ಅನ್ನದಾತನ ಕಷ್ಟಕ್ಕೆ ಕಾವ್ಯ ಕಂಬನಿ


Team Udayavani, Jun 26, 2017, 4:07 PM IST

gul4.jpg

ವಾಡಿ: ಸಾಲದ ಸುಳಿಗೆ ಸಿಕ್ಕು ಸಾವು ಬರೆದುಕೊಂಡ ಅನ್ನದಾತನ ಕಷ್ಟದ ಬದುಕಿಗೆ ಕಾವ್ಯಗಳು ಕಂಬನಿ ಮಿಡಿದವು. ಮುನಿಸಿಕೊಂಡ ಮಳೆರಾಯನ ಕಟುಕ ಮನಸ್ಸನ್ನು ಖಂಡಿಸಿದವು ಅಕ್ಷರಗಳ ಸಾಲು. ಮೋಡ ಕವಿದ ಮುಗಿಲು ಕಂಡು ನಗುವ ರೈತನ ಭಾವ ಬಣ್ಣಿಸಿದವು ಕವಿಗಳ ಕವನಗಳು. 

ಹೀಗೆ ಅನ್ನದಾತನ ಬದುಕಿನ ಕಷ್ಟಕಾರ್ಪಣ್ಯಗಳ ಮೇಲೆ ಬೆಳಕು ಚೆಲ್ಲುವ ಕಾರ್ಯ ರಾವೂರ ಶ್ರೀ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆ ಆವರಣದ ಹಸಿರು ಪರಿಸರದ ಮಧ್ಯೆ ವಲಯ ಕಸಾಪ ವತಿಯಿಂದ ಏರ್ಪಡಿಸಲಾಗಿದ್ದ ಮುಂಗಾರು ಕವಿಗೋಷ್ಠಿಯಲ್ಲಿ ನಡೆಯಿತು. ಸಾಲದಲ್ಲಿ ಬದುಕು, ಸಮಸ್ಯೆಗೆ ಆತ್ಮಹತ್ಯೆಯೇ ಅಲ್ಲ ಅಂತ್ಯದ ಥಳಕು. 

ಮೌಡ್ಯದ ಮಾರಿಗೆ ಹರಕೆಯಾದ ಜೀವನ, ರೈತಣ್ಣನ ಶವದ ಮೇಲೂ ರಾಜಕೀಯದ ಗಾನ. ಹೀಗೆ ಭಾವ ತುಂಬಿದ ಹರಿತವಾದ ಅಕ್ಷರ ಸಾಲುಗಳ ಮೂಲಕ ಕೃಷಿಕನ ಬದುಕು ಬವಣೆ ಬಿಚ್ಚುಡುವ ಪ್ರಯತ್ನ ಮಾಡುವ ಮೂಲಕ ಯುವ ಕವಿಗಳು ಗಮನ ಸೆಳೆದರು. 

ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಎಚ್‌.ಬಿ. ತೀರ್ಥೆ ಮಾತನಾಡಿ, ರೈತ ದೇಶದ ಬೆನ್ನೆಲುಬು ಎಂದು ಬಣ್ಣಿಸುವ ಸರಕಾರದ ಪ್ರತಿನಿಧಿಗಳು, ರೈತಪರ ಯೋಜನೆ ಜಾರಿಗೆ ತರುವಲ್ಲಿ ಹಿಂದೇಟು ಹಾಕುತ್ತಾರೆ. ಅವರ ಕಷ್ಟಗಳ ನಿವಾರಣೆಗೆ ಮುಂದಾಗದೆ, ಬೆನ್ನ ಮೂಳೆ ಮೇಲೆ ನಡೆದಾಡಿ ನೆಲಕ್ಕೆ ಕುಸಿಯುವಂತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ದೇಶಕ್ಕೆ ಅನ್ನ ನೀಡುವ ಅನ್ನದಾತನ ಕುಟುಂಬ ಸದಸ್ಯರು ಹೊಟ್ಟೆಗೆ ಅನ್ನವಿಲ್ಲದೆ ಮರುಗುತ್ತಾರೆ. ನಮ್ಮದು ಸಾಲ ಮುಕ್ತ, ಶೋಷಣೆ ಮುಕ್ತ ರೈತರಿರುವ ನಾಡಾಗಬೇಕು. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುವಂತಾಗಬೇಕು. ಕೃಷಿ ಇಲಾಖೆ ವತಿಯಿಂದ ವೈಜ್ಞಾನಿಕ ಬೇಸಾಯದ ಪದ್ಧತಿ ಹೇಳಿಕೊಡಬೇಕು ಎಂದು ಒತ್ತಾಯಿಸಿದ ಸಾಹಿತಿ ತೀರ್ಥೆ, ಮುಂಗಾರು ಬಾರದಿದ್ದರೆ ಬೆವರಿನ ಹನಿಗಳು ಸೂರ್ಯನ ಕೆಂಡಕ್ಕಿಂತಲೂ ಬಿಸಿಬಿಸಿ ಎಂಬ ತಮ್ಮ ಸ್ವರಚಿತ ಕವನದ ಸಾಲುಗಳನ್ನು ಹೇಳಿ ಗಮನ ಸೆಳೆದರು. 

ಕಸಾಪ ತಾಲೂಕು ಅಧ್ಯಕ್ಷ ಕಾಶೀನಾಥ ಗುತ್ತೇದಾರ ಸಸಿಗೆ ನೀರುಣಿಸುವ ಮೂಲಕ ಕವಿಗೋಷ್ಠಿ ಉದ್ಘಾಟಿಸಿದರು. ಶರಣು ಜ್ಯೋತಿ, ಚನ್ನಬಸಪ್ಪ ಬಂಡೇರ, ಮಹೇಶ ಬಾಳಿ ಅತಿಥಿಗಳಾಗಿದ್ದರು. ಕವಿಗಳಾದ ಡಾ| ಮಲ್ಲಿನಾಥ ಎಸ್‌. ತಳವಾರ, ಮಂಜುನಾಥ ಜೆಡಿ, ರಾಜಶೇಖರ ಕಡಗನ, ಸಿದ್ದಲಿಂಗ ಬಾಳಿ, ವಿಕ್ರಮ ನಿಂಬರ್ಗಾ,

-ಸಂಗಣ್ಣ ಸಂಗಾವಿ, ರೇವಣಸಿದ್ದಯ್ಯ ವಲಂಡಿ, ರಾಜಶೇಖರ ಅಂಗಡಿ, ಈರಣ್ಣ ಕಲ್ಯಾಣಿ, ಮಲ್ಲಿಕಾರ್ಜುನ ಮದನಕರ ಸ್ವರಚಿತ ಕವನ ವಾಚಿಸಿದರು. ಇದಕ್ಕೂ ಮೊದಲು ಯುವ ಕವಿಗಳೆಲ್ಲರೂ ಬೇವಿನ ಸಸಿ ನೆಟ್ಟು ಪರಿಸರ ಕಾಳಜಿ ಮೆರೆದರು. ಚಂದ್ರಶೇಖರ ಕಲ್ಯಾಣಿ ನಿರೂಪಿಸಿ, ವಂದಿಸಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

TEACHER

Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!

15-Chincholi

Chincholi: ಬಟ್ಟೆ ಒಗೆಯುವ ವೇಳೆ ‌ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ

Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.