ಮಳೆಯಲ್ಲೇ ಪ್ರತಿಭಟಿಸಿದ ಅಡುಗೆ ಸಿಬ್ಬಂದಿ
Team Udayavani, Jul 15, 2022, 2:59 PM IST
ಚಿಂಚೋಳಿ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರ ಹೊರ ಸಂಪನ್ಮೂಲ ಸಂಸ್ಥೆಯ ಸಿಬ್ಬಂದಿಗಳ ಸಂಬಳ ಪಾವತಿಸುವಂತೆ ತಾಪಂ ಕಚೇರಿ ಎದುರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಮುಖಂಡ ಸಂಜೀವನ್ ಯಾಕಾಪುರ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಹೊರ ಸಂಪನ್ಮೂಲ ಸಿಬ್ಬಂದಿಯಾಗಿ ಅಡುಗೆ ಸಹಾಯಕರು, ಅಡುಗೆಯವರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಿಂಗಳ 5ನೇ ತಾರಿಖೀನ ಒಳಗಾಗಿ ವೇತನ ಸರಿಯಾಗಿ ಕೊಡುತ್ತೇವೆ ಎಂದು ಸಂಸ್ಥೆಯವರು ಸಮಾಜ ಕಲ್ಯಾಣ ಇಲಾಖೆಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದರೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಂದು ವೇಳೆ ಅಡುಗೆಯವರು ಹಾಸ್ಟೆಲ್ಗಳಿಗೆ ಹಾಜರಾಗಿ ಅಡುಗೆ ಮಾಡದೇ ಇದ್ದರೆ ಮಕ್ಕಳು ಉಪವಾಸ ಇರುತ್ತಾರೆ ಎನ್ನುವ ಉದ್ದೇಶದಿಂದ ಅವರು ಮಳೆ, ಚಳಿ, ಬಿಸಿಲು ಎನ್ನದೇ ಅಡುಗೆ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಅವರ ಐದು ತಿಂಗಳ ವೇತನ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದರು ಎಲ್ಲ ಸಿಬ್ಬಂದಿಯೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಾಪಂ ಇಒ ಹಂಪಣ್ಣ ವೈ.ಎಲ್.ಗೆ ಸಲ್ಲಿಸಲಾಯಿತು. ತಾಪಂ ಸಿಬ್ಬಂದಿ ನಾಗೇಂದ್ರಪ್ಪ ಸುಲೇಪೇಟ, ಲಕ್ಷ್ಮಣ ರಾಠೊಡ, ವಿಜಯಕುಮಾರ ದಸ್ತಾಪುರ ಇನ್ನಿತರರಿದ್ದರು. ಪ್ರತಿಭಟನೆಯಲ್ಲಿ ಸಿಬ್ಬಂದಿಗಳಾದ ಮಾಪಣ್ಣ, ಜಗನ್ನಾಥ, ಶಾಂತಮ್ಮ ಕಾಮಾಕ್ಷಿ, ಆರತಿ, ಸೈದಾಬಿ, ಮಲಕಮ್ಮ, ಶಾಂತಿಬಾಯಿ, ಸೊನಿಬಾಯಿ, ರೋಹಿತಬಾಯಿ, ಧರ್ಮಿಬಾಯಿ, ಮುಖಂಡರಾದ ರವಿಶಂಕರರೆಡ್ಡಿ ಮುತ್ತಂಗಿ, ಸುರೇಂದ್ರ ಶಿವರೆಡ್ಡಿಪಳ್ಳಿ, ವಿಷ್ಣು ಮೂಲಗೆ ಇನ್ನಿತರಿರದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.