ನಾಲವಾರ ಮಠದಲ್ಲಿ ಭಕ್ತಿಯ ತನಾರತಿ ಉತ್ಸವ


Team Udayavani, Apr 30, 2017, 3:40 PM IST

gul3.jpg

ವಾಡಿ: ಸುಕ್ಷೇತ್ರ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ತನಾರತಿ ಉತ್ಸವ ಸಂಭ್ರಮದಿಂದ ನೆರವೇರಿತು. ಶ್ರೀ ಮಠದ ಆವರಣದಲ್ಲಿ ಸೇರಿದ್ದ ಸಾವಿರಾರು ಜನ ಭಕ್ತರು ಭಕ್ತಿಯ ತನಾರತಿ ಹೊತ್ತು ಪುನೀತರಾದರು. 

ಮಠದ ಪೀಠಾಧಿಪತಿ ಡಾ| ಸಿದ್ದ ತೋಟೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀ ಕೋರಿಸಿದ್ದೇಶ್ವರರ ಕತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಶ್ರೀಗಳು ಮಠದ ಸಾಂಪ್ರದಾಯಿಕ ಉಡುಗೆಯೊಂದಿಗೆ ತನಾರತಿ ಮಹೋತ್ಸವದಲ್ಲಿ ಪಾಲ್ಗೊಂಡು ಭಕ್ತರೊಟ್ಟಿಗೆ ಹೆಜ್ಜೆ ಹಾಕಿದರು.

ನಾದಸ್ವರ, ಪುರವಂತರ ಕುಣಿತ ಹಾಗೂ ಜಯಘೋಷಗಳೊಂದಿಗೆ ಶ್ರೀಗಳು ಗದ್ದುಗೆಗೆ ಪ್ರದಕ್ಷಿಣೆ ಹಾಕಿದರು. ಈ ವೇಳೆ ಭಕ್ತರನ್ನುದ್ದೇಶಿಸಿ ಮಾತನಾಡಿದ ತೋಟೇಂದ್ರ ಸ್ವಾಮೀಜಿ, ಸಮಾಜದ ಸ್ವಾಸ್ಥ ಕಾಪಾಡಲು ಜನರು ಆರೋಗ್ಯವಂತರಾಗಿರುವುದು ಮುಖ್ಯ.

ಕಲ್ಮಶ ವಾತಾವರಣದಿಂದ ರೋಗಪೀಡಿತ ಸಮಾಜ ಹುಟ್ಟುತ್ತದೆ. ಮನಸ್ಸಿನ ಭಾವನೆಗಳು ಕಲ್ಮಶಗೊಂಡರೆ ದೇಹ ರೋಗದಿಂದ ತತ್ತರಿಸುತ್ತದೆ.  ಮನಸ್ಸಿನ ಆರೋಗ್ಯಕ್ಕೆ ಧರ್ಮದ ಚಿಕಿತ್ಸೆ ಜತೆಗೆ ಭಕ್ತಿಯ ಪಾಠದ ಅಗತ್ಯವಿದೆ ಎಂದು ನುಡಿದರು. 

ತನಾರತಿ ಉತ್ಸವ ಆರಂಭಕ್ಕೂ ಮುಂಚೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು. ರಾಯಚೂರು ಕೃಷಿ ವಿವಿ ನಿಧೇìಶಕ ವೀರಣ್ಣಗೌಡ ಪರಸರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. 

ಭೀಮರೆಡ್ಡಿಗೌಡ ಕುರಾಳ, ಡಾ.ಪ್ರಕಾಶ ಹಿರೇಮಠ ಗಂವಾರ, ಶಾಂತಪ್ಪ ಸಾಹು, ಕಲಬುರಗಿ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ವೈದ್ಯರಾದ ಡಾ| ಅಂಬಿಕಾ ನಾಲವಾರ, ಡಾ| ಗಿರೀಜಾ, ಡಾ| ಪ್ರೇರಣಾ, ಡಾ| ಕಾಂಚನಾ ಹಿರೇಮಠ, ಡಾ| ಭಾರತಿ, ಡಾ| ಪೂಜಾ, ಡಾ| ಸಂಕೀರ್ತನಾ, ಡಾ| ಭಾರ್ಗವಿ, ಡಾ| ಜಿವ್ಹೇಶ, ಡಾ| ಅಭಿಷೇಕ, ಡಾ| ಮೀರಜ, ಡಾ| ಆದ್ಯ ಪಾಲ್ಗೊಂಡಿದ್ದರು. ಶ್ರೀಮಠದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮಠದ ಕಾರ್ಯದರ್ಶಿ ವಿರೂಪಾಕ್ಷಯ್ಯ ಸ್ವಾಮಿ ನಿರೂಪಿಸಿದರು. 

ಟಾಪ್ ನ್ಯೂಸ್

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

Terror 2

Pakistan; ಬಲೂಚ್‌ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು

1-asaa

CPM ಪಾಲಿಟ್‌ಬ್ಯೂರೋಗೆ ಕಾರಟ್‌ ಮಧ್ಯಾಂತರ ಮುಖ್ಯಸ್ಥ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.