕ್ತರು, ಜಯಘೋಷಗಳನ್ನು ಮೊಳಗಿಸಿ ಕಾನೂನಿನ ಬೇಲಿ ಜಿಗಿದರು.

ಜಾತ್ರೆಗೂ ಮುಂಚೆ ನಾಲವಾರ ಮಠದಲ್ಲಿ ಪೀಠಾಧಿಪತಿ ಡಾ.ಸಿದ್ಧ ತೋಟೇಂದ್ರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಶಾಂತಿ ಸಭೆ ನಡೆಸಿ ಜಾತ್ರೆ, ತನಾರತಿ, ರಥೋತ್ಸವ ಸಂಪೂರ್ಣ ರದ್ದು ಎಂದು ಘೋಷಿಸಿದ್ದ ಪೊಲೀಸರು ಹಾಗೂ ತಹಶೀಲ್ದಾರರ ಸಮ್ಮುಖದಲ್ಲೇ ಬುಧವಾರ ಲಕ್ಷಾಂತರ ಭಕ್ತರ ಸಾಕ್ಷಿಯಾಗಿ ಅದ್ಧೂರಿ ರಥೋತ್ಸವ ನಡೆಯಿತು.

ಸಾಂಪ್ರದಾಯಿಕ ಆಚರಣೆಗಾಗಿ ತಾಲೂಕು ಆಡಳಿತ ಕೇವಲ ಹತ್ತು ಅಡಿ ರಥ ಎಳೆಯಲು ಅವಕಾಶ ನೀಡಿತ್ತು. ಆದರೆ ಭಕ್ತರು ಮಾತು ಕೇಳಲಿಲ್ಲ. ತಹಶೀಲ್ದಾರ ಉಮಾಕಾಂತ ಹಳ್ಳೆ, ಸಿಪಿಐ ಪ್ರಕಾಶ ಯಾತನೂರ ಹಾಗೂ ಪಿಎಸ್‌ಐ ಮಹಾಂತೇಶ ಪಾಟೀಲ ಅವರು ರಥವನ್ನು ಏರಿ ಸ್ವಾಮೀಜಿಯ ಮನವೊಲಿಸುವ ಪ್ರಯತ್ನ ಮಾಡಿದರು. ರಥ ಎಳೆಯದಂತೆ ಮನವಿ ಮಾಡಿದರು.

ಅದಾಗ್ಯೂ ಪ್ರತಿವರ್ಷದಂತೆ ರಥ ನಿಗದಿತ ಸ್ಥಳಕ್ಕೆ ತಲುಪುವ ಮೂಲಕ ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಸಂಗ ನಡೆಯಿತು. ಸಾಗುತ್ತಿದ್ದ ತೇರನ್ನು ನೋಡುತ್ತ ಪೊಲೀಸರು ಮೂಕ ಪ್ರೇಕ್ಷರಂತೆ ನಿಂತರು. ಭಕ್ತರು ಬಾರೆ ಹಣ್ಣು ಎಸೆದು ಭಕ್ತಿಯ ಹರಕೆ ತೀರಿಸಿದರು.

ಲಾಠಿ ಪ್ರಹಾರ-ಕಾಲ್ತುಳಿತ: ರಥೋತ್ಸವ ವೇಳೆ ಮಠದ ಮುಖಂಡರು, ಪೂಜಾರಿಗಳೊಂದಿಗೆ ಪೊಲೀಸರು ವಾಗ್ವಾದ ನಡೆಸಿದ ಪ್ರಸಂಗ ನಡೆಯಿತು. ಅಧಿಕಾರಿಗಳ ಕಟ್ಟೆಚ್ಚರ ಧಿಕ್ಕರಿಸಿ ಭಕ್ತರು ರಥ ಎಳೆಯುತ್ತಿದ್ದಾಗ ಏಕಾಏಕಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಪರಿಣಾಮ ಯುವಕರು ಓಡಲು ಶುರುಮಾಡಿದ್ದರಿಂದ ಮಕ್ಕಳೊಂದಿಗೆ ಜಾತ್ರೆಗೆ ಬಂದಿದ್ದ ಅನೇಕ ಜನ ಮಹಿಳೆಯರು ಕಾಲ್ತುಳಿತಕ್ಕೊಳಗಾಗಿ ಗಾಯಗೊಂಡರು. ಎದೋಬಿದ್ದೋ ಓಡಿದ ಜನರು ಉಸಿರುಗಟ್ಟುವ ಪರಸ್ಥಿತಿ ಅನುಭವಿಸಿದರು.

ಇಷ್ಟು ಜನರು ಸೇರಲು ಬಿಟ್ಟು ಈಗ ಲಾಠಿ ಬೀಸುವುದು ಸರಿನಾ ಎಂದು ಭಕ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ನಿಯಮಗಳ ನಡುವೆಯೂ ತಾಲೂಕು ಆಡಳಿತದ ಆದೇಶಕ್ಕೆ ತಿಲಾಂಜಲಿಯಿಟ್ಟ ನಾಲವಾರ ಮಠದ ಜಾತ್ರಾ ಸಮಿತಿ, ಸಡಗರದ ಜಾತ್ರೆ ನಡೆಸಿಯೇ ತೀರುವ ಮೂಲಕ ಕಾನೂನುಗಳಿಗೆ ಸವಾಲು ಹಾಕಿದ್ದು ಸಾರ್ವಜನಿಕ ಚರ್ಚೆಗೆ ಕಾರಣವಾಯಿತು.

ಹತ್ತು ಮಂದಿ ಮುಖಂಡರ ವಿರುದ್ಧ ಪ್ರಕರಣ ದಾಖಲು: ರಥೋತ್ಸವ ರದ್ಧುಪಡಿಸಿ ಕೋವಿಡ್ ಮಾರ್ಗಸೂಚಿ ಪಾಲಿಸುವುದಾಗಿ ಶಾಂತಿ ಸಭೆಯಲ್ಲಿ ಭರವಸೆ ನೀಡಿದ್ದ ನಾಲವಾರ ಮಠದ ಜಾತ್ರಾ ಸಮಿತಿಯ ಹತ್ತು ಜನ ಮುಖಂಡರ ವಿರುದ್ಧ ವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಾರತಿ, ರಥೋತ್ಸವ ಹಾಗೂ ಜಾತ್ರೆಗೆ ಅವಕಾಶ ಇರುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದ್ದ ತಾಲೂಕು ಆಡಳಿತವೇ ನೆರೆದಿದ್ದ ಜನಸ್ತೋಮ ಕಂಡು ಬೆರಗಾಯಿತು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ತಹಶೀಲ್ದಾರರ ಆದೇಶದ ಮೇರೆಗೆ ಪೊಲೀಸರು ನಾಲವಾರ ಮಠದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

adike

Areca nut; ಬಳಲಿರುವ ಅಡಿಕೆಗೆ ಚೀನ ವೈರಸ್‌ ಸಿಡಿಲು!

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

adike

Areca nut; ಬಳಲಿರುವ ಅಡಿಕೆಗೆ ಚೀನ ವೈರಸ್‌ ಸಿಡಿಲು!

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.