ಕಾಂಗ್ರೆಸ್‌ ಸರಕಾರದಿಂದ ಅಭಿವೃದ್ಧಿ


Team Udayavani, Feb 17, 2017, 2:59 PM IST

gul2.jpg

ಶಹಾಬಾದ: ನಮ್ಮ ಸರ್ಕಾರ ಬಂದ ಮೇಲೆ ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದಕ್ಕೆಲ್ಲ 371ನೇ(ಜೆ) ಕಲಂ ಜಾರಿಗೆ ಬಂದಿರುವ ಕಾರಣದಿಂದ ಎಂದು ಗೃಹ ಖಾತೆ ಸಚಿವ ಡಾ| ಜಿ. ಪರಮೇಶ್ವರ ಹೇಳಿದರು. ನಗರದಲ್ಲಿ ಗುರುವಾರ ನಗರದ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ಉಪಾಧಿಧೀಕ್ಷಕರ ಕಚೇರಿ ಕಟ್ಟಡ ನಿರ್ಮಾಣದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಒಂದು ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು 371ನೇ(ಜೆ) ಕಲಂ ಜಾರಿಗೆ ತರಲು ಪ್ರಯತ್ನಿಸದಿದ್ದರೆ ಈ ಭಾಗ ಅಭಿವೃದ್ಧಿಯಾಗುತ್ತಿರಲಿಲ್ಲ. ಈ ಭಾಗದಲ್ಲಿ ಖರ್ಗೆ ಅವರು ಮಾಡಿರುವ ಜನಪರ ಕೆಲಸಗಳನ್ನು ಮುಂದಿನ ಪೀಳಿಗೆ ಸ್ಮರಿಸುತ್ತದೆ ಎಂದು ಹೇಳಿದರು. ಈಗಾಗಲೇ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ನಗರ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ಉಪಾಧೀಕ್ಷಕರ ಕಚೇರಿ ಕಟ್ಟಡದ ನಿರ್ಮಾಣ ಮಾಡಲಾಗುತ್ತಿದೆ.

ಅದರ ಜತೆಗೆ ನಗರದ ಪೊಲೀಸರಿಗೆ 24 ವಸತಿ ಗೃಹ ನಿರ್ಮಾಣ ಮಾಡಲು ಸುಮಾರು 5 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದು ಹೇಳಿದರು. ರಾಜ್ಯದ 174 ತಾಲೂಕುಗಳಲ್ಲಿ ಮಾತ್ರ ಅಗ್ನಿಶಾಮಕ ಠಾಣೆ ಸ್ಥಾಪಿಸಲಾಗಿದೆ. ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದಂತೆ ನಗರದಲ್ಲಿ ಒಂದು ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡಲು ಸದನದಲ್ಲಿ ಮಂಜೂರಾತಿ ಪಡೆದು ಕ್ರಮ ಕೈಗೊಳ್ಳುತ್ತೇನೆ.

ಎಚ್‌ ಕೆಆರ್‌ಡಿಬಿಗೆ 1500 ಕೋಟಿ ರೂ. ಅನುದಾನ ನೀಡುವಂತೆ ಸಚಿವ ಸಂಪುಟದಲ್ಲಿ ಮನವೊಲಿಸುತ್ತೇನೆ. ನಗರದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ನಿರ್ಮಾಣಕ್ಕೆ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು. ಪೊಲೀಸರಿಗೆ ಸರಿಯಾದ ಮನೆಗಳಿಲ್ಲ. ಇನ್ನೂ ಹಳೆ ಕಾಲದ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರ ಪೊಲೀಸರಿಗೆ 11000 ಸಾವಿರ ಮನೆ ಕಟ್ಟಿಕೊಡಲು ಮುಂದಾಗಿದೆ. 

ಈಗಾಗಲೇ 4000 ಮನೆ ನಿರ್ಮಾಣವಾಗುತ್ತಿವೆ. 11000 ಸಾವಿರ ಮನೆ ಕಟ್ಟಲು ಸುಮಾರು1818 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಪೊಲೀಸ್‌ ಠಾಣೆಗಳಿಗೆ ನೀಡಲು ಸುಮಾರು 1000 ವಾಹನ ಖರೀದಿ ಮಾಡಲಾಗಿದೆ. ರಾಜ್ಯದ ಸಾವಿರಕ್ಕೂ ಹೆಚ್ಚು ಪೊಲೀಸ್‌ ಠಾಣೆಗಳಲ್ಲಿ ಕಂಪ್ಯೂಟರ್‌, ಟೆಲಿಫೋನ್‌, ವೈರಲೆಸ್‌Õ, ವಾಹನ ಒದಗಿಸಿಕೊಟ್ಟ ಏಕೈಕ ರಾಜ್ಯ ನಮ್ಮದಾಗಿದೆ ಎಂದು ಹೇಳಿದರು. 

ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಈಗಾಗಲೇ 11.30 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಾಗಿದೆ. ಅಲ್ಲದೇ ಅಲ್ಪಸಂಖ್ಯಾತರ 2 ಹಾಸ್ಟೆಲ್‌, ಸಿಸಿ ರಸ್ತೆ,ಚರಂಡಿ ಕಾಮಗಾರಿಗೆ ಸುಮಾರು 3 ಕೋಟಿ ರೂ. ಸೇರಿದಂತೆ ಎಚ್‌ಕೆಆರ್‌ಡಿಬಿ ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಲ್ಲಿ ಒಟ್ಟಾರೆ 14 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭ  ಮಾಡುತ್ತಿದ್ದೇವೆ ಎಂದು ಹೇಳಿದರು. 

ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಜನರ ಕಣ್ಣಿಗೆ ಕಾಣುತ್ತಿವೆ. ಭರವಸೆ ನೀಡುವ ಕಾಲ ಹೋಗಿದೆ. ಈಗ ಏನ್ನಿದ್ದರೂ ಕೆಲಸ ಮಾಡಿ ತೋರಿಸುವ ಕಾಲ. ಆದರೆ ಪ್ರಧಾನಮಂತ್ರಿ ಮೋದಿ ಮನ ಕಿ ಭಾತ್‌ ಹೇಳುವ ಬದಲು ಕಾಮಕಿ ಭಾತ್‌ ಹೇಳುವ ಕೆಲಸ ಮಾಬೇಕು. ಪ್ರಧಾನ ಮಂತ್ರಿ ಅವರ ನೋಟು ಅಪನಗಧಿ ಕರಣದಿಂದಾಗಿ ನಮ್ಮ ದೇಶದ ಆರ್ಥಿಕತೆ ಬುಡಮೇಲಾಗಿದೆ. ನೋಟು ಬಂದಿಯಿಂದ ದೇಶದ ಬಡಜನರಿಗೆ ಎಲ್ಲಿಲ್ಲದ ತಾಪತ್ರಯವಾಗಿದೆ.

ಬೆವರು ಸುರಿಸಿ ದುಡಿದ ಹಣವನ್ನು ಬ್ಯಾಂಕಿನಿಂದ ಸಲೀಸಾಗಿ ತೆಗೆದುಕೊಳ್ಳುವ ಸ್ವಾತಂತ್ರ ಅವರಿಗಿಲ್ಲ. ದೇಶದಲ್ಲಿ ಎಟಿಎಂನಿಂದ ಹಣ ತೆಗೆಯಲು ಹೋಗಿ 175 ಜನರು ಸತ್ತಿದ್ದಾರೆ. ದೇಶದಲ್ಲಿ ಶೇ. 65ರಷ್ಟು ಜನ ರೈತರಿದ್ದಾರೆ. ಅವರು ದುಡ್ಡಿನಿಂದಲೇ ವ್ಯವಹಾರ ಮಾಡುತ್ತಾರೆ. ಅವರ ಮೇಲೂ ಪರಿಣಾಮ ಬೀರಿದೆ. ಮೋದಿ ಸರ್ಕಾರ ಬಡವರ ಪರವಾಗಿಲ್ಲ. ಶ್ರೀಮಂತರ ಪರವಾಗಿದೆ. ಆ

ದ್ದರಿಂದ ಮತದಾರರು ಇನ್ನು ಮುಂದೆ ಜಾಗೂರಕತೆಯಿಂದ ಹೆಜ್ಜೆ ಇಡಬೇಕು ಎಂದು ಹೇಳಿದರು. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ.ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್‌ ಸದಸ್ಯರಾದ ಇಕ್ಬಾಲ ಅಹ್ಮದ್‌ ಸರಡಗಿ, ಶರಣಪ್ಪ  ಮಟ್ಟೂರ, ನಗರಸಭೆ ಸದಸ್ಯರಾದ ಗೀತಾ ಸಾಹೇಬಗೌಡ ಬೋಗುಂಡಿ, ನಗರಸಭೆ ಸದಸ್ಯ ಗಿರೀಶ ಕಂಬಾನೂರ,

ಪೊಲೀಸ್‌ ಮಹಾನಿರ್ದೇಶಕ ಟಿ. ಸುನೀಲಕುಮಾರ, ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಈಶಾನ್ಯ ವಲಯ ಪೊಲೀಸ್‌ ಮಹಾನಿರೀಕ್ಷಕ ಅಲೋಕಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಧಿಕಾರಿ ಶಶಿಕುಮಾರ ಎನ್‌., ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಶೀದ್‌ ಮರ್ಚಂಟ್‌, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ವಿಜಯಕುಮಾರ ರಾಮಕೃಷ್ಣ, ಕುಮಾರ ಚವ್ಹಾಣ, ಹಾಷಮಖಾನ, ಅಜೀತಕುಮಾರ ಪಾಟೀಲ, ಡಿವೈಎಸ್‌ಪಿ ಮಹೇಶ ಮೇಗಣ್ಣನವರ್‌, ಸಿಪಿಐ ಅಸ್ಲಾಂ ಭಾಷಾ, ಡಾ| ಅಹ್ಮದ್‌ ಪಟೇಲ್‌, ನಿಂಗಣ್ಣ ಸಂಗಾವಿಕರ್‌, ಬಾಬಾ ಇದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

siddaramaiahಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Siddaramaiah

Kalaburagi: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ-ಕೈಗಾರಿಕಾ ನೀತಿ ಜಾರಿಗೆ ಬದ್ದ: ಸಿಎಂ

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.