ಸೌಲಭ್ಯ ಕೊರತೆ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Feb 15, 2017, 2:59 PM IST
ಕಲಬುರಗಿ: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅನೇಕ ಮೂಲಭೂತ ಸಮಸ್ಯೆಗಳಿದ್ದು, ಅವುಗಳನ್ನು ನಿವಾರಿಸುವಂತೆ ಆಗ್ರಹಿಸ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಐಎಂಎಸ್ಎಸ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕಾಲೇಜು 2007-08ರಲ್ಲಿ ಆರಂಭವಾಗಿದೆ. ಸ್ನಾತಕ ಹಾಗೂ ಸ್ನಾತಕೋತ್ತರ ಸೇರಿ 21 ವಿಷಯಗಳಿಗೆ ಇಲ್ಲಿ ಪ್ರವೇಶಾವಕಾಶವಿದೆ. ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿನಿಯರು ಉನ್ನತ ವ್ಯಾಸಂಗಕ್ಕಾಗಿ ಬರುತ್ತಿದ್ದು, ಅವರಿಗೆ ಕಾಲೇಜನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದ್ದು ನಿವಾರಿಸಬೇಕು ಎಂದು ಆಗ್ರಹಿಸಿದರು.
ಕಾಲೇಜಿಗೆ ಸೂಕ್ತ ಕಟ್ಟಡವಿಲ್ಲ. ಬೋಧಕರ ಕೊರತೆಯಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ. ಗ್ರಂಥಾಲಯ, ಪ್ರಯೋಗಾಲಯ ಸೌಲಭ್ಯವಿಲ್ಲ. ಶುದ್ಧ ಕುಡಿಯುವ ನೀರು, ಶೌಚಾಲಯ ದುರ್ಲಭವಾಗಿವೆ. ಕೂಡಲೇ ಕಾಲೇಜಿಗೆ ಅಗತ್ಯಕ್ಕನುಗುಣವಾಗಿ ಕೊಠಡಿ ನಿರ್ಮಿಸಬೇಕು.
ಭದ್ರತಾ ಗೋಡೆ ಕಟ್ಟಬೇಕು. ಸಮರ್ಪಕ ಹಾಗೂ ಸುಸಜ್ಜಿತ ಗ್ರಂಥಾಲಯ ಸೌಲಭ್ಯ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರು, ಸಮರ್ಪಕ ಶೌಚಾಲಯಗಳು, ವಿಶ್ರಾಂತಿ ಕಟ್ಟಡದೊಂದಿಗೆ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆಗಾಗಿ ಉಚಿತ ಕರಾಟೆ ತರಬೇತಿ ನೀಡುವಂತೆ ಒತ್ತಾಯಿಸಿದರು.
ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ಡಾ| ಸೀಮಾ ದೇಶಪಾಂಡೆ, ವಿ. ನಾಗಮ್ಮಾಳ ಸೇರಿದಂತೆ ಕಾಲೇಜನ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.