ಸರ್ವಜ್ಞ ಹೆಸರಲ್ಲಿ ವಿವಿ ಆರಂಭಿಸಿ
Team Udayavani, Feb 21, 2017, 2:39 PM IST
ಕಲಬುರಗಿ: ಏಕವ್ಯಕ್ತಿಯಾಗಿ ವಿವಿಗಳ ಕಲ್ಪನೆಯನ್ನು ಸಾಕಾರ ಮಾಡಿ ವಿಶ್ವ ಸಾಹಿತ್ಯದಲ್ಲಿ ಸರ್ವಜ್ಞನಿಗೆ ಸಲ್ಲುತ್ತದೆ. ಆದ್ದರಿಂದ ರಾಜ್ಯದಲ್ಲಿ ಸರ್ವಜ್ಞನ ಹೆಸರಿನಲ್ಲಿ ವಿವಿ ಆರಂಭಿಸಬೇಕು ಎಂದು ಶಹಾಪುರದ ವೈದ್ಯಬಸವರಾಜ ಇಜೇರಿ ಹೇಳಿದರು.
ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಮತ್ತು ಸರ್ವಜ್ಞ ಜಯಂತ್ಯುತ್ಸವ ಸಮಿತಿ ವತಿಯಿಂದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ತ್ರಿಪದಿ ಕವಿ ಸರ್ವಜ್ಞ ಜಯಂತಿಯಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಸರ್ವಜ್ಞ ನಡೆದಾಡುವ ವಿಶ್ವ ವಿದ್ಯಾಲಯದ ಎಂದೇ ಖ್ಯಾತಿ ಪಡೆದವರು. ಇಂದಿನ ಜಾಗತೀಕರಣದ ದಿನಗಳಲ್ಲಿ ಸರ್ವಜ್ಞ ಅವರ ವಚನಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಒಂದು ಉತ್ತಮವಾದ ಹಾಗೂ ಭದ್ರ ಬದುಕಿನ ಆಸೆಯನ್ನು ಜೀವಂತವಾಗಿರುವ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಸರ್ವಜ್ಞರ ವಚನಗಳ ಅಧ್ಯಯನದಿಂದ ಜ್ಞಾನದ ಬೆಳವಣಿಗೆಯಾಗುತ್ತದೆ. ಜೀವನದ ಮೌಲ್ಯಗಳ ಅರ್ಥವಾಗುತ್ತದೆ. ಇದರಿಂದ ಉತ್ತಮ ಪರಿಸರ ಹಾಗೂ ಸಮಾಜ ನಿರ್ಮಾಣ ಮಾಡಿಕೊಂಡು ಸಂಘಜೀವಿಯಾಗಿ ಬದುಕುವುದು ಸಾಧ್ಯ ಎಂದು ಹೇಳಿದರು.
ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಅಧ್ಯಕ್ಷತೆ ವಹಿಸಿದ್ದರು. ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ಶಿವಶರಣಪ್ಪ ಕುಂಬಾರ, ರೇಣುಕಾ ನಂದಕುಮಾರ ಕುಂಬಾರ, ನಂದಕುಮಾರ, ಕುಂಬಾರ ನೌಕರರ ಸಂಘದ ಅಧ್ಯಕ್ಷ ಭೀಮಾಶಂಕರ ಕುಂಬಾರ, ಹೈ.ಕ. ವಿಭಾಗದ ಉಪಾಧ್ಯಕ್ಷನಾರಾಯಣ ಯಾನಾಗುಂದಿ, ಕುಂಬಾರ ಸಮಾಜದ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಸಂಗಣ್ಣ ಮತ್ತು ಸಂಗಡಿಗರು ಸಂಗೀತ ಸೇವೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಖ„ತಿ ಇಲಾಖೆ ಸಹಾಯಕ ನಿರ್ದೇಶಕಿ ಜಗದೀಶ್ವರಿ ಶಿವಕೇರಿ ಸ್ವಾಗತಿಸಿದರು. ಸಮಾರಂಭಕ್ಕೂ ಮೊದಲು ನಗರೇಶ್ವರ ದೇವಸ್ಥಾನದಿಂದ ರಂಗಮಂದಿರದ ವರೆಗೆ ತ್ರಿಪದಿ ಕವಿ ಸರ್ವಜ್ಞರ ಭಾವಚಿತ್ರದ ಆಕರ್ಷಕ ಮೆರವಣಿಗೆ ನಡೆಯಿತು. ಚಿಕ್ಕಮಗಳೂರಿನ ತಿಪ್ಪೇಸ್ವಾಮಿ ಅವರ ಗೊಂಬೆ ಕುಣಿತ ಸೇರಿದಂತೆ ಅನೇಕ ಜನಪದ ಕಲಾಪ್ರಕಾರಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.