![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 6, 2022, 3:49 PM IST
ಕಲಬುರಗಿ: ನಗರದ ಸಂತೋಷ್ ಕಾಲೊನಿಯಲ್ಲಿ ವಿಜಯದಶಮಿ ಹಬ್ಬದಂದು ಸಂಜೆ ಬನ್ನಿ ಬದಲಾಯಿಸಿಕೊಳ್ಳುವ ಸಂದರ್ಭದಲ್ಲಿಯೇ ಅಣ್ಣ ತಮ್ಮಂದಿರು, ಸಹೋದರಿಯ ಗಂಡನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸಂತೋಷ್ ಕಾಲೊನಿಯ ಲಕ್ಷ್ಮೀ ಕಾಂತ್ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ದಸರಾ ಹಬ್ಬದ ಅಂಗವಾಗಿ ಬನ್ನಿ ಬಂಗಾರ ಕೊಡಲು ಮನೆಗೆ ಬಂದ ಹೆಂಡತಿಯ ಸಹೋದರರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಶಿವಕಾಂತ್, ಪ್ರಶಾಂತ್ ಎಂಬುವವರು ಈ ಕೊಲೆ ಮಾಡಿದ್ದು, ಕೊಲೆಯಾದ ಲಕ್ಷ್ಮಿಪುತ್ರನ ಹೆಂಡತಿ ಪ್ರೀತಿಯವರ ಸಹೋದರರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಲಕ್ಷ್ಮಿಪುತ್ರ ಮತ್ತು ಪ್ರೀತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಲಕ್ಷ್ಮಿಪುತ್ರ ಈಗಾಗಲೇ ಮದುವೆಯಾಗಿದ್ದ, ಇದು ಆತನ ಎರಡನೇ ಮದುವೆಯಾಗಿತ್ತು. ಮದುವೆಯ ಬಳಿಕ ಲಕ್ಷ್ಮಿಕಾಂತದ ತನ್ನ ಪತ್ನಿ ಪ್ರೀತಿಯ ಸಹೋದರರಿಗೆ ಎಂಟು ಲಕ್ಷ ಹಣ ನೀಡಿದ್ದ. ಹಣ ವಾಪಸ್ ಕೊಡುವಂತೆ ಲಕ್ಷ್ಮಿಕಾಂತ್ ಆಗ್ಗಾಗ ಕೇಳುತ್ತಿದ್ದ. ಈ ಕುರಿತು ಅ.2ರಂದು ಹಣ ಕೊಡುವ ಬಗ್ಗೆ ಮಾತುಕತೆಯಾಗಿತ್ತು.
ಇದನ್ನೂ ಓದಿ:ವನಿತಾ ಏಷ್ಯಾಕಪ್: ಥಾಯ್ಲೆಂಡ್ ವಿರುದ್ಧ ಸೋತು ಮುಖಭಂಗ ಅನುಭವಿಸಿದ ಪಾಕಿಸ್ಥಾನ
ಆದರೆ ಹಣ ಕೊಡಲಾಗದೆ ಇದ್ದಾಗ, ಸಹೋದರಿಯ ಗಂಡನನ್ನೆ ಕೊಲೆ ಮಾಡುವ ಸ್ಕೆಚ್ ಹಾಕಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯನ್ನಾಧರಿಸಿ ಪೊಲೀಸರು ಶಂಕಿಸಿದ್ದಾರೆ.
ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.