![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 2, 2022, 2:36 PM IST
ಕಲಬುರಗಿ: ಶ್ರಾವಣದ ಮೊದಲ ಸೋಮವಾರ ನಗರದ ಪುರದೇವತೆ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ಭಕ್ತರ ದಂಡು ಎಲ್ಲಡೆಯಿಂದ ಹರಿದು ಬಂತು. ದಿನವೀಡಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು.
ಜನರು ಕಾಯಿ, ಹಣ್ಣು ಕರ್ಪೂರದ ಸಮೇತ ಪೂಜೆ ಮಾಡಿ ದೇವರ ಕೃಪೆಗೆ ಪಾತ್ರವಾದರು. ಜಿಲ್ಲೆಯ ವಿವಿಧ ಕಡೆಗಳಿಂದ ಭಕ್ತರು ಭಜನೆ ಮಾಡುತ್ತಾ ಪಾದಯಾತ್ರೆ ಮುಖೇನ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಭಜನೆ ಮಾಡಿ ಜನರನ್ನು ಭಕ್ತ ಸಾಗರದಲ್ಲಿ ಮುಳುಗಿಸಿದರು. ನಸುಕಿನಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.
ಕೆಲವು ಭಕ್ತರು ನೈವೇದ್ಯ ಸಮರ್ಪಸಿದರು. ಕಲಬುರಗಿ, ಯಾದಗಿರಿ, ಬೀದರ್ ಸೊಲ್ಲಾಪುರ, ಅಕ್ಕಲಕೋಟೆ, ಪುಣೆ, ಹೈದ್ರಾಬಾದ್, ತೆಲಂಗಾಣದ ಹಲವು ಜಿಲ್ಲೆಗಳಿಂದ ಭಕ್ತರು ಬಂದು ದರ್ಶನ ಪಡೆದರು. ಇದರಿಂದ ಸೋಮವಾರ ದಿನವೀಡಿ ದೇವಸ್ಥಾನದಲ್ಲಿ ಜನಜಂಗುಳಿ ಕಂಡು ಬಂತು.
ವ್ಯಾಪಾರ ವಹಿವಾಟು ಜೋರು: ಸೋಮವಾರ ದಿನವಿಡೀ ನೂರಾರು ಭಕ್ತರು ದೇವಸ್ಥಾನಕ್ಕೆ ಬಂದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿರುವ ವ್ಯಾಪಾರಿಗಳು ಭರ್ಜರಿ ವ್ಯಾಪಾರ ಮಾಡಿದರು. ಅಲ್ಲದೆ, ಸುತ್ತಲಿನಲ್ಲಿರುವ ಅಂಗಡಿಗಳಲ್ಲಿ ಕಾಯಿ, ಹೂವು, ಹಣ್ಣು ಮತ್ತು ಕರ್ಪೂರದ ವ್ಯಾಪಾರ ಬಲು ಜೋರಾಗಿ ನಡೆಯಿತು. ಈ ವೇಳೆಯಲ್ಲಿ ಪೊಲೀಸರು ಬಂದೋಬಸ್ತ್ ಚೆನ್ನಾಗಿ ಮಾಡಲಾಗಿತ್ತು. ಹಲವಾರು ಕಡೆಗಳಲ್ಲಿ ಮಹಿಳಾ ಪೊಲೀಸರ ನಿಯೋಜಿಸಲಾಗಿತ್ತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.