ತಂಪು ತಂದ ಭರಣಿ ಮಳೆ


Team Udayavani, Apr 29, 2017, 2:29 PM IST

gul2.jpg

ಕಲಬುರಗಿ/ಶಹಾಬಾದ: ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಭರಣಿ ಮಳೆ ಬಿಸಿಲ ಧಗೆಯಿಂದ ಬೇಸತ್ತ ಜನರಿಗೆ ತಂಪಿನ ಸಿಂಚನ ನೀಡಿದೆ. ಸಂಜೆ ಐದು ಗಂಟೆಗೆ ಗುಡುಗು ಸಹಿತ ಪ್ರಾರಂಭವಾದ ಮಳೆ ಸುಮಾರು ಎರಡು ಗಂಟೆವರೆಗೆ ಸುರಿಯಿತು. ಬೇಸಿಗೆ ಬಿರು ಬಿಸಿಲಿನಿಂದ ಕಾಯ್ದ ಭೂಮಿಯನ್ನು ಮಳೆ ತಂಪಾಗಿಸಿತು.

ರಸ್ತೆಯಲ್ಲಿದ್ದ ತಗ್ಗು ಗುಂಡಿಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಕಳೆದ ಹಲವು ದಿನಗಳಿಂದ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಬಿಸಿಲೂರಿನ ಜನರು ಶುಕ್ರವಾರ ಸಂಜೆ ಸುರಿದ ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. 42ರಿಂದ 44 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲೆಯಿಂದ ಜನ ತತ್ತರಿಸಿ ಹೋಗಿದ್ದರು.

ಗುರುವಾರ ಸ್ವಲ್ಪ ಬಿಸಿಲಿನ  ಪ್ರಖರತೆ ತಗ್ಗಿತ್ತು. ಶುಕ್ರವಾರ ಸಂಜೆ 4:00 ರ ಸುಮಾರಿಗೆ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಮಳೆ ಸುರಿದಿದೆ. 

ಸಿಡಿಲಿಗೆ ಯುವಕ ಸಾವು: ಶುಕ್ರವಾರ ಸುರಿದ ಮಳೆ ಸಂದರ್ಭದಲ್ಲಿ ಸಿಡಿಲಿಗೆ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಅಫಜಲಪುರ ಪಟ್ಟಣದಲ್ಲಿ ಹೊರ ವಲಯ ಹೊಲದಲ್ಲಿದ್ದ ಆನಂದ ಅಂಬಣ್ಣ ಚಿಂಚೋಳಿ (20) ಎನ್ನುವ ಯುವಕ ಸಾವನ್ನಪ್ಪಿದ್ದು, ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. 

ಶಹಾಬಾದ ನಗರದ ಶಾಸ್ತ್ರಿ ಚೌಕ್‌, ಎಸ್‌ಬಿಎಚ್‌ ಪಕ್ಕದ ರಸ್ತೆಗೆ ಚರಂಡಿ ನೀರು ನುಗ್ಗಿದ್ದರಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುವಂತಾಯಿತು. ಚರಂಡಿಯಿಂದ ಹರಿದು ಬಂದ ತ್ಯಾಜ್ಯಗಳು ರಸ್ತೆ ತುಂಬೆಲ್ಲ ಹರಿಡಿದ್ದವು. ಪಾದಾಚಾರಿಗಳು ಗಬ್ಬು ವಾಸನೆಯಿಂದ ಸಹಿಸದೇ ಮೂಗು ಮುಚ್ಚಿಕೊಂಡೆ ಸಂಚರಿಸಿದರು. ನಗರದ ವಾಡಿ ವೃತ್ತದಲ್ಲಿ ಹಾಗೂ ಜಿಇ ಕಾಲೋನಿಯಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿವೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಅಗೆದ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರು ಗೊತ್ತಾಗದೇ ತೆಗ್ಗುಗಳಲ್ಲಿ ಬಿದ್ದ ಘಟನೆಗಳು ಕಂಡವು. ಒಟ್ಟಾರೆ ಬೇಸಿಗೆ ಬೀರು ಬಿಸಿಲಿಗೆ ನಲುಗಿದ ವಾತಾವರಣವನ್ನು ಮಳೆ ತಂಪಾಗಿಸಿದಕ್ಕೆ ಜನರು ಸಂತಸ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Karkala: ಎಲ್ಲಿ ಹೋಯಿತು ಬಂಗ್ಲೆಗುಡ್ಡೆ ವೃತ್ತದ ಸಿಸಿ ಕೆಮರಾ?

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

5

Karkala: ಬಸ್‌ ನಿಲ್ದಾಣದಲ್ಲಿ ಲಘು ವಾಹನ!ಬಸ್‌ ನಿಲ್ದಾಣದ ಬಗ್ಗೆ ಪುರಸಭೆ ದಿವ್ಯ ನಿರ್ಲಕ್ಷ್ಯ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.